Advertisement
ಸುದ್ದಿಗಳು

ವಿದ್ಯುತ್ ಬೆಲೆ ಏರಿಕೆ ಗಾಯದ ಮೇಲೆ ಉಪ್ಪು ಸುರಿದಂತೆ – ಬಿ. ಕೆ ಇಮ್ತಿಯಾಜ್

Share

ಕೊರೋನಾ ಸಂಕಷ್ಟದಿಂದ ಹೊರ ಬರಲಾಗದ ಜನರಿಗೆ ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಮತ್ತು ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ತತ್ತರಿಸುತ್ತಿರುವಾಗಲೇ ರಾಜ್ಯ ಸರಕಾರ ವಿದ್ಯುತ್ ಬೆಲೆ ಏರಿಕೆ ಮಾಡಿರುವುದು ಗಾಯದ ಮೇಲೆ ಉಪ್ಪು ಸುರಿದಂತಾಗಿದೆ ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಎಂದು ಆರೋಪಿಸಿದರು.

ಅವರು ಸೋಮವಾರ ಮಂಗಳೂರು ನಗರದ ಬಿಜೈ ಬಳಿ ಇರುವ ಮೆಸ್ಕಾಂ ಕೇಂದ್ರ ಕಚೇರಿ ಎದುರು ಡಿವೈಎಫ್ಐ, ಎಸ್ಎಫ್ಐ ಮತ್ತು ಜೆಎಂಎಸ್ ಸಂಘಟನೆಗಳ ಜಂಟಿ ಸಹಭಾಗಿತ್ವದಲ್ಲಿ ವಿದ್ಯುತ್ ದರ ಏರಿಕೆ ವಿರೋಧಿಸಿ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದು ಹೋಗಿದೆ ಜನಸಾಮಾನ್ಯರ ನೈಜ ಸಮಸ್ಯೆಗಳ ಪರಿಹಾರ ಮಾಡದೆ ಜಾತಿ ಧರ್ಮದ ಹೆಸರಲ್ಲಿ ಗಲಾಟೆ ಹಚ್ಚಲು ಪ್ರಚೋದನೆ ಕೊಡುತ್ತಿದೆ. ಜನರನ್ನು ಭಾವನಾತ್ಮಕವಾಗಿ ವಿಂಗಡಿಸಿ ಜನರ ಬದುಕನ್ನು ನರಕಕ್ಕೆ ತಳ್ಳುತ್ತಿದೆ ಎಂದು ಅವರು ಟೀಕಿಸಿದರು.

ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ, ರಾಜ್ಯ ಸರಕಾರ ಪ್ರತಿ ಯುನಿಟಿಗೆ 0.50ಪೈಸೆಯಷ್ಟು ಏರಿಸಿದೆ. ಮೆಸ್ಕಾಂ ಇಲಾಖೆ ಈ ಹಿಂದೆ ಫೆಬ್ರವರಿಯಲ್ಲಿ 2021-22 ಅವಧಿಯ ಆರ್ಥಿಕ ವರುಷದಲ್ಲಿ 943 ಕೋಟಿ ಆದಾಯ ಕೊರತೆ ನೀಗಿಸಲು 1.67 ರೂ ಸುಂಕವನ್ನು ಏರಿಕೆ ಮಾಡಿತ್ತು. ಈಗ ಮತ್ತೆ ರಾಜ್ಯದಲ್ಲಿ ಏರಿಕೆ ಮಾಡಲಾಗುತ್ತಿದೆ ಇದು ತೀರಾ ಅನ್ಯಾಯ. ಮೆಸ್ಕಾಂ ರಾಜ್ಯದಲ್ಲೇ ಅತ್ಯಧಿಕ ಲಾಭಧಾಯಕ ಸಂಸ್ಥೆ ಆಗಿದ್ದರೂ ಈ ಇಲಾಖೆಯಲ್ಲಿರುವ 4035 ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಸಲು ಇಂಧನ ಸಚಿವ ಸುನಿಲ್ ಕುಮಾರ್ ವಿಫಲರಾಗಿದ್ದಾರೆ. ದ.ಕ ಜಿಲ್ಲೆಯೊಂದರಲ್ಲೇ 1424 ಹುದ್ದೆ ಖಾಲಿ ಬಿದ್ದಿದೆ ಎಂದರು.

ಜನವಾದಿ ಮಹಿಳಾ ಸಂಘಟನೆ ಜಿಲ್ಲಾಧ್ಯಕ್ಷೆ ಭಾರತಿ ಬೋಳಾರ ಮಾತನಾಡಿದರು. ಡಿವೈಎಫ್ಐ ಮುಖಂಡರಾದ ಮನೋಜ್ ವಾಮಂಜೂರ್, ಸುನಿಲ್ ತೇವುಲ, ರಫೀಕ್ ಹರೇಕಳ, ರಜಾಕ್ ಮುಡಿಪು, ಹನೀಫ್ ಬೆಂಗರೆ, ತಯ್ಯೋಬ್ ಬೆಂಗ್ರೆ, ಸಲೀಮ್ ಶಾಡೋ, ಜಗದೀಶ್ ಬಜಾಲ್, ಜಯಲಕ್ಷ್ಮೀ, ಅಸುಂತಾ ಡಿಸೋಜ, ಪ್ರಮಿಳಾ ದೇವಾಡಿಗ, ವಿದ್ಯಾರ್ಥಿ ಮುಖಂಡರಾದ ವಿನತ್, ಮಾಧುರಿ ಬೇಳಾರ ಮುಂತಾದವರು ಉಪಸ್ಥಿತರಿದ್ದರು. ನವೀನ್ ಕೊಂಚಾಡಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರೆ, ನಿತಿನ್ ಕುತ್ತಾರ್ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

12 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

19 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

3 days ago