Advertisement
ಸುದ್ದಿಗಳು

ವಿದ್ಯುತ್ ಬೆಲೆ ಏರಿಕೆ ಗಾಯದ ಮೇಲೆ ಉಪ್ಪು ಸುರಿದಂತೆ – ಬಿ. ಕೆ ಇಮ್ತಿಯಾಜ್

Share

ಕೊರೋನಾ ಸಂಕಷ್ಟದಿಂದ ಹೊರ ಬರಲಾಗದ ಜನರಿಗೆ ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಮತ್ತು ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ತತ್ತರಿಸುತ್ತಿರುವಾಗಲೇ ರಾಜ್ಯ ಸರಕಾರ ವಿದ್ಯುತ್ ಬೆಲೆ ಏರಿಕೆ ಮಾಡಿರುವುದು ಗಾಯದ ಮೇಲೆ ಉಪ್ಪು ಸುರಿದಂತಾಗಿದೆ ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಎಂದು ಆರೋಪಿಸಿದರು.

ಅವರು ಸೋಮವಾರ ಮಂಗಳೂರು ನಗರದ ಬಿಜೈ ಬಳಿ ಇರುವ ಮೆಸ್ಕಾಂ ಕೇಂದ್ರ ಕಚೇರಿ ಎದುರು ಡಿವೈಎಫ್ಐ, ಎಸ್ಎಫ್ಐ ಮತ್ತು ಜೆಎಂಎಸ್ ಸಂಘಟನೆಗಳ ಜಂಟಿ ಸಹಭಾಗಿತ್ವದಲ್ಲಿ ವಿದ್ಯುತ್ ದರ ಏರಿಕೆ ವಿರೋಧಿಸಿ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದು ಹೋಗಿದೆ ಜನಸಾಮಾನ್ಯರ ನೈಜ ಸಮಸ್ಯೆಗಳ ಪರಿಹಾರ ಮಾಡದೆ ಜಾತಿ ಧರ್ಮದ ಹೆಸರಲ್ಲಿ ಗಲಾಟೆ ಹಚ್ಚಲು ಪ್ರಚೋದನೆ ಕೊಡುತ್ತಿದೆ. ಜನರನ್ನು ಭಾವನಾತ್ಮಕವಾಗಿ ವಿಂಗಡಿಸಿ ಜನರ ಬದುಕನ್ನು ನರಕಕ್ಕೆ ತಳ್ಳುತ್ತಿದೆ ಎಂದು ಅವರು ಟೀಕಿಸಿದರು.

ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ, ರಾಜ್ಯ ಸರಕಾರ ಪ್ರತಿ ಯುನಿಟಿಗೆ 0.50ಪೈಸೆಯಷ್ಟು ಏರಿಸಿದೆ. ಮೆಸ್ಕಾಂ ಇಲಾಖೆ ಈ ಹಿಂದೆ ಫೆಬ್ರವರಿಯಲ್ಲಿ 2021-22 ಅವಧಿಯ ಆರ್ಥಿಕ ವರುಷದಲ್ಲಿ 943 ಕೋಟಿ ಆದಾಯ ಕೊರತೆ ನೀಗಿಸಲು 1.67 ರೂ ಸುಂಕವನ್ನು ಏರಿಕೆ ಮಾಡಿತ್ತು. ಈಗ ಮತ್ತೆ ರಾಜ್ಯದಲ್ಲಿ ಏರಿಕೆ ಮಾಡಲಾಗುತ್ತಿದೆ ಇದು ತೀರಾ ಅನ್ಯಾಯ. ಮೆಸ್ಕಾಂ ರಾಜ್ಯದಲ್ಲೇ ಅತ್ಯಧಿಕ ಲಾಭಧಾಯಕ ಸಂಸ್ಥೆ ಆಗಿದ್ದರೂ ಈ ಇಲಾಖೆಯಲ್ಲಿರುವ 4035 ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಸಲು ಇಂಧನ ಸಚಿವ ಸುನಿಲ್ ಕುಮಾರ್ ವಿಫಲರಾಗಿದ್ದಾರೆ. ದ.ಕ ಜಿಲ್ಲೆಯೊಂದರಲ್ಲೇ 1424 ಹುದ್ದೆ ಖಾಲಿ ಬಿದ್ದಿದೆ ಎಂದರು.

ಜನವಾದಿ ಮಹಿಳಾ ಸಂಘಟನೆ ಜಿಲ್ಲಾಧ್ಯಕ್ಷೆ ಭಾರತಿ ಬೋಳಾರ ಮಾತನಾಡಿದರು. ಡಿವೈಎಫ್ಐ ಮುಖಂಡರಾದ ಮನೋಜ್ ವಾಮಂಜೂರ್, ಸುನಿಲ್ ತೇವುಲ, ರಫೀಕ್ ಹರೇಕಳ, ರಜಾಕ್ ಮುಡಿಪು, ಹನೀಫ್ ಬೆಂಗರೆ, ತಯ್ಯೋಬ್ ಬೆಂಗ್ರೆ, ಸಲೀಮ್ ಶಾಡೋ, ಜಗದೀಶ್ ಬಜಾಲ್, ಜಯಲಕ್ಷ್ಮೀ, ಅಸುಂತಾ ಡಿಸೋಜ, ಪ್ರಮಿಳಾ ದೇವಾಡಿಗ, ವಿದ್ಯಾರ್ಥಿ ಮುಖಂಡರಾದ ವಿನತ್, ಮಾಧುರಿ ಬೇಳಾರ ಮುಂತಾದವರು ಉಪಸ್ಥಿತರಿದ್ದರು. ನವೀನ್ ಕೊಂಚಾಡಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರೆ, ನಿತಿನ್ ಕುತ್ತಾರ್ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

12 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

15 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

21 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

1 day ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

1 day ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

1 day ago