Advertisement
MIRROR FOCUS

ಗೃಹಜ್ಯೋತಿ ಇದ್ದರೂ ರಾಜ್ಯದ ಜನತೆಗೆ ವಿದ್ಯುತ್‌ ಶಾಕ್…! | ಇಂದು ವಿದ್ಯುತ್‌ ದರ ಪರಿಷ್ಕರಣೆ ಪ್ರಕಟ ಸಾಧ್ಯತೆ |

Share

ಕಾಂಗ್ರೆಸ್‌ ಸರ್ಕಾರದ(Congress Govt) ಉಚಿತ ವಿದ್ಯುತ್‌ ಯೋಜನೆ ಗೃಹಜ್ಯೋತಿ((Gruha Jyothi Scheme) ಇದೆ ಎಂದು ವಿದ್ಯುತ್‌ ಬಿಲ್‌(Electricity Price) ಕಡಿಮೆ ಬರುತ್ತಿದೆ ಎಂದು ಬೀಗುತ್ತಿರುವ ಜನತೆಗೆ ರಾಜ್ಯ ಸರ್ಕಾರ, ವಿದ್ಯುತ್‌ ಶಾಕ್‌ ನೀಡಲು ಮುಂದಾಗಿದೆ. ಲೋಕಸಭಾ ಚುನಾವಣೆ (LokSabha Elections) ಹಿನ್ನೆಲೆಯಲ್ಲಿ ಈ ಬಾರಿ ಅವಧಿಗೆ ಮುಂಚಿತವಾಗಿಯೇ ವಿದ್ಯುತ್‌ ದರ ಪರಿಷ್ಕರಣೆ ಮಾಡಲು ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗ ಮುಂದಾಗಿದೆ. ಇಂದು  ಸಂಜೆಯೇ ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗ (KERC) ವಿದ್ಯುತ್‌ ದರ ಪರಿಷ್ಕರಣೆ ಪ್ರಕಟಿಸಲಿದೆ ಎಂದು ಹೇಳಲಾಗಿದೆ.

Advertisement
Advertisement

ಪ್ರತಿ ವರ್ಷ ಏಪ್ರಿಲ್‌ನಲ್ಲಿ ವಿದ್ಯುತ್‌ ದರ ಪರಿಷ್ಕರಣೆಯಾಗುತ್ತಿತ್ತು. ಆದ್ರೆ ಈ ಬಾರಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅವಧಿಗೆ ಮುಂಚಿತವಾಗಿಯೇ ವಿದ್ಯುತ್‌ ದರ ಪರಿಷ್ಕರಣೆಯಾಗಲಿದೆ. ಬುಧವಾರ ಪರಿಷ್ಕೃತ ದರ ಪ್ರಕಟವಾದರೂ ಏಪ್ರಿಲ್‌ನಿಂದ ಅನ್ವಯವಾಗಲಿದೆ. ಗೃಹಜ್ಯೋತಿ  ನಡುವೆಯೂ ವಿದ್ಯುತ್‌ ದರ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಕಳೆದ ವರ್ಷ ಆಗಸ್ಟ್‌ 5ರಂದು ಗೃಹಜ್ಯೋತಿ ಯೋಜನೆಗೆ ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿತ್ತು. ವಿದ್ಯುತ್‌ ಪೂರೈಕೆಗಾಗಿ ಬೆಸ್ಕಾಂ 235.07 ಮೆಸ್ಕಾಂ 52.73, ಹೆಸ್ಕಾಂ 82.02, ಜೆಸ್ಕಾಂ 53.46, ಚೆಸ್ಕಾಂ 51.26, ಹುಕ್ಕೇರಿ 1.46 ಕೋಟಿ ರೂ. ಸಹಾಯಧನ ಬಿಡುಗಡೆ ಮಾಡಿತ್ತು.

ಗೃಹಜ್ಯೋತಿಗೆ ಇರುವ ಷರತ್ತುಗಳೇನು?: ಗೃಹಜ್ಯೋತಿ ಯೋಜನೆಗೆ ವಾರ್ಷಿಕ ಸರಾಸರಿ ಮಾನದಂಡವಿದೆ. 12 ತಿಂಗಳ ಸರಾಸರಿ ಪಡೆದುಕೊಂಡು ಅದರ ಮೇಲೆ 10% ರಷ್ಟು ವಿದ್ಯುತ್‌ ಉಚಿತವಾಗಿ ನೀಡಲಾಗುವುದು. ಯಾರು ಎಷ್ಟು ವಿದ್ಯುತ್ ಬಳಸುತ್ತಾರೆ ಎಂಬುದನ್ನು 12 ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧರಿಸಿ, ಅದರ ಮೇಲೆ 10% ರಷ್ಟು ವಿದ್ಯುತ್ ಉಚಿತವಾಗಿ ಕೊಡಲಾಗುವುದು. ಉದಾಹರಣೆಗೆ, 70 ಯೂನಿಟ್‌ ಬಳಸುವವರು ಅದಕ್ಕೆ 10% (ಅಂದರೆ ಒಟ್ಟು 80%) ಬಳಕೆ ಮಾಡಬಹುದು. ಕಳೆದ ವರ್ಷ ಸರಾಸರಿ ತಿಂಗಳಿಗೆ 100 ಯೂನಿಟ್ ಬಳಸಿದ್ದವರು ಈಗ 110 ಯೂನಿಟ್ ಬಳಸಿದ್ರೆ ವಿದ್ಯುತ್ ಉಚಿತವಾಗಿ ಸಿಗುತ್ತದೆ. ಒಂದು ವೇಳೆ 110ಕ್ಕಿಂತ ಹೆಚ್ಚು ಯೂನಿಟ್ ಬಳಸಿದ್ರೆ ಹೆಚ್ಚುವರಿ ಯೂನಿಟ್‌ಗೆ ಬಿಲ್ ಕಟ್ಟಬೇಕು. ಹೀಗೆ 200 ಯೂನಿಟ್‌ ವರೆಗೆ ವಿದ್ಯುತ್‌ ಬಳಸುವವರು ಬಿಲ್‌ ಕಟ್ಟುವಂತಿಲ್ಲ. 200 ಯೂನಿಟ್‌ ಉಚಿತ ಅಂತ ಎಲ್ಲರೂ ಬೇಕಾಬಿಟ್ಟಿ ವಿದ್ಯುತ್‌ ಬಳಸುವಂತಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.

– ಅಂತರ್ಜಾಲ ಮಾಹಿತಿ

In the background of Lok Sabha Elections, the Karnataka Electricity Regulatory Commission has come forward to revise the electricity rates ahead of schedule this time. It is said that the Karnataka Electricity Regulatory Commission (KERC) will announce the electricity tariff revision this evening itself.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

22 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

23 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

23 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

23 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

23 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

23 hours ago