MIRROR FOCUS

ಗೃಹಜ್ಯೋತಿ ಇದ್ದರೂ ರಾಜ್ಯದ ಜನತೆಗೆ ವಿದ್ಯುತ್‌ ಶಾಕ್…! | ಇಂದು ವಿದ್ಯುತ್‌ ದರ ಪರಿಷ್ಕರಣೆ ಪ್ರಕಟ ಸಾಧ್ಯತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಾಂಗ್ರೆಸ್‌ ಸರ್ಕಾರದ(Congress Govt) ಉಚಿತ ವಿದ್ಯುತ್‌ ಯೋಜನೆ ಗೃಹಜ್ಯೋತಿ((Gruha Jyothi Scheme) ಇದೆ ಎಂದು ವಿದ್ಯುತ್‌ ಬಿಲ್‌(Electricity Price) ಕಡಿಮೆ ಬರುತ್ತಿದೆ ಎಂದು ಬೀಗುತ್ತಿರುವ ಜನತೆಗೆ ರಾಜ್ಯ ಸರ್ಕಾರ, ವಿದ್ಯುತ್‌ ಶಾಕ್‌ ನೀಡಲು ಮುಂದಾಗಿದೆ. ಲೋಕಸಭಾ ಚುನಾವಣೆ (LokSabha Elections) ಹಿನ್ನೆಲೆಯಲ್ಲಿ ಈ ಬಾರಿ ಅವಧಿಗೆ ಮುಂಚಿತವಾಗಿಯೇ ವಿದ್ಯುತ್‌ ದರ ಪರಿಷ್ಕರಣೆ ಮಾಡಲು ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗ ಮುಂದಾಗಿದೆ. ಇಂದು  ಸಂಜೆಯೇ ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗ (KERC) ವಿದ್ಯುತ್‌ ದರ ಪರಿಷ್ಕರಣೆ ಪ್ರಕಟಿಸಲಿದೆ ಎಂದು ಹೇಳಲಾಗಿದೆ.

Advertisement
Advertisement

ಪ್ರತಿ ವರ್ಷ ಏಪ್ರಿಲ್‌ನಲ್ಲಿ ವಿದ್ಯುತ್‌ ದರ ಪರಿಷ್ಕರಣೆಯಾಗುತ್ತಿತ್ತು. ಆದ್ರೆ ಈ ಬಾರಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅವಧಿಗೆ ಮುಂಚಿತವಾಗಿಯೇ ವಿದ್ಯುತ್‌ ದರ ಪರಿಷ್ಕರಣೆಯಾಗಲಿದೆ. ಬುಧವಾರ ಪರಿಷ್ಕೃತ ದರ ಪ್ರಕಟವಾದರೂ ಏಪ್ರಿಲ್‌ನಿಂದ ಅನ್ವಯವಾಗಲಿದೆ. ಗೃಹಜ್ಯೋತಿ  ನಡುವೆಯೂ ವಿದ್ಯುತ್‌ ದರ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಕಳೆದ ವರ್ಷ ಆಗಸ್ಟ್‌ 5ರಂದು ಗೃಹಜ್ಯೋತಿ ಯೋಜನೆಗೆ ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿತ್ತು. ವಿದ್ಯುತ್‌ ಪೂರೈಕೆಗಾಗಿ ಬೆಸ್ಕಾಂ 235.07 ಮೆಸ್ಕಾಂ 52.73, ಹೆಸ್ಕಾಂ 82.02, ಜೆಸ್ಕಾಂ 53.46, ಚೆಸ್ಕಾಂ 51.26, ಹುಕ್ಕೇರಿ 1.46 ಕೋಟಿ ರೂ. ಸಹಾಯಧನ ಬಿಡುಗಡೆ ಮಾಡಿತ್ತು.

ಗೃಹಜ್ಯೋತಿಗೆ ಇರುವ ಷರತ್ತುಗಳೇನು?: ಗೃಹಜ್ಯೋತಿ ಯೋಜನೆಗೆ ವಾರ್ಷಿಕ ಸರಾಸರಿ ಮಾನದಂಡವಿದೆ. 12 ತಿಂಗಳ ಸರಾಸರಿ ಪಡೆದುಕೊಂಡು ಅದರ ಮೇಲೆ 10% ರಷ್ಟು ವಿದ್ಯುತ್‌ ಉಚಿತವಾಗಿ ನೀಡಲಾಗುವುದು. ಯಾರು ಎಷ್ಟು ವಿದ್ಯುತ್ ಬಳಸುತ್ತಾರೆ ಎಂಬುದನ್ನು 12 ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧರಿಸಿ, ಅದರ ಮೇಲೆ 10% ರಷ್ಟು ವಿದ್ಯುತ್ ಉಚಿತವಾಗಿ ಕೊಡಲಾಗುವುದು. ಉದಾಹರಣೆಗೆ, 70 ಯೂನಿಟ್‌ ಬಳಸುವವರು ಅದಕ್ಕೆ 10% (ಅಂದರೆ ಒಟ್ಟು 80%) ಬಳಕೆ ಮಾಡಬಹುದು. ಕಳೆದ ವರ್ಷ ಸರಾಸರಿ ತಿಂಗಳಿಗೆ 100 ಯೂನಿಟ್ ಬಳಸಿದ್ದವರು ಈಗ 110 ಯೂನಿಟ್ ಬಳಸಿದ್ರೆ ವಿದ್ಯುತ್ ಉಚಿತವಾಗಿ ಸಿಗುತ್ತದೆ. ಒಂದು ವೇಳೆ 110ಕ್ಕಿಂತ ಹೆಚ್ಚು ಯೂನಿಟ್ ಬಳಸಿದ್ರೆ ಹೆಚ್ಚುವರಿ ಯೂನಿಟ್‌ಗೆ ಬಿಲ್ ಕಟ್ಟಬೇಕು. ಹೀಗೆ 200 ಯೂನಿಟ್‌ ವರೆಗೆ ವಿದ್ಯುತ್‌ ಬಳಸುವವರು ಬಿಲ್‌ ಕಟ್ಟುವಂತಿಲ್ಲ. 200 ಯೂನಿಟ್‌ ಉಚಿತ ಅಂತ ಎಲ್ಲರೂ ಬೇಕಾಬಿಟ್ಟಿ ವಿದ್ಯುತ್‌ ಬಳಸುವಂತಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.

– ಅಂತರ್ಜಾಲ ಮಾಹಿತಿ

Advertisement

In the background of Lok Sabha Elections, the Karnataka Electricity Regulatory Commission has come forward to revise the electricity rates ahead of schedule this time. It is said that the Karnataka Electricity Regulatory Commission (KERC) will announce the electricity tariff revision this evening itself.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

12 hours ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

21 hours ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

22 hours ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

22 hours ago

ಮಲೆನಾಡು-ಕರಾವಳಿ ಜಿಲ್ಲೆಯಲ್ಲಿ ಇಂದೂ ಮಳೆ | ರೆಡ್ ಎಲರ್ಟ್

ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು  ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…

1 day ago

ಮತ್ತದೇ ಬೇಸರ ಕಳೆಯಲು ಈ ಹಿತವಾದ ಮಳೆ | ಹಾಡಷ್ಟೇ ಅಲ್ಲ, ಈ ಅಭಿನಯ ನೋಡಲೇಬೇಕು…

ಮುಂಗಾರು ಮಳೆ ಆರಂಭವಾಯಿತು. ಈ ಬಾರಿ ನಿರೀಕ್ಷೆಗೂ ಮುನ್ನವೇ ಮುಂಗಾರು ಬಂದಿದೆ. ಮುಂಗಾರು…

1 day ago