2021 ರಲ್ಲಿ ಭಾರತದಾದ್ಯಂತ ಬೇಟೆಗಾರರಿಗೆ ಸುಮಾರು 49 ಆನೆಗಳನ್ನು ಬಲಿಯಾಗಿವೆ. ಈ ಸಂಬಂಧ ಕಾನೂನು ಜಾರಿ ಸಂಸ್ಥೆಗಳು 77 ಆರೋಪಿಗಳನ್ನು ಬಂಧಿಸಿದೆ ಎಂದು ಕೇಂದ್ರ ಸರ್ಕಾರದ ಏಜೆನ್ಸಿ ತಿಳಿಸಿದೆ.
ದೇಶದಲ್ಲಿ ಆನೆಗಳ ಸಹಿತ ಕಾಡುಪ್ರಾಣಿಗಳ ಬೇಟೆಯಾಡುವ ಪರಿಸ್ಥಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ನೋಯ್ಡಾ ಮೂಲದ ಸಾಮಾಜಿಕ ಮತ್ತು ಪ್ರಾಣಿ ಹಕ್ಕುಗಳ ಕಾರ್ಯಕರ್ತ ರಂಜನೆ ತೋಮರ್ ಅವರು ತಮ್ಮ ನೈಸರ್ಗಿಕ ಆವಾಸ ಸ್ಥಾನದಲ್ಲಿ ಆನೆಗಳ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಡಬ್ಲ್ಯುಸಿಸಿಬಿ ಯಿಂದ ಮಾಹಿತಿಯನ್ನು ಪಡೆದಿದ್ದರು.
ಪರಿಸರ, ಅರಣ್ಯ ಮತ್ತು ಹವಮಾನ ಬದಲಾವಣೆ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಡಬ್ಲ್ಯುಸಿಸಿವಿ ಅಥವಾ ವನ್ಯಜೀವಿ ಅಪರಾಧ ನಿಯಂತ್ರಣ ಬ್ಯೂರೋ ಆರ್ಟಿಐ ಮೂಲಕ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಅಸ್ಸಾಂ 9, ಪಶ್ಚಿಮ ಬಂಗಾಳ, ಒಡಿಶಾ ಮತ್ತು ತಮಿಳುನಾಡು ತಲಾ 8, ಕರ್ನಾಟಕ ಮತ್ತು ಉತ್ತರಾಖಂಡ ತಲಾ 3 ರಂತೆ ಕೇರಳ ಮತ್ತು ಅರುಣಾಚಲ ಪ್ರದೇಶಗಳಲ್ಲಿ ಎರಡು ಆನೆ ಹತ್ಯೆಯ ಪ್ರಕರಣಗಳನ್ನು ದಾಖಲಿಸಿದರೆ, ರಾಜಸ್ಥಾನ, ಹಿಮಾಚಲ ಪ್ರದೇಶ, ಬಿಹಾರ, ಮೇಘಾಲಯ, ಛತ್ತಿಸ್ಗಢ, ಮಹಾರಾಷ್ಟ್ರ ತಲಾ ಒಂದು ಆನೆ ಹತ್ಯೆಗೊಳಗಾಗಿದೆ ಎಂದು ವರದಿ ತಿಳಿಸಿದೆ.
ಆನೆಗಳನ್ನು ಹತ್ಯೆಯನ್ನು ಮಾಡಿದ ಪ್ರಕರಣದಲ್ಲಿ ತಮಿಳುನಾಡಿನಲ್ಲಿ ಗರಿಷ್ಠ 17 ಜನರನ್ನು ಬಂಧಿಸಲಾಗಿದ್ದು, ಅಸ್ಸಾಂನಲ್ಲಿ 15, ಒಡಿಶಾದಲ್ಲಿ 13 ಹಾಗೂ ಪಶ್ಚಿಮ ಬಂಗಾಳದಲ್ಲಿ 11 ಜನರನ್ನು ಬಂಧಿಸಲಾಗಿದೆ. ಮಾತ್ರವಲ್ಲದೆ, ಕೇರಳದಲ್ಲಿ ಐವರು ಉತ್ತರಾಖಂಡ ಮತ್ತು ಬಿಹಾರದಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
19.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಯಾವುದೇ ಬದಲಾವಣೆ ಆಗಬೇಕಾದರೆ ವ್ಯಕ್ತಿಯ ಒಳಗೆ ಬದಲಾವಣೆ ಆರಂಭವಾಗಬೇಕು. ಮನಸ್ಸಿನಲ್ಲಿ ಪಾಸಿಟಿವ್ ಬದಲಾವಣೆಯ…
ಈ ಬಾರಿ ಮುಂಗಾರು ಮಳೆಯಲ್ಲಿ ಸರಾಸರಿ 105% ರಷ್ಟು ಮಳೆಯಾಗುವ ಸಾಧ್ಯತೆ ಇದೆ.…
ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆ ಕಾಪಾಡುವುದು ಸ್ಥಳೀಯ ಆಡಳಿತಕ್ಕೆ ಎಷ್ಟು ಮುಖ್ಯವೋ ಅಲ್ಲಿಗೆ ಭೇಟಿ…
ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ನಡುವೆ…
ಜಾನುವಾರುಗಳ ಕಾಲುಬಾಯಿ ರೋಗ ನಿಯಂತ್ರಣಕ್ಕಾಗಿ 7 ನೇ ಸುತ್ತಿನ ಲಸಿಕಾ ಅಭಿಯಾನವನ್ನು ರಾಜ್ಯಾದ್ಯಂತ…