Advertisement
ರಾಷ್ಟ್ರೀಯ

2021 ರಲ್ಲಿ ಬೇಟೆಗಾರರಿಗೆ ಬಲಿಯಾದ 49 ಆನೆಗಳು | 77 ಆರೋಪಿಗಳನ್ನು ಬಂಧನ |

Share

2021 ರಲ್ಲಿ ಭಾರತದಾದ್ಯಂತ ಬೇಟೆಗಾರರಿಗೆ  ಸುಮಾರು 49 ಆನೆಗಳನ್ನು ಬಲಿಯಾಗಿವೆ. ಈ ಸಂಬಂಧ  ಕಾನೂನು ಜಾರಿ ಸಂಸ್ಥೆಗಳು 77 ಆರೋಪಿಗಳನ್ನು ಬಂಧಿಸಿದೆ ಎಂದು ಕೇಂದ್ರ ಸರ್ಕಾರದ ಏಜೆನ್ಸಿ ತಿಳಿಸಿದೆ.

ದೇಶದಲ್ಲಿ ಆನೆಗಳ ಸಹಿತ ಕಾಡುಪ್ರಾಣಿಗಳ  ಬೇಟೆಯಾಡುವ ಪರಿಸ್ಥಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ನೋಯ್ಡಾ ಮೂಲದ ಸಾಮಾಜಿಕ ಮತ್ತು ಪ್ರಾಣಿ ಹಕ್ಕುಗಳ ಕಾರ್ಯಕರ್ತ ರಂಜನೆ ತೋಮರ್ ಅವರು ತಮ್ಮ ನೈಸರ್ಗಿಕ ಆವಾಸ ಸ್ಥಾನದಲ್ಲಿ ಆನೆಗಳ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಡಬ್ಲ್ಯುಸಿಸಿಬಿ ಯಿಂದ ಮಾಹಿತಿಯನ್ನು ಪಡೆದಿದ್ದರು.

ಪರಿಸರ, ಅರಣ್ಯ ಮತ್ತು ಹವಮಾನ ಬದಲಾವಣೆ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಡಬ್ಲ್ಯುಸಿಸಿವಿ ಅಥವಾ ವನ್ಯಜೀವಿ ಅಪರಾಧ ನಿಯಂತ್ರಣ ಬ್ಯೂರೋ ಆರ್‌ಟಿಐ ಮೂಲಕ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ  ಅಸ್ಸಾಂ 9, ಪಶ್ಚಿಮ ಬಂಗಾಳ, ಒಡಿಶಾ ಮತ್ತು ತಮಿಳುನಾಡು ತಲಾ 8, ಕರ್ನಾಟಕ ಮತ್ತು ಉತ್ತರಾಖಂಡ ತಲಾ 3 ರಂತೆ ಕೇರಳ ಮತ್ತು ಅರುಣಾಚಲ ಪ್ರದೇಶಗಳಲ್ಲಿ ಎರಡು ಆನೆ ಹತ್ಯೆಯ ಪ್ರಕರಣಗಳನ್ನು ದಾಖಲಿಸಿದರೆ, ರಾಜಸ್ಥಾನ, ಹಿಮಾಚಲ ಪ್ರದೇಶ, ಬಿಹಾರ, ಮೇಘಾಲಯ, ಛತ್ತಿಸ್‌ಗಢ, ಮಹಾರಾಷ್ಟ್ರ ತಲಾ ಒಂದು ಆನೆ ಹತ್ಯೆಗೊಳಗಾಗಿದೆ ಎಂದು ವರದಿ ತಿಳಿಸಿದೆ.

ಆನೆಗಳನ್ನು ಹತ್ಯೆಯನ್ನು ಮಾಡಿದ ಪ್ರಕರಣದಲ್ಲಿ ತಮಿಳುನಾಡಿನಲ್ಲಿ ಗರಿಷ್ಠ 17 ಜನರನ್ನು ಬಂಧಿಸಲಾಗಿದ್ದು, ಅಸ್ಸಾಂನಲ್ಲಿ 15, ಒಡಿಶಾದಲ್ಲಿ 13 ಹಾಗೂ ಪಶ್ಚಿಮ ಬಂಗಾಳದಲ್ಲಿ 11 ಜನರನ್ನು ಬಂಧಿಸಲಾಗಿದೆ. ಮಾತ್ರವಲ್ಲದೆ, ಕೇರಳದಲ್ಲಿ ಐವರು ಉತ್ತರಾಖಂಡ ಮತ್ತು ಬಿಹಾರದಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

7 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

13 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

24 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

1 day ago