2021 ರಲ್ಲಿ ಭಾರತದಾದ್ಯಂತ ಬೇಟೆಗಾರರಿಗೆ ಸುಮಾರು 49 ಆನೆಗಳನ್ನು ಬಲಿಯಾಗಿವೆ. ಈ ಸಂಬಂಧ ಕಾನೂನು ಜಾರಿ ಸಂಸ್ಥೆಗಳು 77 ಆರೋಪಿಗಳನ್ನು ಬಂಧಿಸಿದೆ ಎಂದು ಕೇಂದ್ರ ಸರ್ಕಾರದ ಏಜೆನ್ಸಿ ತಿಳಿಸಿದೆ.
ದೇಶದಲ್ಲಿ ಆನೆಗಳ ಸಹಿತ ಕಾಡುಪ್ರಾಣಿಗಳ ಬೇಟೆಯಾಡುವ ಪರಿಸ್ಥಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ನೋಯ್ಡಾ ಮೂಲದ ಸಾಮಾಜಿಕ ಮತ್ತು ಪ್ರಾಣಿ ಹಕ್ಕುಗಳ ಕಾರ್ಯಕರ್ತ ರಂಜನೆ ತೋಮರ್ ಅವರು ತಮ್ಮ ನೈಸರ್ಗಿಕ ಆವಾಸ ಸ್ಥಾನದಲ್ಲಿ ಆನೆಗಳ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಡಬ್ಲ್ಯುಸಿಸಿಬಿ ಯಿಂದ ಮಾಹಿತಿಯನ್ನು ಪಡೆದಿದ್ದರು.
ಪರಿಸರ, ಅರಣ್ಯ ಮತ್ತು ಹವಮಾನ ಬದಲಾವಣೆ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಡಬ್ಲ್ಯುಸಿಸಿವಿ ಅಥವಾ ವನ್ಯಜೀವಿ ಅಪರಾಧ ನಿಯಂತ್ರಣ ಬ್ಯೂರೋ ಆರ್ಟಿಐ ಮೂಲಕ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಅಸ್ಸಾಂ 9, ಪಶ್ಚಿಮ ಬಂಗಾಳ, ಒಡಿಶಾ ಮತ್ತು ತಮಿಳುನಾಡು ತಲಾ 8, ಕರ್ನಾಟಕ ಮತ್ತು ಉತ್ತರಾಖಂಡ ತಲಾ 3 ರಂತೆ ಕೇರಳ ಮತ್ತು ಅರುಣಾಚಲ ಪ್ರದೇಶಗಳಲ್ಲಿ ಎರಡು ಆನೆ ಹತ್ಯೆಯ ಪ್ರಕರಣಗಳನ್ನು ದಾಖಲಿಸಿದರೆ, ರಾಜಸ್ಥಾನ, ಹಿಮಾಚಲ ಪ್ರದೇಶ, ಬಿಹಾರ, ಮೇಘಾಲಯ, ಛತ್ತಿಸ್ಗಢ, ಮಹಾರಾಷ್ಟ್ರ ತಲಾ ಒಂದು ಆನೆ ಹತ್ಯೆಗೊಳಗಾಗಿದೆ ಎಂದು ವರದಿ ತಿಳಿಸಿದೆ.
ಆನೆಗಳನ್ನು ಹತ್ಯೆಯನ್ನು ಮಾಡಿದ ಪ್ರಕರಣದಲ್ಲಿ ತಮಿಳುನಾಡಿನಲ್ಲಿ ಗರಿಷ್ಠ 17 ಜನರನ್ನು ಬಂಧಿಸಲಾಗಿದ್ದು, ಅಸ್ಸಾಂನಲ್ಲಿ 15, ಒಡಿಶಾದಲ್ಲಿ 13 ಹಾಗೂ ಪಶ್ಚಿಮ ಬಂಗಾಳದಲ್ಲಿ 11 ಜನರನ್ನು ಬಂಧಿಸಲಾಗಿದೆ. ಮಾತ್ರವಲ್ಲದೆ, ಕೇರಳದಲ್ಲಿ ಐವರು ಉತ್ತರಾಖಂಡ ಮತ್ತು ಬಿಹಾರದಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಅಡಿಕೆ ಎಲೆ ಚುಕ್ಕೆ ರೋಗವು ಗಾಳಿ ಮತ್ತು ತೇವಾಂಶದಿಂದ ವೇಗವಾಗಿ ಹರಡುತ್ತಿದ್ದು, ತೋಟಗಳಿಗೆ…
ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…
ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…
ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…
NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…