2021 ರಲ್ಲಿ ಭಾರತದಾದ್ಯಂತ ಬೇಟೆಗಾರರಿಗೆ ಸುಮಾರು 49 ಆನೆಗಳನ್ನು ಬಲಿಯಾಗಿವೆ. ಈ ಸಂಬಂಧ ಕಾನೂನು ಜಾರಿ ಸಂಸ್ಥೆಗಳು 77 ಆರೋಪಿಗಳನ್ನು ಬಂಧಿಸಿದೆ ಎಂದು ಕೇಂದ್ರ ಸರ್ಕಾರದ ಏಜೆನ್ಸಿ ತಿಳಿಸಿದೆ.
ದೇಶದಲ್ಲಿ ಆನೆಗಳ ಸಹಿತ ಕಾಡುಪ್ರಾಣಿಗಳ ಬೇಟೆಯಾಡುವ ಪರಿಸ್ಥಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ನೋಯ್ಡಾ ಮೂಲದ ಸಾಮಾಜಿಕ ಮತ್ತು ಪ್ರಾಣಿ ಹಕ್ಕುಗಳ ಕಾರ್ಯಕರ್ತ ರಂಜನೆ ತೋಮರ್ ಅವರು ತಮ್ಮ ನೈಸರ್ಗಿಕ ಆವಾಸ ಸ್ಥಾನದಲ್ಲಿ ಆನೆಗಳ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಡಬ್ಲ್ಯುಸಿಸಿಬಿ ಯಿಂದ ಮಾಹಿತಿಯನ್ನು ಪಡೆದಿದ್ದರು.
ಪರಿಸರ, ಅರಣ್ಯ ಮತ್ತು ಹವಮಾನ ಬದಲಾವಣೆ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಡಬ್ಲ್ಯುಸಿಸಿವಿ ಅಥವಾ ವನ್ಯಜೀವಿ ಅಪರಾಧ ನಿಯಂತ್ರಣ ಬ್ಯೂರೋ ಆರ್ಟಿಐ ಮೂಲಕ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಅಸ್ಸಾಂ 9, ಪಶ್ಚಿಮ ಬಂಗಾಳ, ಒಡಿಶಾ ಮತ್ತು ತಮಿಳುನಾಡು ತಲಾ 8, ಕರ್ನಾಟಕ ಮತ್ತು ಉತ್ತರಾಖಂಡ ತಲಾ 3 ರಂತೆ ಕೇರಳ ಮತ್ತು ಅರುಣಾಚಲ ಪ್ರದೇಶಗಳಲ್ಲಿ ಎರಡು ಆನೆ ಹತ್ಯೆಯ ಪ್ರಕರಣಗಳನ್ನು ದಾಖಲಿಸಿದರೆ, ರಾಜಸ್ಥಾನ, ಹಿಮಾಚಲ ಪ್ರದೇಶ, ಬಿಹಾರ, ಮೇಘಾಲಯ, ಛತ್ತಿಸ್ಗಢ, ಮಹಾರಾಷ್ಟ್ರ ತಲಾ ಒಂದು ಆನೆ ಹತ್ಯೆಗೊಳಗಾಗಿದೆ ಎಂದು ವರದಿ ತಿಳಿಸಿದೆ.
ಆನೆಗಳನ್ನು ಹತ್ಯೆಯನ್ನು ಮಾಡಿದ ಪ್ರಕರಣದಲ್ಲಿ ತಮಿಳುನಾಡಿನಲ್ಲಿ ಗರಿಷ್ಠ 17 ಜನರನ್ನು ಬಂಧಿಸಲಾಗಿದ್ದು, ಅಸ್ಸಾಂನಲ್ಲಿ 15, ಒಡಿಶಾದಲ್ಲಿ 13 ಹಾಗೂ ಪಶ್ಚಿಮ ಬಂಗಾಳದಲ್ಲಿ 11 ಜನರನ್ನು ಬಂಧಿಸಲಾಗಿದೆ. ಮಾತ್ರವಲ್ಲದೆ, ಕೇರಳದಲ್ಲಿ ಐವರು ಉತ್ತರಾಖಂಡ ಮತ್ತು ಬಿಹಾರದಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…