2021 ರಲ್ಲಿ ಭಾರತದಾದ್ಯಂತ ಬೇಟೆಗಾರರಿಗೆ ಸುಮಾರು 49 ಆನೆಗಳನ್ನು ಬಲಿಯಾಗಿವೆ. ಈ ಸಂಬಂಧ ಕಾನೂನು ಜಾರಿ ಸಂಸ್ಥೆಗಳು 77 ಆರೋಪಿಗಳನ್ನು ಬಂಧಿಸಿದೆ ಎಂದು ಕೇಂದ್ರ ಸರ್ಕಾರದ ಏಜೆನ್ಸಿ ತಿಳಿಸಿದೆ.
ದೇಶದಲ್ಲಿ ಆನೆಗಳ ಸಹಿತ ಕಾಡುಪ್ರಾಣಿಗಳ ಬೇಟೆಯಾಡುವ ಪರಿಸ್ಥಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ನೋಯ್ಡಾ ಮೂಲದ ಸಾಮಾಜಿಕ ಮತ್ತು ಪ್ರಾಣಿ ಹಕ್ಕುಗಳ ಕಾರ್ಯಕರ್ತ ರಂಜನೆ ತೋಮರ್ ಅವರು ತಮ್ಮ ನೈಸರ್ಗಿಕ ಆವಾಸ ಸ್ಥಾನದಲ್ಲಿ ಆನೆಗಳ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಡಬ್ಲ್ಯುಸಿಸಿಬಿ ಯಿಂದ ಮಾಹಿತಿಯನ್ನು ಪಡೆದಿದ್ದರು.
ಪರಿಸರ, ಅರಣ್ಯ ಮತ್ತು ಹವಮಾನ ಬದಲಾವಣೆ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಡಬ್ಲ್ಯುಸಿಸಿವಿ ಅಥವಾ ವನ್ಯಜೀವಿ ಅಪರಾಧ ನಿಯಂತ್ರಣ ಬ್ಯೂರೋ ಆರ್ಟಿಐ ಮೂಲಕ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಅಸ್ಸಾಂ 9, ಪಶ್ಚಿಮ ಬಂಗಾಳ, ಒಡಿಶಾ ಮತ್ತು ತಮಿಳುನಾಡು ತಲಾ 8, ಕರ್ನಾಟಕ ಮತ್ತು ಉತ್ತರಾಖಂಡ ತಲಾ 3 ರಂತೆ ಕೇರಳ ಮತ್ತು ಅರುಣಾಚಲ ಪ್ರದೇಶಗಳಲ್ಲಿ ಎರಡು ಆನೆ ಹತ್ಯೆಯ ಪ್ರಕರಣಗಳನ್ನು ದಾಖಲಿಸಿದರೆ, ರಾಜಸ್ಥಾನ, ಹಿಮಾಚಲ ಪ್ರದೇಶ, ಬಿಹಾರ, ಮೇಘಾಲಯ, ಛತ್ತಿಸ್ಗಢ, ಮಹಾರಾಷ್ಟ್ರ ತಲಾ ಒಂದು ಆನೆ ಹತ್ಯೆಗೊಳಗಾಗಿದೆ ಎಂದು ವರದಿ ತಿಳಿಸಿದೆ.
ಆನೆಗಳನ್ನು ಹತ್ಯೆಯನ್ನು ಮಾಡಿದ ಪ್ರಕರಣದಲ್ಲಿ ತಮಿಳುನಾಡಿನಲ್ಲಿ ಗರಿಷ್ಠ 17 ಜನರನ್ನು ಬಂಧಿಸಲಾಗಿದ್ದು, ಅಸ್ಸಾಂನಲ್ಲಿ 15, ಒಡಿಶಾದಲ್ಲಿ 13 ಹಾಗೂ ಪಶ್ಚಿಮ ಬಂಗಾಳದಲ್ಲಿ 11 ಜನರನ್ನು ಬಂಧಿಸಲಾಗಿದೆ. ಮಾತ್ರವಲ್ಲದೆ, ಕೇರಳದಲ್ಲಿ ಐವರು ಉತ್ತರಾಖಂಡ ಮತ್ತು ಬಿಹಾರದಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…