Advertisement
MIRROR FOCUS

ಜಾಲ್ಸೂರು-ಕಾಸರಗೋಡು ಅಂತರಾಜ್ಯ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ | ಕೂದಳೆಲೆ ಅಂತರದಲ್ಲಿ ಪಾರಾದ ಬೈಕ್ ಸವಾರ |

Share

ಜಾಲ್ಸೂರು- ಕಾಸರಗೋಡು(Jalsoor- Kasargodu) ಅಂತರಾಜ್ಯ ರಸ್ತೆಯಲ್ಲಿ(National highway) ಒಂಟಿ ಸಲಗ(Elephant) ಪ್ರತ್ಯಕ್ಷವಾಗಿದ್ದು, ತಿರುವಿನಲ್ಲಿ ಎದುರಿನಿಂದ ಬಂದ ಬೈಕ್‌ ಸವಾರ(Bike rider)ನಿಗೆ ಆನೆ ಎದುರಾಗಿದೆ. ಬೈಕ್‌ ಸವಾರ ಕೂದಳೆಲೆ ಅಂತರದಿಂದ ಪಾರಾಗಿದ್ದು, ತಮ್ಮ ಜೀವ ಉಳಿಸಿಕೊಂಡಿದ್ದಾರೆ. ಈ ಘಟನೆ ಸುಳ್ಯದ(Sullia) ಸಮೀಪ ಪಂಜಿಕಲ್ಲಿನಲ್ಲಿ ಇಂದು ಬೆಳಗ್ಗೆ ನಡೆದಿದೆ.

Advertisement
Advertisement

ದೇಲಂಪಾಡಿ ಗ್ರಾಮದ ಬೆಳ್ಳಿಪಾಡಿ ಗ್ರಾಮ ಸುತ್ತ ಮುತ್ತ ಕಾಡಿನಿಂದ(Forest) ಆವರಿಸಿದ್ದು, ಈ ಪರಿಸರದಲ್ಲಿ ರಾತ್ರಿ, ಹಗಲೆನ್ನದೆ ಆನೆಗಳು ಓಡಾಡುತ್ತಿರುತ್ತವೆ. ಇಲ್ಲಿನ ಜನ ಪ್ರತಿ ದಿನ ಆತಂಕದಲ್ಲೇ ಬದುಕುವಂತಾಗಿದೆ. ಹಲವು ದಿನಗಳಿಂದ ನಿರಂತರವಾಗಿ ಕಾಡಾನೆಗಳು ಕೃಷಿಕರ(Farmer) ತೋಟಗಳಿಗೆ ದಾಳಿ ಇಡುತ್ತಿದ್ದು, ಕೃಷಿಯನ್ನು ಹಾನಿ ಮಾಡುತ್ತಿದ್ದಾವೆ. ಈಗ ಕಾಡಾನೆಯೊಂದು ಪಂಜಿಕಲ್ಲಿನ ಬಳಿ ಮುಖ್ಯ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಪ್ರತ್ಯಕ್ಷವಾಗಿದೆ.

Advertisement

ಇದು ಕಾಡು ದಾರಿ ಆಗಿರುವುದರಿಂದ ಬೆಳಗ್ಗೆ ಅನೇಕರು ಬೈಕ್‌ ನಲ್ಲಿ ಹೋಗುತ್ತಿರುತ್ತಾರೆ. ಇದು ಕಾಸರಗೋಡು ಹಾಗೂ ಸುಳ್ಯ ಮುಖ್ಯ ರಸ್ತೆ ಆಗಿರುವ ಕಾರಣ ಇಲ್ಲಿ ಅನೇಕರು ದಿನನಿತ್ಯ ಓಡಾಡುತ್ತಿರುತ್ತಾರೆ. ಶಾಲಾ- ಕಾಲೇಜಿಗೆ ದಿನನಿತ್ಯ ಅನೇಕ ಮಕ್ಕಳು ಹೋಗುತ್ತಿರುತ್ತಾರೆ. ಈ ಬಗ್ಗೆ ಅನೇಕ ಬಾರಿ ಅರಣ್ಯ ಇಲಾಖೆ(Forest department) ಗಮನಕ್ಕೆ ತಂದಿದ್ದರು, ಅವರು ಏನು ಮಾಡದ ಪರಿಸ್ಥಿತಿಯಲ್ಲಿದ್ದಾರೆ. ಈ ಕಡೆಯಿಂದ ಓಡಿಸಿ ಇನ್ನೊಂದು ಕಾಡಿಗೆ ಬಿಟ್ಟರೆ, ಅಲ್ಲಿ ಜನರಿಗೆ ಕಾಟ ಕೊಟ್ಟು, ತಿಂದು ತೇಗಿ ಮತ್ತೆ ಇತ್ತಕಡೆ ಪಯಣ ಬೆಳೆಸುತ್ತದೆ. ಒಟ್ಟಿನಲ್ಲಿ ಈ ಮಾನವ- ಆನೆ ಸಂಘರ್ಷ ನಿಲ್ಲದ ಸಮಸ್ಯೆ ಅನ್ನೋದಂತು ಸತ್ಯ.

In the morning, a single elephant was seen on the Jalsoor-Kasargodu national highway, and the elephant encountered the bike rider coming from the opposite side at the turn. The biker narrowly escaped and saved his life. This incident took place in Panjikallu near Sullia this morning.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡುಗೆ ಎಣ್ಣೆ ಸ್ವಾವಲಂಬನೆಯ ಗುರಿ | 10 ಸಾವಿರ ಕೋಟಿಗೂ ಅಧಿಕ ಹಣಕಾಸು ಸೌಲಭ್ಯ | ತಾಳೆ ಬೆಳೆಯತ್ತಲೂ ಚಿತ್ತ |

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ…

8 hours ago

ಅರಣ್ಯ ಬೆಳೆಸುವುದರ ಜೊತೆಗೆ ವನ್ಯ ಜೀವಿಗಳನ್ನು ಕಾಪಾಡಬೇಕಿದೆ | ತುಮಕೂರಿನಲ್ಲಿ 70ನೇ ವನ್ಯ ಜೀವಿ ಸಪ್ತಾಹ |

ವನ್ಯಜೀವಿ ಸಪ್ತಾಹ  ಅಂಗವಾಗಿ ಪ್ರಾದೇಶಿಕ ಅರಣ್ಯ ವಿಭಾಗದ ವತಿಯಿಂದ ಆಯೋಜಿಸಿದ್ದ 70ನೇ ವನ್ಯಜೀವಿ…

8 hours ago

ದೇಶದಲ್ಲಿ ಸಹಕಾರಿ ವಲಯದ ಪಾತ್ರ ಮುಂದಿನ ದಿನಗಳಲ್ಲಿ ಮಹತ್ವ ಪಡೆಯಲಿದೆ | ಸಹಕಾರಿ ಬ್ಯಾಂಕ್‌ನ ಶತಮಾನೋತ್ಸವದಲ್ಲಿ ಅಮಿತ್‌ ಶಾ |

ಆರ್ಥಿಕ ಪ್ರಗತಿಯ ಜೊತೆಗೆ ಜನರ ಕಲ್ಯಾಣವನ್ನು ಖಾತರಿಪಡಿಸಲು ಜಗತ್ತಿನಲ್ಲಿ ಯಾವುದಾದರೂ ಮಾದರಿ ಇದ್ದರೆ…

8 hours ago

7ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ | 20 ಭಾಷೆಯ 100ಕ್ಕೂ ಅಧಿಕ ಸಿನಿಮಾ ಪ್ರದರ್ಶನ

ಇನೋವೇಟಿವ್ ಫಿಲ್ಮಂ ಅಕಾಡೆಮಿ ಬೆಂಗಳೂರಿನಲ್ಲಿ ಆಯೋಜಿಸಿರುವ ಮೂರು ದಿನಗಳ 7ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ…

9 hours ago

ಹವಾಮಾನ ವರದಿ | 05-10-2024 | ಗುಡುಗು ಸಹಿತ ಸಾಮಾನ್ಯ ಮಳೆ | ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ

ಈಗಿನಂತೆ ಅಕ್ಟೊಬರ್ 10ರ ವೇಳೆಗೆ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ…

16 hours ago