Advertisement
MIRROR FOCUS

ಜಾಲ್ಸೂರು-ಕಾಸರಗೋಡು ಅಂತರಾಜ್ಯ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ | ಕೂದಳೆಲೆ ಅಂತರದಲ್ಲಿ ಪಾರಾದ ಬೈಕ್ ಸವಾರ |

Share

ಜಾಲ್ಸೂರು- ಕಾಸರಗೋಡು(Jalsoor- Kasargodu) ಅಂತರಾಜ್ಯ ರಸ್ತೆಯಲ್ಲಿ(National highway) ಒಂಟಿ ಸಲಗ(Elephant) ಪ್ರತ್ಯಕ್ಷವಾಗಿದ್ದು, ತಿರುವಿನಲ್ಲಿ ಎದುರಿನಿಂದ ಬಂದ ಬೈಕ್‌ ಸವಾರ(Bike rider)ನಿಗೆ ಆನೆ ಎದುರಾಗಿದೆ. ಬೈಕ್‌ ಸವಾರ ಕೂದಳೆಲೆ ಅಂತರದಿಂದ ಪಾರಾಗಿದ್ದು, ತಮ್ಮ ಜೀವ ಉಳಿಸಿಕೊಂಡಿದ್ದಾರೆ. ಈ ಘಟನೆ ಸುಳ್ಯದ(Sullia) ಸಮೀಪ ಪಂಜಿಕಲ್ಲಿನಲ್ಲಿ ಇಂದು ಬೆಳಗ್ಗೆ ನಡೆದಿದೆ.

Advertisement
Advertisement
Advertisement
Advertisement

ದೇಲಂಪಾಡಿ ಗ್ರಾಮದ ಬೆಳ್ಳಿಪಾಡಿ ಗ್ರಾಮ ಸುತ್ತ ಮುತ್ತ ಕಾಡಿನಿಂದ(Forest) ಆವರಿಸಿದ್ದು, ಈ ಪರಿಸರದಲ್ಲಿ ರಾತ್ರಿ, ಹಗಲೆನ್ನದೆ ಆನೆಗಳು ಓಡಾಡುತ್ತಿರುತ್ತವೆ. ಇಲ್ಲಿನ ಜನ ಪ್ರತಿ ದಿನ ಆತಂಕದಲ್ಲೇ ಬದುಕುವಂತಾಗಿದೆ. ಹಲವು ದಿನಗಳಿಂದ ನಿರಂತರವಾಗಿ ಕಾಡಾನೆಗಳು ಕೃಷಿಕರ(Farmer) ತೋಟಗಳಿಗೆ ದಾಳಿ ಇಡುತ್ತಿದ್ದು, ಕೃಷಿಯನ್ನು ಹಾನಿ ಮಾಡುತ್ತಿದ್ದಾವೆ. ಈಗ ಕಾಡಾನೆಯೊಂದು ಪಂಜಿಕಲ್ಲಿನ ಬಳಿ ಮುಖ್ಯ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಪ್ರತ್ಯಕ್ಷವಾಗಿದೆ.

Advertisement

ಇದು ಕಾಡು ದಾರಿ ಆಗಿರುವುದರಿಂದ ಬೆಳಗ್ಗೆ ಅನೇಕರು ಬೈಕ್‌ ನಲ್ಲಿ ಹೋಗುತ್ತಿರುತ್ತಾರೆ. ಇದು ಕಾಸರಗೋಡು ಹಾಗೂ ಸುಳ್ಯ ಮುಖ್ಯ ರಸ್ತೆ ಆಗಿರುವ ಕಾರಣ ಇಲ್ಲಿ ಅನೇಕರು ದಿನನಿತ್ಯ ಓಡಾಡುತ್ತಿರುತ್ತಾರೆ. ಶಾಲಾ- ಕಾಲೇಜಿಗೆ ದಿನನಿತ್ಯ ಅನೇಕ ಮಕ್ಕಳು ಹೋಗುತ್ತಿರುತ್ತಾರೆ. ಈ ಬಗ್ಗೆ ಅನೇಕ ಬಾರಿ ಅರಣ್ಯ ಇಲಾಖೆ(Forest department) ಗಮನಕ್ಕೆ ತಂದಿದ್ದರು, ಅವರು ಏನು ಮಾಡದ ಪರಿಸ್ಥಿತಿಯಲ್ಲಿದ್ದಾರೆ. ಈ ಕಡೆಯಿಂದ ಓಡಿಸಿ ಇನ್ನೊಂದು ಕಾಡಿಗೆ ಬಿಟ್ಟರೆ, ಅಲ್ಲಿ ಜನರಿಗೆ ಕಾಟ ಕೊಟ್ಟು, ತಿಂದು ತೇಗಿ ಮತ್ತೆ ಇತ್ತಕಡೆ ಪಯಣ ಬೆಳೆಸುತ್ತದೆ. ಒಟ್ಟಿನಲ್ಲಿ ಈ ಮಾನವ- ಆನೆ ಸಂಘರ್ಷ ನಿಲ್ಲದ ಸಮಸ್ಯೆ ಅನ್ನೋದಂತು ಸತ್ಯ.

In the morning, a single elephant was seen on the Jalsoor-Kasargodu national highway, and the elephant encountered the bike rider coming from the opposite side at the turn. The biker narrowly escaped and saved his life. This incident took place in Panjikallu near Sullia this morning.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

5 hours ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

20 hours ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

1 day ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

1 day ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

1 day ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

2 days ago