Advertisement
MIRROR FOCUS

ಜಾಲ್ಸೂರು-ಕಾಸರಗೋಡು ಅಂತರಾಜ್ಯ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ | ಕೂದಳೆಲೆ ಅಂತರದಲ್ಲಿ ಪಾರಾದ ಬೈಕ್ ಸವಾರ |

Share

ಜಾಲ್ಸೂರು- ಕಾಸರಗೋಡು(Jalsoor- Kasargodu) ಅಂತರಾಜ್ಯ ರಸ್ತೆಯಲ್ಲಿ(National highway) ಒಂಟಿ ಸಲಗ(Elephant) ಪ್ರತ್ಯಕ್ಷವಾಗಿದ್ದು, ತಿರುವಿನಲ್ಲಿ ಎದುರಿನಿಂದ ಬಂದ ಬೈಕ್‌ ಸವಾರ(Bike rider)ನಿಗೆ ಆನೆ ಎದುರಾಗಿದೆ. ಬೈಕ್‌ ಸವಾರ ಕೂದಳೆಲೆ ಅಂತರದಿಂದ ಪಾರಾಗಿದ್ದು, ತಮ್ಮ ಜೀವ ಉಳಿಸಿಕೊಂಡಿದ್ದಾರೆ. ಈ ಘಟನೆ ಸುಳ್ಯದ(Sullia) ಸಮೀಪ ಪಂಜಿಕಲ್ಲಿನಲ್ಲಿ ಇಂದು ಬೆಳಗ್ಗೆ ನಡೆದಿದೆ.

ದೇಲಂಪಾಡಿ ಗ್ರಾಮದ ಬೆಳ್ಳಿಪಾಡಿ ಗ್ರಾಮ ಸುತ್ತ ಮುತ್ತ ಕಾಡಿನಿಂದ(Forest) ಆವರಿಸಿದ್ದು, ಈ ಪರಿಸರದಲ್ಲಿ ರಾತ್ರಿ, ಹಗಲೆನ್ನದೆ ಆನೆಗಳು ಓಡಾಡುತ್ತಿರುತ್ತವೆ. ಇಲ್ಲಿನ ಜನ ಪ್ರತಿ ದಿನ ಆತಂಕದಲ್ಲೇ ಬದುಕುವಂತಾಗಿದೆ. ಹಲವು ದಿನಗಳಿಂದ ನಿರಂತರವಾಗಿ ಕಾಡಾನೆಗಳು ಕೃಷಿಕರ(Farmer) ತೋಟಗಳಿಗೆ ದಾಳಿ ಇಡುತ್ತಿದ್ದು, ಕೃಷಿಯನ್ನು ಹಾನಿ ಮಾಡುತ್ತಿದ್ದಾವೆ. ಈಗ ಕಾಡಾನೆಯೊಂದು ಪಂಜಿಕಲ್ಲಿನ ಬಳಿ ಮುಖ್ಯ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಪ್ರತ್ಯಕ್ಷವಾಗಿದೆ.

ಇದು ಕಾಡು ದಾರಿ ಆಗಿರುವುದರಿಂದ ಬೆಳಗ್ಗೆ ಅನೇಕರು ಬೈಕ್‌ ನಲ್ಲಿ ಹೋಗುತ್ತಿರುತ್ತಾರೆ. ಇದು ಕಾಸರಗೋಡು ಹಾಗೂ ಸುಳ್ಯ ಮುಖ್ಯ ರಸ್ತೆ ಆಗಿರುವ ಕಾರಣ ಇಲ್ಲಿ ಅನೇಕರು ದಿನನಿತ್ಯ ಓಡಾಡುತ್ತಿರುತ್ತಾರೆ. ಶಾಲಾ- ಕಾಲೇಜಿಗೆ ದಿನನಿತ್ಯ ಅನೇಕ ಮಕ್ಕಳು ಹೋಗುತ್ತಿರುತ್ತಾರೆ. ಈ ಬಗ್ಗೆ ಅನೇಕ ಬಾರಿ ಅರಣ್ಯ ಇಲಾಖೆ(Forest department) ಗಮನಕ್ಕೆ ತಂದಿದ್ದರು, ಅವರು ಏನು ಮಾಡದ ಪರಿಸ್ಥಿತಿಯಲ್ಲಿದ್ದಾರೆ. ಈ ಕಡೆಯಿಂದ ಓಡಿಸಿ ಇನ್ನೊಂದು ಕಾಡಿಗೆ ಬಿಟ್ಟರೆ, ಅಲ್ಲಿ ಜನರಿಗೆ ಕಾಟ ಕೊಟ್ಟು, ತಿಂದು ತೇಗಿ ಮತ್ತೆ ಇತ್ತಕಡೆ ಪಯಣ ಬೆಳೆಸುತ್ತದೆ. ಒಟ್ಟಿನಲ್ಲಿ ಈ ಮಾನವ- ಆನೆ ಸಂಘರ್ಷ ನಿಲ್ಲದ ಸಮಸ್ಯೆ ಅನ್ನೋದಂತು ಸತ್ಯ.

In the morning, a single elephant was seen on the Jalsoor-Kasargodu national highway, and the elephant encountered the bike rider coming from the opposite side at the turn. The biker narrowly escaped and saved his life. This incident took place in Panjikallu near Sullia this morning.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

14 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

23 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

24 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago