Advertisement
MIRROR FOCUS

ಜಾಲ್ಸೂರು-ಕಾಸರಗೋಡು ಅಂತರಾಜ್ಯ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ | ಕೂದಳೆಲೆ ಅಂತರದಲ್ಲಿ ಪಾರಾದ ಬೈಕ್ ಸವಾರ |

Share

ಜಾಲ್ಸೂರು- ಕಾಸರಗೋಡು(Jalsoor- Kasargodu) ಅಂತರಾಜ್ಯ ರಸ್ತೆಯಲ್ಲಿ(National highway) ಒಂಟಿ ಸಲಗ(Elephant) ಪ್ರತ್ಯಕ್ಷವಾಗಿದ್ದು, ತಿರುವಿನಲ್ಲಿ ಎದುರಿನಿಂದ ಬಂದ ಬೈಕ್‌ ಸವಾರ(Bike rider)ನಿಗೆ ಆನೆ ಎದುರಾಗಿದೆ. ಬೈಕ್‌ ಸವಾರ ಕೂದಳೆಲೆ ಅಂತರದಿಂದ ಪಾರಾಗಿದ್ದು, ತಮ್ಮ ಜೀವ ಉಳಿಸಿಕೊಂಡಿದ್ದಾರೆ. ಈ ಘಟನೆ ಸುಳ್ಯದ(Sullia) ಸಮೀಪ ಪಂಜಿಕಲ್ಲಿನಲ್ಲಿ ಇಂದು ಬೆಳಗ್ಗೆ ನಡೆದಿದೆ.

ದೇಲಂಪಾಡಿ ಗ್ರಾಮದ ಬೆಳ್ಳಿಪಾಡಿ ಗ್ರಾಮ ಸುತ್ತ ಮುತ್ತ ಕಾಡಿನಿಂದ(Forest) ಆವರಿಸಿದ್ದು, ಈ ಪರಿಸರದಲ್ಲಿ ರಾತ್ರಿ, ಹಗಲೆನ್ನದೆ ಆನೆಗಳು ಓಡಾಡುತ್ತಿರುತ್ತವೆ. ಇಲ್ಲಿನ ಜನ ಪ್ರತಿ ದಿನ ಆತಂಕದಲ್ಲೇ ಬದುಕುವಂತಾಗಿದೆ. ಹಲವು ದಿನಗಳಿಂದ ನಿರಂತರವಾಗಿ ಕಾಡಾನೆಗಳು ಕೃಷಿಕರ(Farmer) ತೋಟಗಳಿಗೆ ದಾಳಿ ಇಡುತ್ತಿದ್ದು, ಕೃಷಿಯನ್ನು ಹಾನಿ ಮಾಡುತ್ತಿದ್ದಾವೆ. ಈಗ ಕಾಡಾನೆಯೊಂದು ಪಂಜಿಕಲ್ಲಿನ ಬಳಿ ಮುಖ್ಯ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಪ್ರತ್ಯಕ್ಷವಾಗಿದೆ.

ಇದು ಕಾಡು ದಾರಿ ಆಗಿರುವುದರಿಂದ ಬೆಳಗ್ಗೆ ಅನೇಕರು ಬೈಕ್‌ ನಲ್ಲಿ ಹೋಗುತ್ತಿರುತ್ತಾರೆ. ಇದು ಕಾಸರಗೋಡು ಹಾಗೂ ಸುಳ್ಯ ಮುಖ್ಯ ರಸ್ತೆ ಆಗಿರುವ ಕಾರಣ ಇಲ್ಲಿ ಅನೇಕರು ದಿನನಿತ್ಯ ಓಡಾಡುತ್ತಿರುತ್ತಾರೆ. ಶಾಲಾ- ಕಾಲೇಜಿಗೆ ದಿನನಿತ್ಯ ಅನೇಕ ಮಕ್ಕಳು ಹೋಗುತ್ತಿರುತ್ತಾರೆ. ಈ ಬಗ್ಗೆ ಅನೇಕ ಬಾರಿ ಅರಣ್ಯ ಇಲಾಖೆ(Forest department) ಗಮನಕ್ಕೆ ತಂದಿದ್ದರು, ಅವರು ಏನು ಮಾಡದ ಪರಿಸ್ಥಿತಿಯಲ್ಲಿದ್ದಾರೆ. ಈ ಕಡೆಯಿಂದ ಓಡಿಸಿ ಇನ್ನೊಂದು ಕಾಡಿಗೆ ಬಿಟ್ಟರೆ, ಅಲ್ಲಿ ಜನರಿಗೆ ಕಾಟ ಕೊಟ್ಟು, ತಿಂದು ತೇಗಿ ಮತ್ತೆ ಇತ್ತಕಡೆ ಪಯಣ ಬೆಳೆಸುತ್ತದೆ. ಒಟ್ಟಿನಲ್ಲಿ ಈ ಮಾನವ- ಆನೆ ಸಂಘರ್ಷ ನಿಲ್ಲದ ಸಮಸ್ಯೆ ಅನ್ನೋದಂತು ಸತ್ಯ.

In the morning, a single elephant was seen on the Jalsoor-Kasargodu national highway, and the elephant encountered the bike rider coming from the opposite side at the turn. The biker narrowly escaped and saved his life. This incident took place in Panjikallu near Sullia this morning.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

2 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

3 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

21 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago