Advertisement
MIRROR FOCUS

ಜಾಲ್ಸೂರು-ಕಾಸರಗೋಡು ಅಂತರಾಜ್ಯ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ | ಕೂದಳೆಲೆ ಅಂತರದಲ್ಲಿ ಪಾರಾದ ಬೈಕ್ ಸವಾರ |

Share

ಜಾಲ್ಸೂರು- ಕಾಸರಗೋಡು(Jalsoor- Kasargodu) ಅಂತರಾಜ್ಯ ರಸ್ತೆಯಲ್ಲಿ(National highway) ಒಂಟಿ ಸಲಗ(Elephant) ಪ್ರತ್ಯಕ್ಷವಾಗಿದ್ದು, ತಿರುವಿನಲ್ಲಿ ಎದುರಿನಿಂದ ಬಂದ ಬೈಕ್‌ ಸವಾರ(Bike rider)ನಿಗೆ ಆನೆ ಎದುರಾಗಿದೆ. ಬೈಕ್‌ ಸವಾರ ಕೂದಳೆಲೆ ಅಂತರದಿಂದ ಪಾರಾಗಿದ್ದು, ತಮ್ಮ ಜೀವ ಉಳಿಸಿಕೊಂಡಿದ್ದಾರೆ. ಈ ಘಟನೆ ಸುಳ್ಯದ(Sullia) ಸಮೀಪ ಪಂಜಿಕಲ್ಲಿನಲ್ಲಿ ಇಂದು ಬೆಳಗ್ಗೆ ನಡೆದಿದೆ.

ದೇಲಂಪಾಡಿ ಗ್ರಾಮದ ಬೆಳ್ಳಿಪಾಡಿ ಗ್ರಾಮ ಸುತ್ತ ಮುತ್ತ ಕಾಡಿನಿಂದ(Forest) ಆವರಿಸಿದ್ದು, ಈ ಪರಿಸರದಲ್ಲಿ ರಾತ್ರಿ, ಹಗಲೆನ್ನದೆ ಆನೆಗಳು ಓಡಾಡುತ್ತಿರುತ್ತವೆ. ಇಲ್ಲಿನ ಜನ ಪ್ರತಿ ದಿನ ಆತಂಕದಲ್ಲೇ ಬದುಕುವಂತಾಗಿದೆ. ಹಲವು ದಿನಗಳಿಂದ ನಿರಂತರವಾಗಿ ಕಾಡಾನೆಗಳು ಕೃಷಿಕರ(Farmer) ತೋಟಗಳಿಗೆ ದಾಳಿ ಇಡುತ್ತಿದ್ದು, ಕೃಷಿಯನ್ನು ಹಾನಿ ಮಾಡುತ್ತಿದ್ದಾವೆ. ಈಗ ಕಾಡಾನೆಯೊಂದು ಪಂಜಿಕಲ್ಲಿನ ಬಳಿ ಮುಖ್ಯ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಪ್ರತ್ಯಕ್ಷವಾಗಿದೆ.

ಇದು ಕಾಡು ದಾರಿ ಆಗಿರುವುದರಿಂದ ಬೆಳಗ್ಗೆ ಅನೇಕರು ಬೈಕ್‌ ನಲ್ಲಿ ಹೋಗುತ್ತಿರುತ್ತಾರೆ. ಇದು ಕಾಸರಗೋಡು ಹಾಗೂ ಸುಳ್ಯ ಮುಖ್ಯ ರಸ್ತೆ ಆಗಿರುವ ಕಾರಣ ಇಲ್ಲಿ ಅನೇಕರು ದಿನನಿತ್ಯ ಓಡಾಡುತ್ತಿರುತ್ತಾರೆ. ಶಾಲಾ- ಕಾಲೇಜಿಗೆ ದಿನನಿತ್ಯ ಅನೇಕ ಮಕ್ಕಳು ಹೋಗುತ್ತಿರುತ್ತಾರೆ. ಈ ಬಗ್ಗೆ ಅನೇಕ ಬಾರಿ ಅರಣ್ಯ ಇಲಾಖೆ(Forest department) ಗಮನಕ್ಕೆ ತಂದಿದ್ದರು, ಅವರು ಏನು ಮಾಡದ ಪರಿಸ್ಥಿತಿಯಲ್ಲಿದ್ದಾರೆ. ಈ ಕಡೆಯಿಂದ ಓಡಿಸಿ ಇನ್ನೊಂದು ಕಾಡಿಗೆ ಬಿಟ್ಟರೆ, ಅಲ್ಲಿ ಜನರಿಗೆ ಕಾಟ ಕೊಟ್ಟು, ತಿಂದು ತೇಗಿ ಮತ್ತೆ ಇತ್ತಕಡೆ ಪಯಣ ಬೆಳೆಸುತ್ತದೆ. ಒಟ್ಟಿನಲ್ಲಿ ಈ ಮಾನವ- ಆನೆ ಸಂಘರ್ಷ ನಿಲ್ಲದ ಸಮಸ್ಯೆ ಅನ್ನೋದಂತು ಸತ್ಯ.

In the morning, a single elephant was seen on the Jalsoor-Kasargodu national highway, and the elephant encountered the bike rider coming from the opposite side at the turn. The biker narrowly escaped and saved his life. This incident took place in Panjikallu near Sullia this morning.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

22 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago