Advertisement
MIRROR FOCUS

ಜಾಲ್ಸೂರು-ಕಾಸರಗೋಡು ಅಂತರಾಜ್ಯ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ | ಕೂದಳೆಲೆ ಅಂತರದಲ್ಲಿ ಪಾರಾದ ಬೈಕ್ ಸವಾರ |

Share

ಜಾಲ್ಸೂರು- ಕಾಸರಗೋಡು(Jalsoor- Kasargodu) ಅಂತರಾಜ್ಯ ರಸ್ತೆಯಲ್ಲಿ(National highway) ಒಂಟಿ ಸಲಗ(Elephant) ಪ್ರತ್ಯಕ್ಷವಾಗಿದ್ದು, ತಿರುವಿನಲ್ಲಿ ಎದುರಿನಿಂದ ಬಂದ ಬೈಕ್‌ ಸವಾರ(Bike rider)ನಿಗೆ ಆನೆ ಎದುರಾಗಿದೆ. ಬೈಕ್‌ ಸವಾರ ಕೂದಳೆಲೆ ಅಂತರದಿಂದ ಪಾರಾಗಿದ್ದು, ತಮ್ಮ ಜೀವ ಉಳಿಸಿಕೊಂಡಿದ್ದಾರೆ. ಈ ಘಟನೆ ಸುಳ್ಯದ(Sullia) ಸಮೀಪ ಪಂಜಿಕಲ್ಲಿನಲ್ಲಿ ಇಂದು ಬೆಳಗ್ಗೆ ನಡೆದಿದೆ.

ದೇಲಂಪಾಡಿ ಗ್ರಾಮದ ಬೆಳ್ಳಿಪಾಡಿ ಗ್ರಾಮ ಸುತ್ತ ಮುತ್ತ ಕಾಡಿನಿಂದ(Forest) ಆವರಿಸಿದ್ದು, ಈ ಪರಿಸರದಲ್ಲಿ ರಾತ್ರಿ, ಹಗಲೆನ್ನದೆ ಆನೆಗಳು ಓಡಾಡುತ್ತಿರುತ್ತವೆ. ಇಲ್ಲಿನ ಜನ ಪ್ರತಿ ದಿನ ಆತಂಕದಲ್ಲೇ ಬದುಕುವಂತಾಗಿದೆ. ಹಲವು ದಿನಗಳಿಂದ ನಿರಂತರವಾಗಿ ಕಾಡಾನೆಗಳು ಕೃಷಿಕರ(Farmer) ತೋಟಗಳಿಗೆ ದಾಳಿ ಇಡುತ್ತಿದ್ದು, ಕೃಷಿಯನ್ನು ಹಾನಿ ಮಾಡುತ್ತಿದ್ದಾವೆ. ಈಗ ಕಾಡಾನೆಯೊಂದು ಪಂಜಿಕಲ್ಲಿನ ಬಳಿ ಮುಖ್ಯ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಪ್ರತ್ಯಕ್ಷವಾಗಿದೆ.

ಇದು ಕಾಡು ದಾರಿ ಆಗಿರುವುದರಿಂದ ಬೆಳಗ್ಗೆ ಅನೇಕರು ಬೈಕ್‌ ನಲ್ಲಿ ಹೋಗುತ್ತಿರುತ್ತಾರೆ. ಇದು ಕಾಸರಗೋಡು ಹಾಗೂ ಸುಳ್ಯ ಮುಖ್ಯ ರಸ್ತೆ ಆಗಿರುವ ಕಾರಣ ಇಲ್ಲಿ ಅನೇಕರು ದಿನನಿತ್ಯ ಓಡಾಡುತ್ತಿರುತ್ತಾರೆ. ಶಾಲಾ- ಕಾಲೇಜಿಗೆ ದಿನನಿತ್ಯ ಅನೇಕ ಮಕ್ಕಳು ಹೋಗುತ್ತಿರುತ್ತಾರೆ. ಈ ಬಗ್ಗೆ ಅನೇಕ ಬಾರಿ ಅರಣ್ಯ ಇಲಾಖೆ(Forest department) ಗಮನಕ್ಕೆ ತಂದಿದ್ದರು, ಅವರು ಏನು ಮಾಡದ ಪರಿಸ್ಥಿತಿಯಲ್ಲಿದ್ದಾರೆ. ಈ ಕಡೆಯಿಂದ ಓಡಿಸಿ ಇನ್ನೊಂದು ಕಾಡಿಗೆ ಬಿಟ್ಟರೆ, ಅಲ್ಲಿ ಜನರಿಗೆ ಕಾಟ ಕೊಟ್ಟು, ತಿಂದು ತೇಗಿ ಮತ್ತೆ ಇತ್ತಕಡೆ ಪಯಣ ಬೆಳೆಸುತ್ತದೆ. ಒಟ್ಟಿನಲ್ಲಿ ಈ ಮಾನವ- ಆನೆ ಸಂಘರ್ಷ ನಿಲ್ಲದ ಸಮಸ್ಯೆ ಅನ್ನೋದಂತು ಸತ್ಯ.

In the morning, a single elephant was seen on the Jalsoor-Kasargodu national highway, and the elephant encountered the bike rider coming from the opposite side at the turn. The biker narrowly escaped and saved his life. This incident took place in Panjikallu near Sullia this morning.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

7 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

9 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

2 days ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago