ಒಂಟಿ ಮನೆಗಳೇ ಈ ಕಳ್ಳನ ಟಾರ್ಗೆಟ್…! | ಅಕ್ಕಿ, ಬೆಲ್ಲ, ತರಕಾರಿ ತಿನ್ನುವ ಈ ಚೋರ ಯಾರು ? | ಈ ಚೋರನ ಸೆರೆಗೆ ಸಾಕಾನೆಗಳ ಕಾರ್ಯಾಚರಣೆ…! |

June 6, 2023
1:50 PM

ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡಿ, ಚಿನ್ನ ಬೆಳ್ಳಿ, ನಗದು ಕಳವು ಮಾಡುವುದನ್ನು ಕೇಳಿದ್ದೀವಿ. ಆದರೆ ಇಲ್ಲೋಬ್ಬ ಕಳ್ಳ ಅಕ್ಕಿ, ಬೆಲ್ಲ, ತರಕಾರಿ ಕದ್ದು ಯಾರ ಕಣ್ಣಿಗೂ ಕಾಣದಂತೆ ಪರಾರಿಯಾಗುತ್ತಿದ್ದಾನೆ.  ಮನೆಯಿಂದ ಇವೆಲ್ಲ ಕದ್ದು ಉಂಡು ಮಜಾ ಮಾಡಿ ಉಂಡಾಡಿ ಗುಂಡನ ಹಾಗೆ ಕಣ್ಣು ತಪ್ಪಿಸಿ ತಿರುಗುತ್ತಿದ್ದಾನೆ ಈ ಕಳ್ಳ…! ಈ ಮಹಾನ್ ಕಿಲಾಡಿ ಯಾರು..? .

ಬಂಡೀಪುರ ಅರಣ್ಯದಂಚಿನಲ್ಲಿ ಕಾಡಾನೆ ಪುಂಡಾಟ ಜೋರಾಗಿದೆ. ಕರ್ನಾಟಕ, ತಮಿಳುನಾಡು, ಕೇರಳ ಮೂರು ರಾಜ್ಯಗಳಲ್ಲಿಯೂ ಆನೆಗಳು ಸಂಚರಿಸಿ ಬೆಳೆ ನಾಶ, ಸೋಲಾರ್ ಬೇಲಿ ತಂತಿ ತುಳಿದು ಹಾನಿ ಮಾಡಿವೆ. ಒಂಟಿ ಮನೆಗಳನ್ನು ಟಾರ್ಗೆಟ್ ಮಾಡಿ ಅಲ್ಲಿ ಒಂಟಿ ಸಲಗ ಅಕ್ಕಿ, ಬೆಲ್ಲ ತರಕಾರಿ ಮೇಯುತ್ತಿದೆ. ಗುಂಡ್ಲುಪೇಟೆ ತಾಲೂಕು ಹುಂಡೀಪುರ, ಮಂಗಲ, ಜಕ್ಕಳ್ಳಿ, ಎಲಚೆಟ್ಟಿ ಸೇರಿದಂತೆ ಹಲವೆಡೆ ಕಾಡಾನೆ ಉಪಟಳ ಹೆಚ್ಚಾಗಿದೆ. ಪುಂಡಾನೆ ಸೆರೆಗೆ ಸಾಕಾನೆಗಳ ಕಾರ್ಯಾಚರಣೆ ಇದೀಗ ಆರಂಭಿಸಲಾಗಿದೆ.

 

ಕಳೆದ 5 ತಿಂಗಳಿಂದ ನಿರಂತರವಾಗಿ ಉಪಟಳ ನೀಡುತ್ತಿರುವ ಒಂಟಿ ಆನೆಯನ್ನು ಸೆರೆಹಿಡಿಯಲು ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ. 5 ಸಾಕಾನೆಗಳಿಂದ ಪುಂಡಾನೆಯನ್ನು ಸೆರೆಹಿಡಿಯಲು ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ದುಬಾರೆ, ರಾಮಾಪುರ ಬಿಳಿಗಿರಿರಂಗನ ಬೆಟ್ಟದಿಂದ ಸಾಕಾನೆಗಳನ್ನು ಕರೆತರಲಾಗಿದೆ.

ಈಗಾಗಲೇ ಡ್ರೋನ್ ಕಾರ್ಯಾಚರಣೆ ಮೂಲಕ ಪುಂಡಾನೆ ಪತ್ತೆಹಚ್ಚಲಾಗಿದೆ. ಎಲಚೆಟ್ಟಿ ಬಳಿ ಒಂಟಿ ಸಲಗದ ಸುಳಿವು ಸಿಕ್ಕಿದೆ. ಶೀಘ್ರದಲ್ಲೇ ಅರಣ್ಯ ಸಿಬ್ಬಂದಿ ಪುಂಡಾನೆ ಹಿಡಿಯುವ ನಿರೀಕ್ಷೆಯಲ್ಲಿದ್ದಾರೆ.

ಮಾರಳ್ಳಿ ಗ್ರಾಮದಲ್ಲಿ ಕಳೆದ ಶುಕ್ರವಾರ ರಾತ್ರಿ ಆನೆ ತುಳಿದು ರೈತರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯ ಇಲಾಖೆಯ ಎರಡು ಜೀಪ್‌ಗಳನ್ನು ಜಖಂಗೊಳಿಸಿದ್ದಲ್ಲದೇ, ಪ್ರತಿಭಟನೆ ನಡೆಸಿ ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಹಾಗೂ ಪುಂಡಾನೆಯನ್ನು ಹಿಡಿದು ಬೇರೆಡೆ ಬಿಡುವಂತೆ ಒತ್ತಾ ಯಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದು ಕೊಂಡಿದ್ದರು. ಈ ಸಂದರ್ಭ ದಲ್ಲಿ ಪುಂಡಾನೆಯನ್ನು ಹಿಡಿಯುವ ಭರವಸೆಯನ್ನು ಅರಣ್ಯಾಧಿಕಾರಿಗಳು ನೀಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ
June 5, 2026
7:04 AM
by: ದ ರೂರಲ್ ಮಿರರ್.ಕಾಂ
ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು
June 5, 2026
6:57 AM
by: ದ ರೂರಲ್ ಮಿರರ್.ಕಾಂ
ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…
June 4, 2026
10:30 PM
by: ಮಿರರ್‌ ಡೆಸ್ಕ್
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ
June 4, 2026
9:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror