ಒಂಟಿ ಮನೆಗಳೇ ಈ ಕಳ್ಳನ ಟಾರ್ಗೆಟ್…! | ಅಕ್ಕಿ, ಬೆಲ್ಲ, ತರಕಾರಿ ತಿನ್ನುವ ಈ ಚೋರ ಯಾರು ? | ಈ ಚೋರನ ಸೆರೆಗೆ ಸಾಕಾನೆಗಳ ಕಾರ್ಯಾಚರಣೆ…! |

June 6, 2023
1:50 PM

ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡಿ, ಚಿನ್ನ ಬೆಳ್ಳಿ, ನಗದು ಕಳವು ಮಾಡುವುದನ್ನು ಕೇಳಿದ್ದೀವಿ. ಆದರೆ ಇಲ್ಲೋಬ್ಬ ಕಳ್ಳ ಅಕ್ಕಿ, ಬೆಲ್ಲ, ತರಕಾರಿ ಕದ್ದು ಯಾರ ಕಣ್ಣಿಗೂ ಕಾಣದಂತೆ ಪರಾರಿಯಾಗುತ್ತಿದ್ದಾನೆ.  ಮನೆಯಿಂದ ಇವೆಲ್ಲ ಕದ್ದು ಉಂಡು ಮಜಾ ಮಾಡಿ ಉಂಡಾಡಿ ಗುಂಡನ ಹಾಗೆ ಕಣ್ಣು ತಪ್ಪಿಸಿ ತಿರುಗುತ್ತಿದ್ದಾನೆ ಈ ಕಳ್ಳ…! ಈ ಮಹಾನ್ ಕಿಲಾಡಿ ಯಾರು..? .

ಬಂಡೀಪುರ ಅರಣ್ಯದಂಚಿನಲ್ಲಿ ಕಾಡಾನೆ ಪುಂಡಾಟ ಜೋರಾಗಿದೆ. ಕರ್ನಾಟಕ, ತಮಿಳುನಾಡು, ಕೇರಳ ಮೂರು ರಾಜ್ಯಗಳಲ್ಲಿಯೂ ಆನೆಗಳು ಸಂಚರಿಸಿ ಬೆಳೆ ನಾಶ, ಸೋಲಾರ್ ಬೇಲಿ ತಂತಿ ತುಳಿದು ಹಾನಿ ಮಾಡಿವೆ. ಒಂಟಿ ಮನೆಗಳನ್ನು ಟಾರ್ಗೆಟ್ ಮಾಡಿ ಅಲ್ಲಿ ಒಂಟಿ ಸಲಗ ಅಕ್ಕಿ, ಬೆಲ್ಲ ತರಕಾರಿ ಮೇಯುತ್ತಿದೆ. ಗುಂಡ್ಲುಪೇಟೆ ತಾಲೂಕು ಹುಂಡೀಪುರ, ಮಂಗಲ, ಜಕ್ಕಳ್ಳಿ, ಎಲಚೆಟ್ಟಿ ಸೇರಿದಂತೆ ಹಲವೆಡೆ ಕಾಡಾನೆ ಉಪಟಳ ಹೆಚ್ಚಾಗಿದೆ. ಪುಂಡಾನೆ ಸೆರೆಗೆ ಸಾಕಾನೆಗಳ ಕಾರ್ಯಾಚರಣೆ ಇದೀಗ ಆರಂಭಿಸಲಾಗಿದೆ.

 

ಕಳೆದ 5 ತಿಂಗಳಿಂದ ನಿರಂತರವಾಗಿ ಉಪಟಳ ನೀಡುತ್ತಿರುವ ಒಂಟಿ ಆನೆಯನ್ನು ಸೆರೆಹಿಡಿಯಲು ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ. 5 ಸಾಕಾನೆಗಳಿಂದ ಪುಂಡಾನೆಯನ್ನು ಸೆರೆಹಿಡಿಯಲು ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ದುಬಾರೆ, ರಾಮಾಪುರ ಬಿಳಿಗಿರಿರಂಗನ ಬೆಟ್ಟದಿಂದ ಸಾಕಾನೆಗಳನ್ನು ಕರೆತರಲಾಗಿದೆ.

ಈಗಾಗಲೇ ಡ್ರೋನ್ ಕಾರ್ಯಾಚರಣೆ ಮೂಲಕ ಪುಂಡಾನೆ ಪತ್ತೆಹಚ್ಚಲಾಗಿದೆ. ಎಲಚೆಟ್ಟಿ ಬಳಿ ಒಂಟಿ ಸಲಗದ ಸುಳಿವು ಸಿಕ್ಕಿದೆ. ಶೀಘ್ರದಲ್ಲೇ ಅರಣ್ಯ ಸಿಬ್ಬಂದಿ ಪುಂಡಾನೆ ಹಿಡಿಯುವ ನಿರೀಕ್ಷೆಯಲ್ಲಿದ್ದಾರೆ.

ಮಾರಳ್ಳಿ ಗ್ರಾಮದಲ್ಲಿ ಕಳೆದ ಶುಕ್ರವಾರ ರಾತ್ರಿ ಆನೆ ತುಳಿದು ರೈತರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯ ಇಲಾಖೆಯ ಎರಡು ಜೀಪ್‌ಗಳನ್ನು ಜಖಂಗೊಳಿಸಿದ್ದಲ್ಲದೇ, ಪ್ರತಿಭಟನೆ ನಡೆಸಿ ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಹಾಗೂ ಪುಂಡಾನೆಯನ್ನು ಹಿಡಿದು ಬೇರೆಡೆ ಬಿಡುವಂತೆ ಒತ್ತಾ ಯಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದು ಕೊಂಡಿದ್ದರು. ಈ ಸಂದರ್ಭ ದಲ್ಲಿ ಪುಂಡಾನೆಯನ್ನು ಹಿಡಿಯುವ ಭರವಸೆಯನ್ನು ಅರಣ್ಯಾಧಿಕಾರಿಗಳು ನೀಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror