ಸುದ್ದಿಗಳು

ಒಂಟಿ ಮನೆಗಳೇ ಈ ಕಳ್ಳನ ಟಾರ್ಗೆಟ್…! | ಅಕ್ಕಿ, ಬೆಲ್ಲ, ತರಕಾರಿ ತಿನ್ನುವ ಈ ಚೋರ ಯಾರು ? | ಈ ಚೋರನ ಸೆರೆಗೆ ಸಾಕಾನೆಗಳ ಕಾರ್ಯಾಚರಣೆ…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡಿ, ಚಿನ್ನ ಬೆಳ್ಳಿ, ನಗದು ಕಳವು ಮಾಡುವುದನ್ನು ಕೇಳಿದ್ದೀವಿ. ಆದರೆ ಇಲ್ಲೋಬ್ಬ ಕಳ್ಳ ಅಕ್ಕಿ, ಬೆಲ್ಲ, ತರಕಾರಿ ಕದ್ದು ಯಾರ ಕಣ್ಣಿಗೂ ಕಾಣದಂತೆ ಪರಾರಿಯಾಗುತ್ತಿದ್ದಾನೆ.  ಮನೆಯಿಂದ ಇವೆಲ್ಲ ಕದ್ದು ಉಂಡು ಮಜಾ ಮಾಡಿ ಉಂಡಾಡಿ ಗುಂಡನ ಹಾಗೆ ಕಣ್ಣು ತಪ್ಪಿಸಿ ತಿರುಗುತ್ತಿದ್ದಾನೆ ಈ ಕಳ್ಳ…! ಈ ಮಹಾನ್ ಕಿಲಾಡಿ ಯಾರು..? .

Advertisement
Advertisement

ಬಂಡೀಪುರ ಅರಣ್ಯದಂಚಿನಲ್ಲಿ ಕಾಡಾನೆ ಪುಂಡಾಟ ಜೋರಾಗಿದೆ. ಕರ್ನಾಟಕ, ತಮಿಳುನಾಡು, ಕೇರಳ ಮೂರು ರಾಜ್ಯಗಳಲ್ಲಿಯೂ ಆನೆಗಳು ಸಂಚರಿಸಿ ಬೆಳೆ ನಾಶ, ಸೋಲಾರ್ ಬೇಲಿ ತಂತಿ ತುಳಿದು ಹಾನಿ ಮಾಡಿವೆ. ಒಂಟಿ ಮನೆಗಳನ್ನು ಟಾರ್ಗೆಟ್ ಮಾಡಿ ಅಲ್ಲಿ ಒಂಟಿ ಸಲಗ ಅಕ್ಕಿ, ಬೆಲ್ಲ ತರಕಾರಿ ಮೇಯುತ್ತಿದೆ. ಗುಂಡ್ಲುಪೇಟೆ ತಾಲೂಕು ಹುಂಡೀಪುರ, ಮಂಗಲ, ಜಕ್ಕಳ್ಳಿ, ಎಲಚೆಟ್ಟಿ ಸೇರಿದಂತೆ ಹಲವೆಡೆ ಕಾಡಾನೆ ಉಪಟಳ ಹೆಚ್ಚಾಗಿದೆ. ಪುಂಡಾನೆ ಸೆರೆಗೆ ಸಾಕಾನೆಗಳ ಕಾರ್ಯಾಚರಣೆ ಇದೀಗ ಆರಂಭಿಸಲಾಗಿದೆ.

 

ಕಳೆದ 5 ತಿಂಗಳಿಂದ ನಿರಂತರವಾಗಿ ಉಪಟಳ ನೀಡುತ್ತಿರುವ ಒಂಟಿ ಆನೆಯನ್ನು ಸೆರೆಹಿಡಿಯಲು ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ. 5 ಸಾಕಾನೆಗಳಿಂದ ಪುಂಡಾನೆಯನ್ನು ಸೆರೆಹಿಡಿಯಲು ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ದುಬಾರೆ, ರಾಮಾಪುರ ಬಿಳಿಗಿರಿರಂಗನ ಬೆಟ್ಟದಿಂದ ಸಾಕಾನೆಗಳನ್ನು ಕರೆತರಲಾಗಿದೆ.

ಈಗಾಗಲೇ ಡ್ರೋನ್ ಕಾರ್ಯಾಚರಣೆ ಮೂಲಕ ಪುಂಡಾನೆ ಪತ್ತೆಹಚ್ಚಲಾಗಿದೆ. ಎಲಚೆಟ್ಟಿ ಬಳಿ ಒಂಟಿ ಸಲಗದ ಸುಳಿವು ಸಿಕ್ಕಿದೆ. ಶೀಘ್ರದಲ್ಲೇ ಅರಣ್ಯ ಸಿಬ್ಬಂದಿ ಪುಂಡಾನೆ ಹಿಡಿಯುವ ನಿರೀಕ್ಷೆಯಲ್ಲಿದ್ದಾರೆ.

Advertisement

ಮಾರಳ್ಳಿ ಗ್ರಾಮದಲ್ಲಿ ಕಳೆದ ಶುಕ್ರವಾರ ರಾತ್ರಿ ಆನೆ ತುಳಿದು ರೈತರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯ ಇಲಾಖೆಯ ಎರಡು ಜೀಪ್‌ಗಳನ್ನು ಜಖಂಗೊಳಿಸಿದ್ದಲ್ಲದೇ, ಪ್ರತಿಭಟನೆ ನಡೆಸಿ ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಹಾಗೂ ಪುಂಡಾನೆಯನ್ನು ಹಿಡಿದು ಬೇರೆಡೆ ಬಿಡುವಂತೆ ಒತ್ತಾ ಯಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದು ಕೊಂಡಿದ್ದರು. ಈ ಸಂದರ್ಭ ದಲ್ಲಿ ಪುಂಡಾನೆಯನ್ನು ಹಿಡಿಯುವ ಭರವಸೆಯನ್ನು ಅರಣ್ಯಾಧಿಕಾರಿಗಳು ನೀಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

5 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

6 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

7 hours ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

7 hours ago

ಫಸಲ್ ವಿಮಾ ಯೋಜನೆ | ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ

2025 ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ…

7 hours ago