ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡಿ, ಚಿನ್ನ ಬೆಳ್ಳಿ, ನಗದು ಕಳವು ಮಾಡುವುದನ್ನು ಕೇಳಿದ್ದೀವಿ. ಆದರೆ ಇಲ್ಲೋಬ್ಬ ಕಳ್ಳ ಅಕ್ಕಿ, ಬೆಲ್ಲ, ತರಕಾರಿ ಕದ್ದು ಯಾರ ಕಣ್ಣಿಗೂ ಕಾಣದಂತೆ ಪರಾರಿಯಾಗುತ್ತಿದ್ದಾನೆ. ಮನೆಯಿಂದ ಇವೆಲ್ಲ ಕದ್ದು ಉಂಡು ಮಜಾ ಮಾಡಿ ಉಂಡಾಡಿ ಗುಂಡನ ಹಾಗೆ ಕಣ್ಣು ತಪ್ಪಿಸಿ ತಿರುಗುತ್ತಿದ್ದಾನೆ ಈ ಕಳ್ಳ…! ಈ ಮಹಾನ್ ಕಿಲಾಡಿ ಯಾರು..? .
ಬಂಡೀಪುರ ಅರಣ್ಯದಂಚಿನಲ್ಲಿ ಕಾಡಾನೆ ಪುಂಡಾಟ ಜೋರಾಗಿದೆ. ಕರ್ನಾಟಕ, ತಮಿಳುನಾಡು, ಕೇರಳ ಮೂರು ರಾಜ್ಯಗಳಲ್ಲಿಯೂ ಆನೆಗಳು ಸಂಚರಿಸಿ ಬೆಳೆ ನಾಶ, ಸೋಲಾರ್ ಬೇಲಿ ತಂತಿ ತುಳಿದು ಹಾನಿ ಮಾಡಿವೆ. ಒಂಟಿ ಮನೆಗಳನ್ನು ಟಾರ್ಗೆಟ್ ಮಾಡಿ ಅಲ್ಲಿ ಒಂಟಿ ಸಲಗ ಅಕ್ಕಿ, ಬೆಲ್ಲ ತರಕಾರಿ ಮೇಯುತ್ತಿದೆ. ಗುಂಡ್ಲುಪೇಟೆ ತಾಲೂಕು ಹುಂಡೀಪುರ, ಮಂಗಲ, ಜಕ್ಕಳ್ಳಿ, ಎಲಚೆಟ್ಟಿ ಸೇರಿದಂತೆ ಹಲವೆಡೆ ಕಾಡಾನೆ ಉಪಟಳ ಹೆಚ್ಚಾಗಿದೆ. ಪುಂಡಾನೆ ಸೆರೆಗೆ ಸಾಕಾನೆಗಳ ಕಾರ್ಯಾಚರಣೆ ಇದೀಗ ಆರಂಭಿಸಲಾಗಿದೆ.
ಕಳೆದ 5 ತಿಂಗಳಿಂದ ನಿರಂತರವಾಗಿ ಉಪಟಳ ನೀಡುತ್ತಿರುವ ಒಂಟಿ ಆನೆಯನ್ನು ಸೆರೆಹಿಡಿಯಲು ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ. 5 ಸಾಕಾನೆಗಳಿಂದ ಪುಂಡಾನೆಯನ್ನು ಸೆರೆಹಿಡಿಯಲು ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ದುಬಾರೆ, ರಾಮಾಪುರ ಬಿಳಿಗಿರಿರಂಗನ ಬೆಟ್ಟದಿಂದ ಸಾಕಾನೆಗಳನ್ನು ಕರೆತರಲಾಗಿದೆ.
ಈಗಾಗಲೇ ಡ್ರೋನ್ ಕಾರ್ಯಾಚರಣೆ ಮೂಲಕ ಪುಂಡಾನೆ ಪತ್ತೆಹಚ್ಚಲಾಗಿದೆ. ಎಲಚೆಟ್ಟಿ ಬಳಿ ಒಂಟಿ ಸಲಗದ ಸುಳಿವು ಸಿಕ್ಕಿದೆ. ಶೀಘ್ರದಲ್ಲೇ ಅರಣ್ಯ ಸಿಬ್ಬಂದಿ ಪುಂಡಾನೆ ಹಿಡಿಯುವ ನಿರೀಕ್ಷೆಯಲ್ಲಿದ್ದಾರೆ.
ಮಾರಳ್ಳಿ ಗ್ರಾಮದಲ್ಲಿ ಕಳೆದ ಶುಕ್ರವಾರ ರಾತ್ರಿ ಆನೆ ತುಳಿದು ರೈತರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯ ಇಲಾಖೆಯ ಎರಡು ಜೀಪ್ಗಳನ್ನು ಜಖಂಗೊಳಿಸಿದ್ದಲ್ಲದೇ, ಪ್ರತಿಭಟನೆ ನಡೆಸಿ ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಹಾಗೂ ಪುಂಡಾನೆಯನ್ನು ಹಿಡಿದು ಬೇರೆಡೆ ಬಿಡುವಂತೆ ಒತ್ತಾ ಯಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದು ಕೊಂಡಿದ್ದರು. ಈ ಸಂದರ್ಭ ದಲ್ಲಿ ಪುಂಡಾನೆಯನ್ನು ಹಿಡಿಯುವ ಭರವಸೆಯನ್ನು ಅರಣ್ಯಾಧಿಕಾರಿಗಳು ನೀಡಿದ್ದರು.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…