ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡಿ, ಚಿನ್ನ ಬೆಳ್ಳಿ, ನಗದು ಕಳವು ಮಾಡುವುದನ್ನು ಕೇಳಿದ್ದೀವಿ. ಆದರೆ ಇಲ್ಲೋಬ್ಬ ಕಳ್ಳ ಅಕ್ಕಿ, ಬೆಲ್ಲ, ತರಕಾರಿ ಕದ್ದು ಯಾರ ಕಣ್ಣಿಗೂ ಕಾಣದಂತೆ ಪರಾರಿಯಾಗುತ್ತಿದ್ದಾನೆ. ಮನೆಯಿಂದ ಇವೆಲ್ಲ ಕದ್ದು ಉಂಡು ಮಜಾ ಮಾಡಿ ಉಂಡಾಡಿ ಗುಂಡನ ಹಾಗೆ ಕಣ್ಣು ತಪ್ಪಿಸಿ ತಿರುಗುತ್ತಿದ್ದಾನೆ ಈ ಕಳ್ಳ…! ಈ ಮಹಾನ್ ಕಿಲಾಡಿ ಯಾರು..? .
ಬಂಡೀಪುರ ಅರಣ್ಯದಂಚಿನಲ್ಲಿ ಕಾಡಾನೆ ಪುಂಡಾಟ ಜೋರಾಗಿದೆ. ಕರ್ನಾಟಕ, ತಮಿಳುನಾಡು, ಕೇರಳ ಮೂರು ರಾಜ್ಯಗಳಲ್ಲಿಯೂ ಆನೆಗಳು ಸಂಚರಿಸಿ ಬೆಳೆ ನಾಶ, ಸೋಲಾರ್ ಬೇಲಿ ತಂತಿ ತುಳಿದು ಹಾನಿ ಮಾಡಿವೆ. ಒಂಟಿ ಮನೆಗಳನ್ನು ಟಾರ್ಗೆಟ್ ಮಾಡಿ ಅಲ್ಲಿ ಒಂಟಿ ಸಲಗ ಅಕ್ಕಿ, ಬೆಲ್ಲ ತರಕಾರಿ ಮೇಯುತ್ತಿದೆ. ಗುಂಡ್ಲುಪೇಟೆ ತಾಲೂಕು ಹುಂಡೀಪುರ, ಮಂಗಲ, ಜಕ್ಕಳ್ಳಿ, ಎಲಚೆಟ್ಟಿ ಸೇರಿದಂತೆ ಹಲವೆಡೆ ಕಾಡಾನೆ ಉಪಟಳ ಹೆಚ್ಚಾಗಿದೆ. ಪುಂಡಾನೆ ಸೆರೆಗೆ ಸಾಕಾನೆಗಳ ಕಾರ್ಯಾಚರಣೆ ಇದೀಗ ಆರಂಭಿಸಲಾಗಿದೆ.
ಕಳೆದ 5 ತಿಂಗಳಿಂದ ನಿರಂತರವಾಗಿ ಉಪಟಳ ನೀಡುತ್ತಿರುವ ಒಂಟಿ ಆನೆಯನ್ನು ಸೆರೆಹಿಡಿಯಲು ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ. 5 ಸಾಕಾನೆಗಳಿಂದ ಪುಂಡಾನೆಯನ್ನು ಸೆರೆಹಿಡಿಯಲು ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ದುಬಾರೆ, ರಾಮಾಪುರ ಬಿಳಿಗಿರಿರಂಗನ ಬೆಟ್ಟದಿಂದ ಸಾಕಾನೆಗಳನ್ನು ಕರೆತರಲಾಗಿದೆ.
ಈಗಾಗಲೇ ಡ್ರೋನ್ ಕಾರ್ಯಾಚರಣೆ ಮೂಲಕ ಪುಂಡಾನೆ ಪತ್ತೆಹಚ್ಚಲಾಗಿದೆ. ಎಲಚೆಟ್ಟಿ ಬಳಿ ಒಂಟಿ ಸಲಗದ ಸುಳಿವು ಸಿಕ್ಕಿದೆ. ಶೀಘ್ರದಲ್ಲೇ ಅರಣ್ಯ ಸಿಬ್ಬಂದಿ ಪುಂಡಾನೆ ಹಿಡಿಯುವ ನಿರೀಕ್ಷೆಯಲ್ಲಿದ್ದಾರೆ.
ಮಾರಳ್ಳಿ ಗ್ರಾಮದಲ್ಲಿ ಕಳೆದ ಶುಕ್ರವಾರ ರಾತ್ರಿ ಆನೆ ತುಳಿದು ರೈತರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯ ಇಲಾಖೆಯ ಎರಡು ಜೀಪ್ಗಳನ್ನು ಜಖಂಗೊಳಿಸಿದ್ದಲ್ಲದೇ, ಪ್ರತಿಭಟನೆ ನಡೆಸಿ ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಹಾಗೂ ಪುಂಡಾನೆಯನ್ನು ಹಿಡಿದು ಬೇರೆಡೆ ಬಿಡುವಂತೆ ಒತ್ತಾ ಯಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದು ಕೊಂಡಿದ್ದರು. ಈ ಸಂದರ್ಭ ದಲ್ಲಿ ಪುಂಡಾನೆಯನ್ನು ಹಿಡಿಯುವ ಭರವಸೆಯನ್ನು ಅರಣ್ಯಾಧಿಕಾರಿಗಳು ನೀಡಿದ್ದರು.
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…