Advertisement
ಸುದ್ದಿಗಳು

ಒಂಟಿ ಮನೆಗಳೇ ಈ ಕಳ್ಳನ ಟಾರ್ಗೆಟ್…! | ಅಕ್ಕಿ, ಬೆಲ್ಲ, ತರಕಾರಿ ತಿನ್ನುವ ಈ ಚೋರ ಯಾರು ? | ಈ ಚೋರನ ಸೆರೆಗೆ ಸಾಕಾನೆಗಳ ಕಾರ್ಯಾಚರಣೆ…! |

Share

ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡಿ, ಚಿನ್ನ ಬೆಳ್ಳಿ, ನಗದು ಕಳವು ಮಾಡುವುದನ್ನು ಕೇಳಿದ್ದೀವಿ. ಆದರೆ ಇಲ್ಲೋಬ್ಬ ಕಳ್ಳ ಅಕ್ಕಿ, ಬೆಲ್ಲ, ತರಕಾರಿ ಕದ್ದು ಯಾರ ಕಣ್ಣಿಗೂ ಕಾಣದಂತೆ ಪರಾರಿಯಾಗುತ್ತಿದ್ದಾನೆ.  ಮನೆಯಿಂದ ಇವೆಲ್ಲ ಕದ್ದು ಉಂಡು ಮಜಾ ಮಾಡಿ ಉಂಡಾಡಿ ಗುಂಡನ ಹಾಗೆ ಕಣ್ಣು ತಪ್ಪಿಸಿ ತಿರುಗುತ್ತಿದ್ದಾನೆ ಈ ಕಳ್ಳ…! ಈ ಮಹಾನ್ ಕಿಲಾಡಿ ಯಾರು..? .

ಬಂಡೀಪುರ ಅರಣ್ಯದಂಚಿನಲ್ಲಿ ಕಾಡಾನೆ ಪುಂಡಾಟ ಜೋರಾಗಿದೆ. ಕರ್ನಾಟಕ, ತಮಿಳುನಾಡು, ಕೇರಳ ಮೂರು ರಾಜ್ಯಗಳಲ್ಲಿಯೂ ಆನೆಗಳು ಸಂಚರಿಸಿ ಬೆಳೆ ನಾಶ, ಸೋಲಾರ್ ಬೇಲಿ ತಂತಿ ತುಳಿದು ಹಾನಿ ಮಾಡಿವೆ. ಒಂಟಿ ಮನೆಗಳನ್ನು ಟಾರ್ಗೆಟ್ ಮಾಡಿ ಅಲ್ಲಿ ಒಂಟಿ ಸಲಗ ಅಕ್ಕಿ, ಬೆಲ್ಲ ತರಕಾರಿ ಮೇಯುತ್ತಿದೆ. ಗುಂಡ್ಲುಪೇಟೆ ತಾಲೂಕು ಹುಂಡೀಪುರ, ಮಂಗಲ, ಜಕ್ಕಳ್ಳಿ, ಎಲಚೆಟ್ಟಿ ಸೇರಿದಂತೆ ಹಲವೆಡೆ ಕಾಡಾನೆ ಉಪಟಳ ಹೆಚ್ಚಾಗಿದೆ. ಪುಂಡಾನೆ ಸೆರೆಗೆ ಸಾಕಾನೆಗಳ ಕಾರ್ಯಾಚರಣೆ ಇದೀಗ ಆರಂಭಿಸಲಾಗಿದೆ.

 

ಕಳೆದ 5 ತಿಂಗಳಿಂದ ನಿರಂತರವಾಗಿ ಉಪಟಳ ನೀಡುತ್ತಿರುವ ಒಂಟಿ ಆನೆಯನ್ನು ಸೆರೆಹಿಡಿಯಲು ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ. 5 ಸಾಕಾನೆಗಳಿಂದ ಪುಂಡಾನೆಯನ್ನು ಸೆರೆಹಿಡಿಯಲು ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ದುಬಾರೆ, ರಾಮಾಪುರ ಬಿಳಿಗಿರಿರಂಗನ ಬೆಟ್ಟದಿಂದ ಸಾಕಾನೆಗಳನ್ನು ಕರೆತರಲಾಗಿದೆ.

ಈಗಾಗಲೇ ಡ್ರೋನ್ ಕಾರ್ಯಾಚರಣೆ ಮೂಲಕ ಪುಂಡಾನೆ ಪತ್ತೆಹಚ್ಚಲಾಗಿದೆ. ಎಲಚೆಟ್ಟಿ ಬಳಿ ಒಂಟಿ ಸಲಗದ ಸುಳಿವು ಸಿಕ್ಕಿದೆ. ಶೀಘ್ರದಲ್ಲೇ ಅರಣ್ಯ ಸಿಬ್ಬಂದಿ ಪುಂಡಾನೆ ಹಿಡಿಯುವ ನಿರೀಕ್ಷೆಯಲ್ಲಿದ್ದಾರೆ.

ಮಾರಳ್ಳಿ ಗ್ರಾಮದಲ್ಲಿ ಕಳೆದ ಶುಕ್ರವಾರ ರಾತ್ರಿ ಆನೆ ತುಳಿದು ರೈತರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯ ಇಲಾಖೆಯ ಎರಡು ಜೀಪ್‌ಗಳನ್ನು ಜಖಂಗೊಳಿಸಿದ್ದಲ್ಲದೇ, ಪ್ರತಿಭಟನೆ ನಡೆಸಿ ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಹಾಗೂ ಪುಂಡಾನೆಯನ್ನು ಹಿಡಿದು ಬೇರೆಡೆ ಬಿಡುವಂತೆ ಒತ್ತಾ ಯಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದು ಕೊಂಡಿದ್ದರು. ಈ ಸಂದರ್ಭ ದಲ್ಲಿ ಪುಂಡಾನೆಯನ್ನು ಹಿಡಿಯುವ ಭರವಸೆಯನ್ನು ಅರಣ್ಯಾಧಿಕಾರಿಗಳು ನೀಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?

ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…

7 hours ago

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

17 hours ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

18 hours ago

ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ

ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್‌ನ ಪ್ರಬಲ ಚಂಡಮಾರುತ…

22 hours ago

ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ

ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…

23 hours ago

ಆರೋಪದ ಆಚೆ ನಿಂತು ಒಮ್ಮೆ ಯೋಚಿಸಿದ್ದೀರಾ..?

ಯಾರನ್ನಾದರೂ ಆರೋಪಿಸುವ ಮೊದಲು ಅವರ ಪರಿಸ್ಥಿತಿ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡಿದರೆ ಅನೇಕ ಸಂಬಂಧಗಳು…

1 day ago