ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡಿ, ಚಿನ್ನ ಬೆಳ್ಳಿ, ನಗದು ಕಳವು ಮಾಡುವುದನ್ನು ಕೇಳಿದ್ದೀವಿ. ಆದರೆ ಇಲ್ಲೋಬ್ಬ ಕಳ್ಳ ಅಕ್ಕಿ, ಬೆಲ್ಲ, ತರಕಾರಿ ಕದ್ದು ಯಾರ ಕಣ್ಣಿಗೂ ಕಾಣದಂತೆ ಪರಾರಿಯಾಗುತ್ತಿದ್ದಾನೆ. ಮನೆಯಿಂದ ಇವೆಲ್ಲ ಕದ್ದು ಉಂಡು ಮಜಾ ಮಾಡಿ ಉಂಡಾಡಿ ಗುಂಡನ ಹಾಗೆ ಕಣ್ಣು ತಪ್ಪಿಸಿ ತಿರುಗುತ್ತಿದ್ದಾನೆ ಈ ಕಳ್ಳ…! ಈ ಮಹಾನ್ ಕಿಲಾಡಿ ಯಾರು..? .
ಬಂಡೀಪುರ ಅರಣ್ಯದಂಚಿನಲ್ಲಿ ಕಾಡಾನೆ ಪುಂಡಾಟ ಜೋರಾಗಿದೆ. ಕರ್ನಾಟಕ, ತಮಿಳುನಾಡು, ಕೇರಳ ಮೂರು ರಾಜ್ಯಗಳಲ್ಲಿಯೂ ಆನೆಗಳು ಸಂಚರಿಸಿ ಬೆಳೆ ನಾಶ, ಸೋಲಾರ್ ಬೇಲಿ ತಂತಿ ತುಳಿದು ಹಾನಿ ಮಾಡಿವೆ. ಒಂಟಿ ಮನೆಗಳನ್ನು ಟಾರ್ಗೆಟ್ ಮಾಡಿ ಅಲ್ಲಿ ಒಂಟಿ ಸಲಗ ಅಕ್ಕಿ, ಬೆಲ್ಲ ತರಕಾರಿ ಮೇಯುತ್ತಿದೆ. ಗುಂಡ್ಲುಪೇಟೆ ತಾಲೂಕು ಹುಂಡೀಪುರ, ಮಂಗಲ, ಜಕ್ಕಳ್ಳಿ, ಎಲಚೆಟ್ಟಿ ಸೇರಿದಂತೆ ಹಲವೆಡೆ ಕಾಡಾನೆ ಉಪಟಳ ಹೆಚ್ಚಾಗಿದೆ. ಪುಂಡಾನೆ ಸೆರೆಗೆ ಸಾಕಾನೆಗಳ ಕಾರ್ಯಾಚರಣೆ ಇದೀಗ ಆರಂಭಿಸಲಾಗಿದೆ.
ಕಳೆದ 5 ತಿಂಗಳಿಂದ ನಿರಂತರವಾಗಿ ಉಪಟಳ ನೀಡುತ್ತಿರುವ ಒಂಟಿ ಆನೆಯನ್ನು ಸೆರೆಹಿಡಿಯಲು ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ. 5 ಸಾಕಾನೆಗಳಿಂದ ಪುಂಡಾನೆಯನ್ನು ಸೆರೆಹಿಡಿಯಲು ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ದುಬಾರೆ, ರಾಮಾಪುರ ಬಿಳಿಗಿರಿರಂಗನ ಬೆಟ್ಟದಿಂದ ಸಾಕಾನೆಗಳನ್ನು ಕರೆತರಲಾಗಿದೆ.
ಈಗಾಗಲೇ ಡ್ರೋನ್ ಕಾರ್ಯಾಚರಣೆ ಮೂಲಕ ಪುಂಡಾನೆ ಪತ್ತೆಹಚ್ಚಲಾಗಿದೆ. ಎಲಚೆಟ್ಟಿ ಬಳಿ ಒಂಟಿ ಸಲಗದ ಸುಳಿವು ಸಿಕ್ಕಿದೆ. ಶೀಘ್ರದಲ್ಲೇ ಅರಣ್ಯ ಸಿಬ್ಬಂದಿ ಪುಂಡಾನೆ ಹಿಡಿಯುವ ನಿರೀಕ್ಷೆಯಲ್ಲಿದ್ದಾರೆ.
ಮಾರಳ್ಳಿ ಗ್ರಾಮದಲ್ಲಿ ಕಳೆದ ಶುಕ್ರವಾರ ರಾತ್ರಿ ಆನೆ ತುಳಿದು ರೈತರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯ ಇಲಾಖೆಯ ಎರಡು ಜೀಪ್ಗಳನ್ನು ಜಖಂಗೊಳಿಸಿದ್ದಲ್ಲದೇ, ಪ್ರತಿಭಟನೆ ನಡೆಸಿ ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಹಾಗೂ ಪುಂಡಾನೆಯನ್ನು ಹಿಡಿದು ಬೇರೆಡೆ ಬಿಡುವಂತೆ ಒತ್ತಾ ಯಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದು ಕೊಂಡಿದ್ದರು. ಈ ಸಂದರ್ಭ ದಲ್ಲಿ ಪುಂಡಾನೆಯನ್ನು ಹಿಡಿಯುವ ಭರವಸೆಯನ್ನು ಅರಣ್ಯಾಧಿಕಾರಿಗಳು ನೀಡಿದ್ದರು.
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…