Advertisement
ಸುದ್ದಿಗಳು

ಒಂಟಿ ಮನೆಗಳೇ ಈ ಕಳ್ಳನ ಟಾರ್ಗೆಟ್…! | ಅಕ್ಕಿ, ಬೆಲ್ಲ, ತರಕಾರಿ ತಿನ್ನುವ ಈ ಚೋರ ಯಾರು ? | ಈ ಚೋರನ ಸೆರೆಗೆ ಸಾಕಾನೆಗಳ ಕಾರ್ಯಾಚರಣೆ…! |

Share

ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡಿ, ಚಿನ್ನ ಬೆಳ್ಳಿ, ನಗದು ಕಳವು ಮಾಡುವುದನ್ನು ಕೇಳಿದ್ದೀವಿ. ಆದರೆ ಇಲ್ಲೋಬ್ಬ ಕಳ್ಳ ಅಕ್ಕಿ, ಬೆಲ್ಲ, ತರಕಾರಿ ಕದ್ದು ಯಾರ ಕಣ್ಣಿಗೂ ಕಾಣದಂತೆ ಪರಾರಿಯಾಗುತ್ತಿದ್ದಾನೆ.  ಮನೆಯಿಂದ ಇವೆಲ್ಲ ಕದ್ದು ಉಂಡು ಮಜಾ ಮಾಡಿ ಉಂಡಾಡಿ ಗುಂಡನ ಹಾಗೆ ಕಣ್ಣು ತಪ್ಪಿಸಿ ತಿರುಗುತ್ತಿದ್ದಾನೆ ಈ ಕಳ್ಳ…! ಈ ಮಹಾನ್ ಕಿಲಾಡಿ ಯಾರು..? .

ಬಂಡೀಪುರ ಅರಣ್ಯದಂಚಿನಲ್ಲಿ ಕಾಡಾನೆ ಪುಂಡಾಟ ಜೋರಾಗಿದೆ. ಕರ್ನಾಟಕ, ತಮಿಳುನಾಡು, ಕೇರಳ ಮೂರು ರಾಜ್ಯಗಳಲ್ಲಿಯೂ ಆನೆಗಳು ಸಂಚರಿಸಿ ಬೆಳೆ ನಾಶ, ಸೋಲಾರ್ ಬೇಲಿ ತಂತಿ ತುಳಿದು ಹಾನಿ ಮಾಡಿವೆ. ಒಂಟಿ ಮನೆಗಳನ್ನು ಟಾರ್ಗೆಟ್ ಮಾಡಿ ಅಲ್ಲಿ ಒಂಟಿ ಸಲಗ ಅಕ್ಕಿ, ಬೆಲ್ಲ ತರಕಾರಿ ಮೇಯುತ್ತಿದೆ. ಗುಂಡ್ಲುಪೇಟೆ ತಾಲೂಕು ಹುಂಡೀಪುರ, ಮಂಗಲ, ಜಕ್ಕಳ್ಳಿ, ಎಲಚೆಟ್ಟಿ ಸೇರಿದಂತೆ ಹಲವೆಡೆ ಕಾಡಾನೆ ಉಪಟಳ ಹೆಚ್ಚಾಗಿದೆ. ಪುಂಡಾನೆ ಸೆರೆಗೆ ಸಾಕಾನೆಗಳ ಕಾರ್ಯಾಚರಣೆ ಇದೀಗ ಆರಂಭಿಸಲಾಗಿದೆ.

 

ಕಳೆದ 5 ತಿಂಗಳಿಂದ ನಿರಂತರವಾಗಿ ಉಪಟಳ ನೀಡುತ್ತಿರುವ ಒಂಟಿ ಆನೆಯನ್ನು ಸೆರೆಹಿಡಿಯಲು ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ. 5 ಸಾಕಾನೆಗಳಿಂದ ಪುಂಡಾನೆಯನ್ನು ಸೆರೆಹಿಡಿಯಲು ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ದುಬಾರೆ, ರಾಮಾಪುರ ಬಿಳಿಗಿರಿರಂಗನ ಬೆಟ್ಟದಿಂದ ಸಾಕಾನೆಗಳನ್ನು ಕರೆತರಲಾಗಿದೆ.

ಈಗಾಗಲೇ ಡ್ರೋನ್ ಕಾರ್ಯಾಚರಣೆ ಮೂಲಕ ಪುಂಡಾನೆ ಪತ್ತೆಹಚ್ಚಲಾಗಿದೆ. ಎಲಚೆಟ್ಟಿ ಬಳಿ ಒಂಟಿ ಸಲಗದ ಸುಳಿವು ಸಿಕ್ಕಿದೆ. ಶೀಘ್ರದಲ್ಲೇ ಅರಣ್ಯ ಸಿಬ್ಬಂದಿ ಪುಂಡಾನೆ ಹಿಡಿಯುವ ನಿರೀಕ್ಷೆಯಲ್ಲಿದ್ದಾರೆ.

ಮಾರಳ್ಳಿ ಗ್ರಾಮದಲ್ಲಿ ಕಳೆದ ಶುಕ್ರವಾರ ರಾತ್ರಿ ಆನೆ ತುಳಿದು ರೈತರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯ ಇಲಾಖೆಯ ಎರಡು ಜೀಪ್‌ಗಳನ್ನು ಜಖಂಗೊಳಿಸಿದ್ದಲ್ಲದೇ, ಪ್ರತಿಭಟನೆ ನಡೆಸಿ ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಹಾಗೂ ಪುಂಡಾನೆಯನ್ನು ಹಿಡಿದು ಬೇರೆಡೆ ಬಿಡುವಂತೆ ಒತ್ತಾ ಯಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದು ಕೊಂಡಿದ್ದರು. ಈ ಸಂದರ್ಭ ದಲ್ಲಿ ಪುಂಡಾನೆಯನ್ನು ಹಿಡಿಯುವ ಭರವಸೆಯನ್ನು ಅರಣ್ಯಾಧಿಕಾರಿಗಳು ನೀಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

1 minute ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

11 minutes ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

1 hour ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

3 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

14 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

15 hours ago