Advertisement
ಸುದ್ದಿಗಳು

ಒಂಟಿ ಮನೆಗಳೇ ಈ ಕಳ್ಳನ ಟಾರ್ಗೆಟ್…! | ಅಕ್ಕಿ, ಬೆಲ್ಲ, ತರಕಾರಿ ತಿನ್ನುವ ಈ ಚೋರ ಯಾರು ? | ಈ ಚೋರನ ಸೆರೆಗೆ ಸಾಕಾನೆಗಳ ಕಾರ್ಯಾಚರಣೆ…! |

Share

ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡಿ, ಚಿನ್ನ ಬೆಳ್ಳಿ, ನಗದು ಕಳವು ಮಾಡುವುದನ್ನು ಕೇಳಿದ್ದೀವಿ. ಆದರೆ ಇಲ್ಲೋಬ್ಬ ಕಳ್ಳ ಅಕ್ಕಿ, ಬೆಲ್ಲ, ತರಕಾರಿ ಕದ್ದು ಯಾರ ಕಣ್ಣಿಗೂ ಕಾಣದಂತೆ ಪರಾರಿಯಾಗುತ್ತಿದ್ದಾನೆ.  ಮನೆಯಿಂದ ಇವೆಲ್ಲ ಕದ್ದು ಉಂಡು ಮಜಾ ಮಾಡಿ ಉಂಡಾಡಿ ಗುಂಡನ ಹಾಗೆ ಕಣ್ಣು ತಪ್ಪಿಸಿ ತಿರುಗುತ್ತಿದ್ದಾನೆ ಈ ಕಳ್ಳ…! ಈ ಮಹಾನ್ ಕಿಲಾಡಿ ಯಾರು..? .

ಬಂಡೀಪುರ ಅರಣ್ಯದಂಚಿನಲ್ಲಿ ಕಾಡಾನೆ ಪುಂಡಾಟ ಜೋರಾಗಿದೆ. ಕರ್ನಾಟಕ, ತಮಿಳುನಾಡು, ಕೇರಳ ಮೂರು ರಾಜ್ಯಗಳಲ್ಲಿಯೂ ಆನೆಗಳು ಸಂಚರಿಸಿ ಬೆಳೆ ನಾಶ, ಸೋಲಾರ್ ಬೇಲಿ ತಂತಿ ತುಳಿದು ಹಾನಿ ಮಾಡಿವೆ. ಒಂಟಿ ಮನೆಗಳನ್ನು ಟಾರ್ಗೆಟ್ ಮಾಡಿ ಅಲ್ಲಿ ಒಂಟಿ ಸಲಗ ಅಕ್ಕಿ, ಬೆಲ್ಲ ತರಕಾರಿ ಮೇಯುತ್ತಿದೆ. ಗುಂಡ್ಲುಪೇಟೆ ತಾಲೂಕು ಹುಂಡೀಪುರ, ಮಂಗಲ, ಜಕ್ಕಳ್ಳಿ, ಎಲಚೆಟ್ಟಿ ಸೇರಿದಂತೆ ಹಲವೆಡೆ ಕಾಡಾನೆ ಉಪಟಳ ಹೆಚ್ಚಾಗಿದೆ. ಪುಂಡಾನೆ ಸೆರೆಗೆ ಸಾಕಾನೆಗಳ ಕಾರ್ಯಾಚರಣೆ ಇದೀಗ ಆರಂಭಿಸಲಾಗಿದೆ.

 

ಕಳೆದ 5 ತಿಂಗಳಿಂದ ನಿರಂತರವಾಗಿ ಉಪಟಳ ನೀಡುತ್ತಿರುವ ಒಂಟಿ ಆನೆಯನ್ನು ಸೆರೆಹಿಡಿಯಲು ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ. 5 ಸಾಕಾನೆಗಳಿಂದ ಪುಂಡಾನೆಯನ್ನು ಸೆರೆಹಿಡಿಯಲು ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ದುಬಾರೆ, ರಾಮಾಪುರ ಬಿಳಿಗಿರಿರಂಗನ ಬೆಟ್ಟದಿಂದ ಸಾಕಾನೆಗಳನ್ನು ಕರೆತರಲಾಗಿದೆ.

ಈಗಾಗಲೇ ಡ್ರೋನ್ ಕಾರ್ಯಾಚರಣೆ ಮೂಲಕ ಪುಂಡಾನೆ ಪತ್ತೆಹಚ್ಚಲಾಗಿದೆ. ಎಲಚೆಟ್ಟಿ ಬಳಿ ಒಂಟಿ ಸಲಗದ ಸುಳಿವು ಸಿಕ್ಕಿದೆ. ಶೀಘ್ರದಲ್ಲೇ ಅರಣ್ಯ ಸಿಬ್ಬಂದಿ ಪುಂಡಾನೆ ಹಿಡಿಯುವ ನಿರೀಕ್ಷೆಯಲ್ಲಿದ್ದಾರೆ.

ಮಾರಳ್ಳಿ ಗ್ರಾಮದಲ್ಲಿ ಕಳೆದ ಶುಕ್ರವಾರ ರಾತ್ರಿ ಆನೆ ತುಳಿದು ರೈತರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯ ಇಲಾಖೆಯ ಎರಡು ಜೀಪ್‌ಗಳನ್ನು ಜಖಂಗೊಳಿಸಿದ್ದಲ್ಲದೇ, ಪ್ರತಿಭಟನೆ ನಡೆಸಿ ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಹಾಗೂ ಪುಂಡಾನೆಯನ್ನು ಹಿಡಿದು ಬೇರೆಡೆ ಬಿಡುವಂತೆ ಒತ್ತಾ ಯಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದು ಕೊಂಡಿದ್ದರು. ಈ ಸಂದರ್ಭ ದಲ್ಲಿ ಪುಂಡಾನೆಯನ್ನು ಹಿಡಿಯುವ ಭರವಸೆಯನ್ನು ಅರಣ್ಯಾಧಿಕಾರಿಗಳು ನೀಡಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 hour ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

10 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

17 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago