Advertisement
MIRROR FOCUS

ಪ್ರಾಣಿ ಹಾಗೂ ಮಾನವ ಸಂಘರ್ಷದಲ್ಲಿ ಬಲಿಯಾಗುತ್ತಿರುವ ಆನೆಗಳು | ನಿರ್ಮಾಣ ಹಂತದ ಬಾವಿಗೆ ಬಿದ್ದು ಕಾಡಾನೆ ಸಾವು

Share

ಕಳೆದ ವಾರವಷ್ಟೇ ಆನೆಯೊಂದು(Elephant) ವಿದ್ಯುತ್‌ ತಂತಿ(Electric wire) ತಗಲಿ ಮೃತಪಟ್ಟ(Death) ಬಗ್ಗೆ ಕೇಳಿದ್ದೆವು. ಇದೀಗ ಮತ್ತೋಂದು ಆನೆ ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದು ತನ್ನ ಪ್ರಾಣ ಕಳೆದುಕೊಂಡಿದೆ. ಮಾನವ ಹಾಗೂ ಪ್ರಾಣಿಗಳ ಸಂಘರ್ಷದಲ್ಲಿ ಆನೆಗಳು ತಮ್ಮ ಪ್ರಾಣವನ್ನು ಕಳೆದುಕೊಳ್ಳುವಂತಾಗಿದೆ. ತೆರೆದ ಬಾವಿಗೆ (Well) ಬಿದ್ದು ಕಾಡಾನೆ (Wild Elephant ) ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ (Virajpet) ತಾಲೂಕಿನ ಕೆದಮುಳ್ಳೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪಾಲಂಗಾಲ ಗ್ರಾಮದಲ್ಲಿ ನಡೆದಿದೆ.

ಗ್ರಾಮ ಪಂಚಾಯತ್ ವತಿಯಿಂದ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಬಾವಿಯನ್ನು ಕೊರೆಯಲಾಗಿತ್ತು. ಸೋಮವಾರ ರಾತ್ರಿ 11 ಗಂಟೆಗೆ ನಿರ್ಮಾಣ ಹಂತದಲ್ಲಿದ್ದ ಬಾವಿಗೆ ಬಿದ್ದು ಆನೆ ಮೃತಪಟ್ಟಿದೆ. ಕಳೆದ ಹಲವು ದಿನಗಳಿಂದ ಈ ಏರಿಯಾದಲ್ಲಿ ಆನೆಗಳು ಊರಿಗೆ ದಾಳಿ ಇಡುತ್ತಿದ್ದವು. ಇದೀಗ ಈ ಘಟನೆ ನಡೆದಿದೆ. ಪಾಲೇಂಗಡ ಬಿದ್ದಪ್ಪ ಶಂಬು ಆವರ ಮನೆ ಮುಂದೆ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಆಧಿಕಾರಿಗಳು ಭೇಟಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

40 minutes ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

7 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

7 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

9 hours ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

10 hours ago

ಹವಾಮಾನ ವರದಿ | 04-07-2026 | ಜುಲೈ 10ರ ಬಳಿಕ ಕರ್ನಾಟಕದಲ್ಲಿ ಮುಂಗಾರು ದುರ್ಬಲ..? ಕರಾವಳಿ-ಮಲೆನಾಡಿನಲ್ಲಿ ಮಳೆ ಇಳಿಕೆಗೆ ಮುನ್ಸೂಚನೆ

ಜುಲೈ 10ರ ಬಳಿಕ ರಾಜ್ಯದಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

11 hours ago