ಸುದ್ದಿಗಳು

ಸುಳ್ಯದ ಅಜ್ಜಾವರದಲ್ಲಿ ಕೆರೆಗೆ ಬಿದ್ದ ಕಾಡಾನೆಗಳು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಾಡಿನಿಂದ ಆಹಾರ ಅರಸುತ್ತಾ ಬಂದ ನಾಡಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡೊಂದು ತೋಟದೊಳಗೆ ನುಗ್ಗಿದ ಪರಿಣಾಮ ಕೆರೆಗೆ ಬಿದ್ದಿರುವ ಘಟನೆ ಸುಳ್ಯದ ಅಜ್ಜಾವರದಲ್ಲಿ ನಡೆದಿದೆ.ಕೆರೆಗೆ ಬಿದ್ದ ಎರಡು ದೊಡ್ಡ ಮತ್ತೆರಡು ಮರಿಯಾನೆಗಳು ಮೇಲೆ ಬರಲಾಗದೇ ಒದ್ದಾಡುತ್ತಿದ್ದು ಆನೆಯನ್ನು ಮೇಲೆತರಿಸುವ ತಯಾರಿ ನಡೆಸಲಾಗುತ್ತಿದೆ. 

ಅಜ್ಜಾವರದ ತುದಿಯಡ್ಕದ ಸಂತೋಷ್ ಎಂಬವರ ತೋಟದಲ್ಲಿ ಈ ಘಟನೆ ನಡೆದಿದ್ದು, ಕೆರೆಗೆ ಬಿದ್ದ ಎರಡು ದೊಡ್ಡ ಮತ್ತೆರಡು ಮರಿಯಾನೆಗಳು ಮೇಲೆ ಬರಲಾಗದೇ ಒದ್ದಾಡುತ್ತಿದೆ.

ಸ್ಥಳಕ್ಕೆ ಸುಳ್ಯ ವಲಯ ಅರಣ್ಯಾಧಿಕಾರಿಗಳು ದಾಂಗುಡಿ ಇಟ್ಟಿದ್ದು, ಆನೆಗಳ ರಕ್ಷಣೆಗೆ ಪ್ರಯತ್ನಿಸುತ್ತಿದ್ದಾರೆ. ಅಜ್ಜಾವರ, ಆಲೆಟ್ಟಿ ಗ್ರಾಮಗಳಲ್ಲಿ ಆನೆಗಳ ಹಾವಳಿ ಜೋರಾಗಿದ್ದು, ಅಪಾರ ಪ್ರಮಾಣದ ಕೃಷಿನಾಶ ಸಂಭವಿಸುತ್ತಿರುತ್ತದೆ.

ಆಹಾರ ಮತ್ತು ನೀರನ್ನು ಅರಸಿ ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳ ಹಿಂಡೊಂದು ತೋಟದೊಳಗಿನ ಕೆರೆಗೆ ಬಿದ್ದು ಮೇಲೆ ಬರಲಾಗದೆ ಕೆರಯಲ್ಲೇ ಬಾಕಿಯಾಗಿರವ ಘಟನೆ ಸುಳ್ಯದ ಅಜ್ಜಾವರದಲ್ಲಿ ನಡೆದಿದೆ.
ಸ್ಥಳಕ್ಕೆ ಸುಳ್ಯ ವಲಯ ಅರಣ್ಯಾಧಿಕಾರಿಗಳು ಬೇಟಿ ನೀಡಿದ್ದು, ಆನೆಗಳ ರಕ್ಷಣೆಗೆ ಪ್ರಯತ್ನಿಸುತ್ತಿದ್ದಾರೆ. ಕಾಡಿನಲ್ಲಿ ಆಹಾರ ನೀರು ಕಡಿಮೆಯಾದಾಗ ಆಹಾರ  ಅರಸಿ ಬರುವ ಪ್ರಾಣಿಗಳು ಕೆರೆ ನೀರಿನ ಆಳದ ಅಂದಾಜು ಇಲ್ಲದೆ ಬಿದ್ದು ಸಿಕ್ಕಿ ಹಾಕಿಕೊಳ್ಳುವುದು ಸಾಮಾನ್ಯವಾಗಿದೆ,ಕೆರೆಗೆ ಬಿದ್ದ ಮರಿಯಾನೆ ರಕ್ಷಣೆಗೆ ದಾವಿಸಿದ ಹಿರಿಯಾನೆಗಳೂ ಕೆರೆಯಲ್ಲಿ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ಅಜ್ಜಾವರ, ಆಲೆಟ್ಟಿ ಗ್ರಾಮಗಳಲ್ಲಿ ಆನೆಗಳ ಹಾವಳಿ ಜೋರಾಗಿದ್ದು, ಅಪಾರ ಪ್ರಮಾಣದ ಕೃಷಿನಾಶ ಅಗಾಗ ನಡೆಯುತ್ತಲೇ ಇರುತ್ತವೆ.
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಂತರಂಗ | ಸ್ವಾರ್ಥರಹಿತ ಬೇಡಿಕೆಗಳಿಗೆ ರಾಜಕೀಯದಲ್ಲಿ ಮಾನ್ಯತೆಯಿಲ್ಲ…!

ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…

60 minutes ago

ಬದುಕು ಪುರಾಣ | ಎಲ್ಲರೊಳಗೂ ‘ಕುಂಭಕರ್ಣ’ನಿದ್ದಾನೆ!

ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…

1 hour ago

ದಾವಣಗೆರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ | ಬಾಡಿಗೆ ಆಧಾರದಲ್ಲಿ ಖಾಸಗಿ ಕೊಳವೆಬಾವಿ

ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…

1 hour ago

ಯಾದಗಿರಿ ಜಿಲ್ಲೆಗೆ ತಾಪಮಾನ ಎಚ್ಚರಿಕೆ | ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆ

ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…

2 hours ago

ಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…

2 hours ago

ರೈತರಿಗೆ ಕೃಷಿ ಚಟುವಟಿಕೆ ಜೊತೆಗೆ ಜಾನುವಾರು ಸಾಕಾಣಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ

ಕೃಷಿ, ತೋಟಗಾರಿಕೆ, ರೇಷ್ಮೆ ಚಟುವಟಿಕೆಗಳಲ್ಲಿ ಜಿಲ್ಲೆಯ ಸಾಕಷ್ಟು ರೈತರು ತೊಡಗಿಸಿಕೊಂಡಿದ್ದು ಅಂತಹ ರೈತರಿಗೆ…

2 hours ago