Advertisement
ಸುದ್ದಿಗಳು

ಸುಳ್ಯದ ಅಜ್ಜಾವರದಲ್ಲಿ ಕೆರೆಗೆ ಬಿದ್ದ ಕಾಡಾನೆಗಳು |

Share

ಕಾಡಿನಿಂದ ಆಹಾರ ಅರಸುತ್ತಾ ಬಂದ ನಾಡಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡೊಂದು ತೋಟದೊಳಗೆ ನುಗ್ಗಿದ ಪರಿಣಾಮ ಕೆರೆಗೆ ಬಿದ್ದಿರುವ ಘಟನೆ ಸುಳ್ಯದ ಅಜ್ಜಾವರದಲ್ಲಿ ನಡೆದಿದೆ.ಕೆರೆಗೆ ಬಿದ್ದ ಎರಡು ದೊಡ್ಡ ಮತ್ತೆರಡು ಮರಿಯಾನೆಗಳು ಮೇಲೆ ಬರಲಾಗದೇ ಒದ್ದಾಡುತ್ತಿದ್ದು ಆನೆಯನ್ನು ಮೇಲೆತರಿಸುವ ತಯಾರಿ ನಡೆಸಲಾಗುತ್ತಿದೆ. 

ಅಜ್ಜಾವರದ ತುದಿಯಡ್ಕದ ಸಂತೋಷ್ ಎಂಬವರ ತೋಟದಲ್ಲಿ ಈ ಘಟನೆ ನಡೆದಿದ್ದು, ಕೆರೆಗೆ ಬಿದ್ದ ಎರಡು ದೊಡ್ಡ ಮತ್ತೆರಡು ಮರಿಯಾನೆಗಳು ಮೇಲೆ ಬರಲಾಗದೇ ಒದ್ದಾಡುತ್ತಿದೆ.

ಸ್ಥಳಕ್ಕೆ ಸುಳ್ಯ ವಲಯ ಅರಣ್ಯಾಧಿಕಾರಿಗಳು ದಾಂಗುಡಿ ಇಟ್ಟಿದ್ದು, ಆನೆಗಳ ರಕ್ಷಣೆಗೆ ಪ್ರಯತ್ನಿಸುತ್ತಿದ್ದಾರೆ. ಅಜ್ಜಾವರ, ಆಲೆಟ್ಟಿ ಗ್ರಾಮಗಳಲ್ಲಿ ಆನೆಗಳ ಹಾವಳಿ ಜೋರಾಗಿದ್ದು, ಅಪಾರ ಪ್ರಮಾಣದ ಕೃಷಿನಾಶ ಸಂಭವಿಸುತ್ತಿರುತ್ತದೆ.

ಆಹಾರ ಮತ್ತು ನೀರನ್ನು ಅರಸಿ ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳ ಹಿಂಡೊಂದು ತೋಟದೊಳಗಿನ ಕೆರೆಗೆ ಬಿದ್ದು ಮೇಲೆ ಬರಲಾಗದೆ ಕೆರಯಲ್ಲೇ ಬಾಕಿಯಾಗಿರವ ಘಟನೆ ಸುಳ್ಯದ ಅಜ್ಜಾವರದಲ್ಲಿ ನಡೆದಿದೆ.
ಸ್ಥಳಕ್ಕೆ ಸುಳ್ಯ ವಲಯ ಅರಣ್ಯಾಧಿಕಾರಿಗಳು ಬೇಟಿ ನೀಡಿದ್ದು, ಆನೆಗಳ ರಕ್ಷಣೆಗೆ ಪ್ರಯತ್ನಿಸುತ್ತಿದ್ದಾರೆ. ಕಾಡಿನಲ್ಲಿ ಆಹಾರ ನೀರು ಕಡಿಮೆಯಾದಾಗ ಆಹಾರ  ಅರಸಿ ಬರುವ ಪ್ರಾಣಿಗಳು ಕೆರೆ ನೀರಿನ ಆಳದ ಅಂದಾಜು ಇಲ್ಲದೆ ಬಿದ್ದು ಸಿಕ್ಕಿ ಹಾಕಿಕೊಳ್ಳುವುದು ಸಾಮಾನ್ಯವಾಗಿದೆ,ಕೆರೆಗೆ ಬಿದ್ದ ಮರಿಯಾನೆ ರಕ್ಷಣೆಗೆ ದಾವಿಸಿದ ಹಿರಿಯಾನೆಗಳೂ ಕೆರೆಯಲ್ಲಿ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ಅಜ್ಜಾವರ, ಆಲೆಟ್ಟಿ ಗ್ರಾಮಗಳಲ್ಲಿ ಆನೆಗಳ ಹಾವಳಿ ಜೋರಾಗಿದ್ದು, ಅಪಾರ ಪ್ರಮಾಣದ ಕೃಷಿನಾಶ ಅಗಾಗ ನಡೆಯುತ್ತಲೇ ಇರುತ್ತವೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

3 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

5 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

10 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

11 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

19 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

1 day ago