ಕಾಡಾನೆ ಹಾವಳಿ | ಡಿಜೆ ಸೌಂಡ್ ಹಾಕಿ ಸಮಸ್ಯೆಗೆ ವಿರಾಮ ಹಾಕಲು ಮುಂದಾದ ರೈತರು…!

March 3, 2022
10:49 PM

ಚಿಕ್ಕಮಂಗಳೂರು ತಾಲೂಕಿನ ಬೀಕನಹಳ್ಳಿ, ಹಂಪಾಪುರ ಗ್ರಾಮದಲ್ಲಿ ಇತ್ತೀಚೆಗೆ ಆನೆ ಹಾವಳಿ ಹೆಚ್ಚಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರು ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ರೈತರೇ ತೋಟದಲ್ಲಿ ಮೈಕ್ ಸೆಟ್ ಹಾಕಿ ಆನೆ ಹಾವಳಿಗೆ ಬ್ರೇಕ್ ಹಾಕಲು ಮುಂದಾಗಿದ್ದಾರೆ.

ಬೀಕನಹಳ್ಳಿ ಹಾಗೂ ಹಂಪಾಪುರ ಗ್ರಾಮದ ತೋಟಗಳಲ್ಲಿ ಸುಮಾರು 30 ಕಡೆ ಅಲ್ಲಲ್ಲಿ ಮೈಕ್ ಸೆಟ್ ಕಟ್ಟಿದ್ದಾರೆ. ಸಂಜೆ 6 ಗಂಟೆಯಾಗುತ್ತಿದ್ದಂತೆ ಡಿಜೆ ಸೌಂಡ್ ಶುರುವಾಗುತ್ತೆ. ಈ ಮೈಕ್ ಸೆಟ್‍ನಲ್ಲಿ ಆನೆ ಬಂತು ಓಡಿಸ್ರೋ…. ಈ ಕಡೆ ಬಂತು…. ಆ ಕಡೆ ಬಂತು… ಅಂತ ಕೂಗುವ ಶಬ್ಧ, ಪಟಾಕಿ ಸಿಡಿಯುವ ಶಬ್ಧ. ಇದರಿಂದ ಆನೆ ಹಾವಳಿ ಸ್ವಲ್ಪಮಟ್ಟಿಗೆ ಕಡಿಮೆಯಾಗುತ್ತೆ ಅನ್ನೋದು ರೈತರ ನಂಬಿಕೆ.

ಅರಣ್ಯ ಇಲಾಖೆ ವೈಜ್ಞಾನಿಕವಾಗಿ ಕಾಡುಪ್ರಾಣಿಗಳು, ಆನೆಗಳಿಂದ ಜನರ ಜೀವ ಹಾಗೂ ಬೆಳೆ ಎರಡನ್ನೂ ಉಳಿಸುವುದಕ್ಕೆ ಮುಂದಾಗಬೇಕೆಂಬುದು ಜಿಲ್ಲೆಯ ಜನರ ಬೇಡಿಕೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 06-07-2026 | ಆಗಸ್ಟ್‌ 10ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ ತಗ್ಗುವ ಲಕ್ಷಣ – ಘಟ್ಟದ ಕೆಳಭಾಗದಲ್ಲಿ ಇನ್ನೂ ಕೆಲ ದಿನ ಹೆಚ್ಚು ಮಳೆ ಸಾಧ್ಯತೆ – ಮಳೆಯ ಸ್ವರೂಪ ಹೀಗೇಕೆ?
August 6, 2026
3:42 PM
by: ಸಾಯಿಶೇಖರ್ ಕರಿಕಳ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror