ಚಿಕ್ಕಮಂಗಳೂರು ತಾಲೂಕಿನ ಬೀಕನಹಳ್ಳಿ, ಹಂಪಾಪುರ ಗ್ರಾಮದಲ್ಲಿ ಇತ್ತೀಚೆಗೆ ಆನೆ ಹಾವಳಿ ಹೆಚ್ಚಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರು ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ರೈತರೇ ತೋಟದಲ್ಲಿ ಮೈಕ್ ಸೆಟ್ ಹಾಕಿ ಆನೆ ಹಾವಳಿಗೆ ಬ್ರೇಕ್ ಹಾಕಲು ಮುಂದಾಗಿದ್ದಾರೆ.
ಬೀಕನಹಳ್ಳಿ ಹಾಗೂ ಹಂಪಾಪುರ ಗ್ರಾಮದ ತೋಟಗಳಲ್ಲಿ ಸುಮಾರು 30 ಕಡೆ ಅಲ್ಲಲ್ಲಿ ಮೈಕ್ ಸೆಟ್ ಕಟ್ಟಿದ್ದಾರೆ. ಸಂಜೆ 6 ಗಂಟೆಯಾಗುತ್ತಿದ್ದಂತೆ ಡಿಜೆ ಸೌಂಡ್ ಶುರುವಾಗುತ್ತೆ. ಈ ಮೈಕ್ ಸೆಟ್ನಲ್ಲಿ ಆನೆ ಬಂತು ಓಡಿಸ್ರೋ…. ಈ ಕಡೆ ಬಂತು…. ಆ ಕಡೆ ಬಂತು… ಅಂತ ಕೂಗುವ ಶಬ್ಧ, ಪಟಾಕಿ ಸಿಡಿಯುವ ಶಬ್ಧ. ಇದರಿಂದ ಆನೆ ಹಾವಳಿ ಸ್ವಲ್ಪಮಟ್ಟಿಗೆ ಕಡಿಮೆಯಾಗುತ್ತೆ ಅನ್ನೋದು ರೈತರ ನಂಬಿಕೆ.
ಅರಣ್ಯ ಇಲಾಖೆ ವೈಜ್ಞಾನಿಕವಾಗಿ ಕಾಡುಪ್ರಾಣಿಗಳು, ಆನೆಗಳಿಂದ ಜನರ ಜೀವ ಹಾಗೂ ಬೆಳೆ ಎರಡನ್ನೂ ಉಳಿಸುವುದಕ್ಕೆ ಮುಂದಾಗಬೇಕೆಂಬುದು ಜಿಲ್ಲೆಯ ಜನರ ಬೇಡಿಕೆಯಾಗಿದೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…