ಚಿಕ್ಕಮಂಗಳೂರು ತಾಲೂಕಿನ ಬೀಕನಹಳ್ಳಿ, ಹಂಪಾಪುರ ಗ್ರಾಮದಲ್ಲಿ ಇತ್ತೀಚೆಗೆ ಆನೆ ಹಾವಳಿ ಹೆಚ್ಚಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರು ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ರೈತರೇ ತೋಟದಲ್ಲಿ ಮೈಕ್ ಸೆಟ್ ಹಾಕಿ ಆನೆ ಹಾವಳಿಗೆ ಬ್ರೇಕ್ ಹಾಕಲು ಮುಂದಾಗಿದ್ದಾರೆ.
ಬೀಕನಹಳ್ಳಿ ಹಾಗೂ ಹಂಪಾಪುರ ಗ್ರಾಮದ ತೋಟಗಳಲ್ಲಿ ಸುಮಾರು 30 ಕಡೆ ಅಲ್ಲಲ್ಲಿ ಮೈಕ್ ಸೆಟ್ ಕಟ್ಟಿದ್ದಾರೆ. ಸಂಜೆ 6 ಗಂಟೆಯಾಗುತ್ತಿದ್ದಂತೆ ಡಿಜೆ ಸೌಂಡ್ ಶುರುವಾಗುತ್ತೆ. ಈ ಮೈಕ್ ಸೆಟ್ನಲ್ಲಿ ಆನೆ ಬಂತು ಓಡಿಸ್ರೋ…. ಈ ಕಡೆ ಬಂತು…. ಆ ಕಡೆ ಬಂತು… ಅಂತ ಕೂಗುವ ಶಬ್ಧ, ಪಟಾಕಿ ಸಿಡಿಯುವ ಶಬ್ಧ. ಇದರಿಂದ ಆನೆ ಹಾವಳಿ ಸ್ವಲ್ಪಮಟ್ಟಿಗೆ ಕಡಿಮೆಯಾಗುತ್ತೆ ಅನ್ನೋದು ರೈತರ ನಂಬಿಕೆ.
ಅರಣ್ಯ ಇಲಾಖೆ ವೈಜ್ಞಾನಿಕವಾಗಿ ಕಾಡುಪ್ರಾಣಿಗಳು, ಆನೆಗಳಿಂದ ಜನರ ಜೀವ ಹಾಗೂ ಬೆಳೆ ಎರಡನ್ನೂ ಉಳಿಸುವುದಕ್ಕೆ ಮುಂದಾಗಬೇಕೆಂಬುದು ಜಿಲ್ಲೆಯ ಜನರ ಬೇಡಿಕೆಯಾಗಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…