ಚಿಕ್ಕಮಂಗಳೂರು ತಾಲೂಕಿನ ಬೀಕನಹಳ್ಳಿ, ಹಂಪಾಪುರ ಗ್ರಾಮದಲ್ಲಿ ಇತ್ತೀಚೆಗೆ ಆನೆ ಹಾವಳಿ ಹೆಚ್ಚಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರು ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ರೈತರೇ ತೋಟದಲ್ಲಿ ಮೈಕ್ ಸೆಟ್ ಹಾಕಿ ಆನೆ ಹಾವಳಿಗೆ ಬ್ರೇಕ್ ಹಾಕಲು ಮುಂದಾಗಿದ್ದಾರೆ.
ಬೀಕನಹಳ್ಳಿ ಹಾಗೂ ಹಂಪಾಪುರ ಗ್ರಾಮದ ತೋಟಗಳಲ್ಲಿ ಸುಮಾರು 30 ಕಡೆ ಅಲ್ಲಲ್ಲಿ ಮೈಕ್ ಸೆಟ್ ಕಟ್ಟಿದ್ದಾರೆ. ಸಂಜೆ 6 ಗಂಟೆಯಾಗುತ್ತಿದ್ದಂತೆ ಡಿಜೆ ಸೌಂಡ್ ಶುರುವಾಗುತ್ತೆ. ಈ ಮೈಕ್ ಸೆಟ್ನಲ್ಲಿ ಆನೆ ಬಂತು ಓಡಿಸ್ರೋ…. ಈ ಕಡೆ ಬಂತು…. ಆ ಕಡೆ ಬಂತು… ಅಂತ ಕೂಗುವ ಶಬ್ಧ, ಪಟಾಕಿ ಸಿಡಿಯುವ ಶಬ್ಧ. ಇದರಿಂದ ಆನೆ ಹಾವಳಿ ಸ್ವಲ್ಪಮಟ್ಟಿಗೆ ಕಡಿಮೆಯಾಗುತ್ತೆ ಅನ್ನೋದು ರೈತರ ನಂಬಿಕೆ.
ಅರಣ್ಯ ಇಲಾಖೆ ವೈಜ್ಞಾನಿಕವಾಗಿ ಕಾಡುಪ್ರಾಣಿಗಳು, ಆನೆಗಳಿಂದ ಜನರ ಜೀವ ಹಾಗೂ ಬೆಳೆ ಎರಡನ್ನೂ ಉಳಿಸುವುದಕ್ಕೆ ಮುಂದಾಗಬೇಕೆಂಬುದು ಜಿಲ್ಲೆಯ ಜನರ ಬೇಡಿಕೆಯಾಗಿದೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…