ಹೆದ್ದಾರಿಯಲ್ಲಿ ಆನೆ ಭೀತಿ | ಶಿರಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಭೀತಿ |

April 14, 2022
10:25 AM

ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಭೀತಿ ವಾಹನ ಸವಾರರನ್ನು ಕಾಡಿದೆ. ಬೆಳಗಿನ ಜಾವ ಒಂಟಿ ಸಲಗವೊಂದು ಓಡಾಡುತ್ತಿದ್ದು ಬುಧವಾರ ಪಾದಚಾರಿಯೊಬ್ಬರನ್ನು ಗಾಯಗೊಳಿಸಿದ ಘಟನೆ ವರದಿಯಾಗಿದೆ.

ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟಿ ಪ್ರದೇಶದಲ್ಲಿ ಕಾಡಾನೆ ಓಡಾಟ ಕಂಡುಬರುತ್ತಿದೆ. ಕೆಲವೊಮ್ಮೆ ರಸ್ತೆ ಮಧ್ಯೆಯೇ ಇರುವ ಕಾರಣದಿಂದ ವಾಹನ ಸಂಚಾರದಲ್ಲೂ ವ್ಯತ್ಯಯ ಉಂಟಾಗುತ್ತದೆ. ಬೆಳಗಿನ ಜಾವ ಹೆಚ್ಚಾಗಿ ಕಾಡಾನೆ ರಸ್ತೆ ಬದಿಯಲ್ಲಿ ಕಂಡುಬರುತ್ತಿದ್ದು ಕೃಷಿ ತೋಟಗಳಲ್ಲಿ ಹಗಲು ವೇಳೆಯೂ ಕಾಡಾನೆ ಕಂಡುಬರುತ್ತದೆ ಎಂದು ಸ್ಥಳೀಯರು ಹೇಳಿದ್ದಾರೆ. ಕೃಷಿ ಹಾನಿ ಮಾಡುವ ವೇಳೆ ಸ್ಥಳೀಯರು ಕಾಡಾನೆ ಓಡಿಸುವ ಪ್ರಯತ್ನ ಮಾಡುತ್ತಾರೆ, ಆದರೆ ಹೆದ್ದಾರಿಯಲ್ಲಿ ಆನೆಗಳ ಹಿಂಡು ಅಥವಾ ಒಂಟಿ ಆನೆ ಇದ್ದರೆ ಕೆಲ ಕಾಲ ವಾಹನ ಸಂಚಾರಕ್ಕೂ ತೊಡಕಾಗುತ್ತದೆ, ಈ ವೇಳೆ ಸಾಹಸ ಪಡುವ ಕೆಲ ಸವಾರರೂ ಇರುತ್ತಾರೆ, ಇದರಿಂದಾಗಿ ಅಪಾಯ ಹೆಚ್ಚಿದೆ ಎಂದು ಸ್ಥಳೀಯರು ಹೇಳುತ್ತಾರೆ.

Advertisement

ಈಚೆಗೆ ಕಾಡಾನೆ ಹಾವಳಿ ಹೆಚ್ಚುತ್ತಲೇ ಇದೆ, ಮನುಷ್ಯರ ಮೇಲೂ ದಾಳಿ ನಡೆಯುತ್ತಿದೆ. ಪ್ರತಿದಿನ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ, ಫೋಟೊ ಕಂಡುಬರುತ್ತದೆ. ಹೀಗಾಗಿ ಕಾಡಾನೆ ಓಡಾಟ ಹೆದ್ದಾರಿಯಲ್ಲಿ ಇರುವುದರಿಂದ ಮುಂಜಾಗ್ರತಾ ಕ್ರಮಗಳು ಹಾಗೂ ಸುರಕ್ಷಾ ವಿಧಾನಗಳು ಅಗತ್ಯವಾಗಿ ಬೇಕಿದೆ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

 

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ
July 1, 2026
7:02 AM
by: ದ ರೂರಲ್ ಮಿರರ್.ಕಾಂ
ಕಾಪುವಿನಲ್ಲಿ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ – 24 ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ
June 30, 2026
11:08 PM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಮುನ್ಸೂಚನೆ – ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ
June 30, 2026
10:39 PM
by: ದ ರೂರಲ್ ಮಿರರ್.ಕಾಂ
ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
June 30, 2026
8:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror