ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಭೀತಿ ವಾಹನ ಸವಾರರನ್ನು ಕಾಡಿದೆ. ಬೆಳಗಿನ ಜಾವ ಒಂಟಿ ಸಲಗವೊಂದು ಓಡಾಡುತ್ತಿದ್ದು ಬುಧವಾರ ಪಾದಚಾರಿಯೊಬ್ಬರನ್ನು ಗಾಯಗೊಳಿಸಿದ ಘಟನೆ ವರದಿಯಾಗಿದೆ.
ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟಿ ಪ್ರದೇಶದಲ್ಲಿ ಕಾಡಾನೆ ಓಡಾಟ ಕಂಡುಬರುತ್ತಿದೆ. ಕೆಲವೊಮ್ಮೆ ರಸ್ತೆ ಮಧ್ಯೆಯೇ ಇರುವ ಕಾರಣದಿಂದ ವಾಹನ ಸಂಚಾರದಲ್ಲೂ ವ್ಯತ್ಯಯ ಉಂಟಾಗುತ್ತದೆ. ಬೆಳಗಿನ ಜಾವ ಹೆಚ್ಚಾಗಿ ಕಾಡಾನೆ ರಸ್ತೆ ಬದಿಯಲ್ಲಿ ಕಂಡುಬರುತ್ತಿದ್ದು ಕೃಷಿ ತೋಟಗಳಲ್ಲಿ ಹಗಲು ವೇಳೆಯೂ ಕಾಡಾನೆ ಕಂಡುಬರುತ್ತದೆ ಎಂದು ಸ್ಥಳೀಯರು ಹೇಳಿದ್ದಾರೆ. ಕೃಷಿ ಹಾನಿ ಮಾಡುವ ವೇಳೆ ಸ್ಥಳೀಯರು ಕಾಡಾನೆ ಓಡಿಸುವ ಪ್ರಯತ್ನ ಮಾಡುತ್ತಾರೆ, ಆದರೆ ಹೆದ್ದಾರಿಯಲ್ಲಿ ಆನೆಗಳ ಹಿಂಡು ಅಥವಾ ಒಂಟಿ ಆನೆ ಇದ್ದರೆ ಕೆಲ ಕಾಲ ವಾಹನ ಸಂಚಾರಕ್ಕೂ ತೊಡಕಾಗುತ್ತದೆ, ಈ ವೇಳೆ ಸಾಹಸ ಪಡುವ ಕೆಲ ಸವಾರರೂ ಇರುತ್ತಾರೆ, ಇದರಿಂದಾಗಿ ಅಪಾಯ ಹೆಚ್ಚಿದೆ ಎಂದು ಸ್ಥಳೀಯರು ಹೇಳುತ್ತಾರೆ.
ಈಚೆಗೆ ಕಾಡಾನೆ ಹಾವಳಿ ಹೆಚ್ಚುತ್ತಲೇ ಇದೆ, ಮನುಷ್ಯರ ಮೇಲೂ ದಾಳಿ ನಡೆಯುತ್ತಿದೆ. ಪ್ರತಿದಿನ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ, ಫೋಟೊ ಕಂಡುಬರುತ್ತದೆ. ಹೀಗಾಗಿ ಕಾಡಾನೆ ಓಡಾಟ ಹೆದ್ದಾರಿಯಲ್ಲಿ ಇರುವುದರಿಂದ ಮುಂಜಾಗ್ರತಾ ಕ್ರಮಗಳು ಹಾಗೂ ಸುರಕ್ಷಾ ವಿಧಾನಗಳು ಅಗತ್ಯವಾಗಿ ಬೇಕಿದೆ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…