ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಭೀತಿ ವಾಹನ ಸವಾರರನ್ನು ಕಾಡಿದೆ. ಬೆಳಗಿನ ಜಾವ ಒಂಟಿ ಸಲಗವೊಂದು ಓಡಾಡುತ್ತಿದ್ದು ಬುಧವಾರ ಪಾದಚಾರಿಯೊಬ್ಬರನ್ನು ಗಾಯಗೊಳಿಸಿದ ಘಟನೆ ವರದಿಯಾಗಿದೆ.
ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟಿ ಪ್ರದೇಶದಲ್ಲಿ ಕಾಡಾನೆ ಓಡಾಟ ಕಂಡುಬರುತ್ತಿದೆ. ಕೆಲವೊಮ್ಮೆ ರಸ್ತೆ ಮಧ್ಯೆಯೇ ಇರುವ ಕಾರಣದಿಂದ ವಾಹನ ಸಂಚಾರದಲ್ಲೂ ವ್ಯತ್ಯಯ ಉಂಟಾಗುತ್ತದೆ. ಬೆಳಗಿನ ಜಾವ ಹೆಚ್ಚಾಗಿ ಕಾಡಾನೆ ರಸ್ತೆ ಬದಿಯಲ್ಲಿ ಕಂಡುಬರುತ್ತಿದ್ದು ಕೃಷಿ ತೋಟಗಳಲ್ಲಿ ಹಗಲು ವೇಳೆಯೂ ಕಾಡಾನೆ ಕಂಡುಬರುತ್ತದೆ ಎಂದು ಸ್ಥಳೀಯರು ಹೇಳಿದ್ದಾರೆ. ಕೃಷಿ ಹಾನಿ ಮಾಡುವ ವೇಳೆ ಸ್ಥಳೀಯರು ಕಾಡಾನೆ ಓಡಿಸುವ ಪ್ರಯತ್ನ ಮಾಡುತ್ತಾರೆ, ಆದರೆ ಹೆದ್ದಾರಿಯಲ್ಲಿ ಆನೆಗಳ ಹಿಂಡು ಅಥವಾ ಒಂಟಿ ಆನೆ ಇದ್ದರೆ ಕೆಲ ಕಾಲ ವಾಹನ ಸಂಚಾರಕ್ಕೂ ತೊಡಕಾಗುತ್ತದೆ, ಈ ವೇಳೆ ಸಾಹಸ ಪಡುವ ಕೆಲ ಸವಾರರೂ ಇರುತ್ತಾರೆ, ಇದರಿಂದಾಗಿ ಅಪಾಯ ಹೆಚ್ಚಿದೆ ಎಂದು ಸ್ಥಳೀಯರು ಹೇಳುತ್ತಾರೆ.
ಈಚೆಗೆ ಕಾಡಾನೆ ಹಾವಳಿ ಹೆಚ್ಚುತ್ತಲೇ ಇದೆ, ಮನುಷ್ಯರ ಮೇಲೂ ದಾಳಿ ನಡೆಯುತ್ತಿದೆ. ಪ್ರತಿದಿನ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ, ಫೋಟೊ ಕಂಡುಬರುತ್ತದೆ. ಹೀಗಾಗಿ ಕಾಡಾನೆ ಓಡಾಟ ಹೆದ್ದಾರಿಯಲ್ಲಿ ಇರುವುದರಿಂದ ಮುಂಜಾಗ್ರತಾ ಕ್ರಮಗಳು ಹಾಗೂ ಸುರಕ್ಷಾ ವಿಧಾನಗಳು ಅಗತ್ಯವಾಗಿ ಬೇಕಿದೆ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…