ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಭೀತಿ ವಾಹನ ಸವಾರರನ್ನು ಕಾಡಿದೆ. ಬೆಳಗಿನ ಜಾವ ಒಂಟಿ ಸಲಗವೊಂದು ಓಡಾಡುತ್ತಿದ್ದು ಬುಧವಾರ ಪಾದಚಾರಿಯೊಬ್ಬರನ್ನು ಗಾಯಗೊಳಿಸಿದ ಘಟನೆ ವರದಿಯಾಗಿದೆ.
ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟಿ ಪ್ರದೇಶದಲ್ಲಿ ಕಾಡಾನೆ ಓಡಾಟ ಕಂಡುಬರುತ್ತಿದೆ. ಕೆಲವೊಮ್ಮೆ ರಸ್ತೆ ಮಧ್ಯೆಯೇ ಇರುವ ಕಾರಣದಿಂದ ವಾಹನ ಸಂಚಾರದಲ್ಲೂ ವ್ಯತ್ಯಯ ಉಂಟಾಗುತ್ತದೆ. ಬೆಳಗಿನ ಜಾವ ಹೆಚ್ಚಾಗಿ ಕಾಡಾನೆ ರಸ್ತೆ ಬದಿಯಲ್ಲಿ ಕಂಡುಬರುತ್ತಿದ್ದು ಕೃಷಿ ತೋಟಗಳಲ್ಲಿ ಹಗಲು ವೇಳೆಯೂ ಕಾಡಾನೆ ಕಂಡುಬರುತ್ತದೆ ಎಂದು ಸ್ಥಳೀಯರು ಹೇಳಿದ್ದಾರೆ. ಕೃಷಿ ಹಾನಿ ಮಾಡುವ ವೇಳೆ ಸ್ಥಳೀಯರು ಕಾಡಾನೆ ಓಡಿಸುವ ಪ್ರಯತ್ನ ಮಾಡುತ್ತಾರೆ, ಆದರೆ ಹೆದ್ದಾರಿಯಲ್ಲಿ ಆನೆಗಳ ಹಿಂಡು ಅಥವಾ ಒಂಟಿ ಆನೆ ಇದ್ದರೆ ಕೆಲ ಕಾಲ ವಾಹನ ಸಂಚಾರಕ್ಕೂ ತೊಡಕಾಗುತ್ತದೆ, ಈ ವೇಳೆ ಸಾಹಸ ಪಡುವ ಕೆಲ ಸವಾರರೂ ಇರುತ್ತಾರೆ, ಇದರಿಂದಾಗಿ ಅಪಾಯ ಹೆಚ್ಚಿದೆ ಎಂದು ಸ್ಥಳೀಯರು ಹೇಳುತ್ತಾರೆ.
ಈಚೆಗೆ ಕಾಡಾನೆ ಹಾವಳಿ ಹೆಚ್ಚುತ್ತಲೇ ಇದೆ, ಮನುಷ್ಯರ ಮೇಲೂ ದಾಳಿ ನಡೆಯುತ್ತಿದೆ. ಪ್ರತಿದಿನ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ, ಫೋಟೊ ಕಂಡುಬರುತ್ತದೆ. ಹೀಗಾಗಿ ಕಾಡಾನೆ ಓಡಾಟ ಹೆದ್ದಾರಿಯಲ್ಲಿ ಇರುವುದರಿಂದ ಮುಂಜಾಗ್ರತಾ ಕ್ರಮಗಳು ಹಾಗೂ ಸುರಕ್ಷಾ ವಿಧಾನಗಳು ಅಗತ್ಯವಾಗಿ ಬೇಕಿದೆ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…