Advertisement
The Rural Mirror ಫಾಲೋಅಪ್

ಕೃಷಿಗೆ ಆನೆ ಹಾವಳಿ | ಕೃಷಿಕರ ಮೇಲೂ ದಾಳಿ | ಪರಿಹಾರ ಹೇಗೆ ? ಏನು ? | ಕೃಷಿಕರ ಸಲಹೆ ಏನು ? |

Share

ಸುಳ್ಯ ತಾಲೂಕಿನ ವಿವಿದೆಡೆ ಅದರಲ್ಲೂ ಅರಣ್ಯದ ಅಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದೆ. ಇದೀಗ ಮತ್ತೆ ಕೊಲ್ಲಮೊಗ್ರದಲ್ಲಿ ಕಾಡಾನೆ ದಾಳಿಗೆ ಯುವಕನೊಬ್ಬ ಗಂಭೀರ ಗಾಯಗೊಂಡಿದ್ದಾನೆ. ಬೆಳಗ್ಗೆ ಹಾಲು ಸೊಸೈಟಿಗೆ ತೆರಳುವ ವೇಳೆ ಆನೆ ದಾಳಿ ಮಾಡಿದೆ. ಅನೇಕರ ಕೃಷಿಯೂ ಹಾನಿಯಾಗುತ್ತಿದೆ. ಪರಿಹಾರ ಹೇಗೆ ? ಎಂಬುದು ಯಕ್ಷ ಪ್ರಶ್ನೆ. ರೂರಲ್‌ ಮಿರರ್‌ ಈ ಬಗ್ಗೆ ಜಾಗೃತಿ ವರದಿ ಪ್ರಕಟ ಮಾಡುತ್ತದೆ. ಕೃಷಿಕರ ಅಭಿಪ್ರಾಯ ತಿಳಿಸಬಹುದು.

Advertisement
Advertisement

ಸುಳ್ಯ ತಾಲೂಕಿನ ಸಂಪಾಜೆ, ಅರಂತೋಡು, ಮಂಡೆಕೋಲು, ಆಲೆಟ್ಟಿ, ಮಡಪ್ಪಾಡಿ, ಕೊಲ್ಲಮೊಗ್ರ ಸೇರಿದಂತೆ ಅರಣ್ಯ ಭಾಗದ ಅಂಚಿನಲ್ಲಿ ಅನೇಕ ವರ್ಷಗಳಿಂದ ಕಾಡಾನೆ ಹಾವಳಿ ಇದೆ. ಹಿಂದೆ ಕೃಷಿ ಹಾನಿ ಮಾಡುತ್ತಿದ್ದ ಕಾಡಾನೆ ಈಚೆಗೆ ಮನುಷ್ಯರ ಮೇಲೂ ದಾಳಿ ಮಾಡಲು ಆರಂಭಿಸಿದೆ. ಕೊಲ್ಲಮೊಗ್ರ ಪ್ರದೇಶದಲ್ಲಿ ಭಾನುವಾರ ಪ್ರಕರಣ ಸೇರಿದರೆ ಗಂಭೀರ ಗಾಯಗೊಂಡ  3 ನೇ ಪ್ರಕರಣವಾಗಿದೆ. ಈ ಹಿಂದೆ ಇಬ್ಬರು ಮೃತಪಟ್ಟಿದ್ದಾರೆ. ತೋಟಕ್ಕೆ ನೀರುಣಿಸಲು ತೆರಳಿದ ವೇಳೆ ಒಬ್ಬರು ಆನೆ ದಾಳಿ ಮಾಡಿ ಸ್ಥಳದಲ್ಲೇ ಮೃತಪಟ್ಟಿದ್ದರೆ ಇನ್ನೊಬ್ಬರು ನೀರಿನ ಪೈಪ್‌ ದುರಸ್ತಿ ವೇಳೆ ಆನೆ ದಾಳಿ ಮಾಡಿ ಗಾಯಗೊಂಡು ಮೃತಪಟ್ಟಿದ್ದರು. ಹೀಗಾಗಿ ಈಗ ರಾತ್ರಿ ವೇಳೆ ಹಾಗೂ ಮುಂಜಾನೆ ಕೃಷಿಕರು ಓಡಾಟಕ್ಕೆ ಭಯಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಕೃಷಿಗೆ ದಾಳಿ ಮಾಡುವ ಕಾಡಾನೆ ಬಾಳೆ, ತೆಂಗು, ಅಡಿಕೆ ಗಿಡ ಸಹಿತ ಎಲ್ಲವನ್ನೂ ನಾಶ ಮಾಡುತ್ತದೆ. ಫಸಲು ಬರಲು ಸಿದ್ಧವಾದ ಗಿಡಗಳು ನಾಶವಾದರೆ ಅಪಾರ ನಷ್ಟವನ್ನು ಕೃಷಿಕರು ಅನುಭವಿಸಬೇಕಾಗುತ್ತದೆ. ಈ ನಾಶಕ್ಕೆ ಕಿಂಚಿತ್‌ ಪರಿಹಾರ ಮಾತ್ರಾ ಇಲಾಖೆಗಳಿಂದ ದೊರೆಯುತ್ತದೆ. ಸರ್ಕಾರಗಳು ಈ ಬಗ್ಗೆ ಇನ್ನೂ ಗಂಭೀರವಾಗಿ ಯೋಚನೆ ಮಾಡಿಲ್ಲ. ಈಗಾಗಲೇ ಸುಳ್ಯ ತಾಲೂಕಿನಲ್ಲಿ ಅಡಿಕೆ ಹಳದಿ ಎಲೆರೋಗ ಸಹಿತ ವಿವಿಧ ರೋಗಗಳಿಂದ ತುತ್ತಾಗುತ್ತಿರುವ ವೇಳೆ ಆನೆ ದಾಳಿಯೂ ಗಂಭೀರ ಸಮಸ್ಯೆಯಾಗಿದೆ.

ಆನೆ ದಾಳಿ ತಡೆಯಲು ಇಡೀ ರಾತ್ರಿ ಕೃಷಿಕರು ತಮ್ಮ ತೋಟದಲ್ಲಿ ವಿವಿಧ ಪ್ರಯತ್ನ ಮಾಡಿದ್ದೂ ಇದೆ. ತಂಡವಾಗಿ ಇಡೀ ಊರು ಕೆಲಸ ಮಾಡಿದೆ. ವ್ಯಾಟ್ಸಪ್‌ ಗುಂಪು ರಚನೆ ಮಾಡಿ ಈ ಮೂಲಕ ಮಾಹಿತಿ ರವಾನೆ ಮಾಡಿಕೊಂಡಿದೆ, ವಿದ್ಯುತ್‌ ಬೇಲಿ ಅಳವಡಿಕೆ, ಕಂದಕ ಹೀಗೇ ವಿವಿಧ ಪ್ರಯತ್ನ ಮಾಡಿದ್ದಾರೆ. ಇದೆಲ್ಲದರ ಫಾಲೋ ಅಪ್‌ ಜೊತೆಗೆ ಸರ್ಕಾರ ಈ ಸಮಸ್ಯೆಗೆ ಏನು ಮಾಡಬಹುದು ಎಂಬುದರ ಬಗ್ಗೆ ಅಭಿಯಾನ ರೂಪದಲ್ಲಿ ಕೃಷಿಕರ ಅಭಿಪ್ರಾಯ ಬೇಕಾಗಿದೆ. ಈ ಕೆಲಸವನ್ನು ಮಾಧ್ಯಮವಾಗಿ ರೂರಲ್‌ ಮಿರರ್‌ ಮಾಡುತ್ತದೆ. ಹೀಗಾಗಿ ಆನೆ ದಾಳಿಯಿಂದ ಕೃಷಿ ರಕ್ಷಣೆಗೆ , ಮನುಷ್ಯರ ರಕ್ಷಣೆಗೆ ಮಾಡಬೇಕಾದ ಮುಂಜಾಗ್ರತೆ ಬಗ್ಗೆ ನಮಗೆ ತಿಳಿಸಿ, ಸರ್ಕಾರ ಮಾಡಬೇಕಾದ ಕ್ರಮಗಳ ಬಗ್ಗೆಯೂ ತಿಳಿಸಿ. ರೂರಲ್‌ ಮಿರರ್‌ ಈ ಬಗ್ಗೆ ವರದಿ ಮಾಡುತ್ತಾ ಸರ್ಕಾರಕ್ಕೆ ಹಾಗೂ ಜನಪ್ರತಿನಿಧಿಗಳಿಗೆ ವರದಿ ರೂಪದಲ್ಲಿ ದಾಖಲೆ ನೀಡುವ ಪ್ರಯತ್ನ ಮಾಡುತ್ತದೆ.  ನಮ್ಮ ವ್ಯಾಟ್ಸಪ್‌ ಸಂಖ್ಯೆ 9449125447 . ಈ ಸಂಖ್ಯೆಗೆ ವ್ಯಾಟ್ಸಪ್‌ ಮೆಸೇಜ್‌ ಮಾಡಬಹುದು. ಅಥವಾ ಅಭಿಪ್ರಾಯವನ್ನು ವಿಡಿಯೋ ಮಾಡಿ ಕಳುಹಿಸಬಹುದು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಣ್ಣ ರೈತರಿಗೆ ಇಲ್ಲಿ ‘ಎಟಿಎಂ’ ಈ ಹಸು ! ಹಾಲಿನಲ್ಲಿ 8.4% ಕೊಬ್ಬು , ತುಪ್ಪದ ರೇಟು ಭರ್ಜರಿ..!

ಉತ್ತರಾಖಂಡದ ಸ್ಥಳೀಯ ಬದ್ರಿ ಹಸು ಇಂದು ರೈತರ ಪಾಲಿಗೆ ಹೊಸ ಆದಾಯದ ಮೂಲವಾಗಿ…

4 hours ago

ಹೊಸರುಚಿ | ಮನೆಯಲ್ಲೇ ಮಾಡಿ ‘ಪೇಪರ್ ಅವಲಕ್ಕಿ ಚೂಡಾ’

ಪೇಪರ್ ಅವಲಕ್ಕಿ ಚೂಡಾಕ್ಕೆ ಬೇಕಾಗುವ ಸಾಮಗ್ರಿಗಳು : ಪೇಪರ್ ಅವಲಕ್ಕಿ – ಅಗತ್ಯ…

5 hours ago

ಅಸ್ಸಾಂ ಗಡಿಯಲ್ಲೇ ಅಡಿಕೆ ಹಬ್…! 30,000 ಹೆಕ್ಟೇರ್ ಅಡಿಕೆ ಕೃಷಿಗೆ ಬಲ – ಮಿಜೋರಾಂ ಸಿಎಂ ಉದ್ಘಾಟಿಸಿದ ಹೊಸ ಘಟಕ

ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮಾ ಅವರು ಶುಕ್ರವಾರ ಅಸ್ಸಾಂ ಗಡಿಯ ಬಳಿಯ ಮಿಜೋರಾಂನ ಕೊಲಾಸಿಬ್…

5 hours ago

ಗ್ರಾಮೀಣ ಜನರು ಸ್ವಾವಲಂಬಿಗಳಾಗಬೇಕು: ಸಿದ್ದರಾಮಯ್ಯ ಕರೆ

ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಳ್ಳಿಗಳ ಜನರು ಸ್ವಾವಲಂಬಿಗಳಾಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ…

12 hours ago

ಆಯುಷ್ಮಾನ್ ಚಿಕಿತ್ಸೆ ನಿರಾಕರಿಸುವಂತಿಲ್ಲ‌ | ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಗಳಿಗೆ ಡಿಹೆಚ್ಒ ಖಡಕ್ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ ನೋಂದಣಿಯಾದ ಯಾವುದೇ ಆಸ್ಪತ್ರೆಗಳು ರೋಗಿಗಳಿಗೆ…

20 hours ago

ಕೇಂದ್ರ ಬಜೆಟ್‌ಗೆ ಕ್ಷಣಗಣನೆ | ರಾಜ್ಯದಲ್ಲಿ ಬಜೆಟ್ ನಿರೀಕ್ಷೆ ಹೆಚ್ಚಳ; MSME ಕ್ಷೇತ್ರಕ್ಕೆ ಬೆಂಬಲ ಬೇಕು

ಇದೇ ಭಾನುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಕೇಂದ್ರ…

20 hours ago