Advertisement
The Rural Mirror ಫಾಲೋಅಪ್

ಕೃಷಿಗೆ ಆನೆ ಹಾವಳಿ | ಕೃಷಿಕರ ಮೇಲೂ ದಾಳಿ | ಪರಿಹಾರ ಹೇಗೆ ? ಏನು ? | ಕೃಷಿಕರ ಸಲಹೆ ಏನು ? |

Share

ಸುಳ್ಯ ತಾಲೂಕಿನ ವಿವಿದೆಡೆ ಅದರಲ್ಲೂ ಅರಣ್ಯದ ಅಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದೆ. ಇದೀಗ ಮತ್ತೆ ಕೊಲ್ಲಮೊಗ್ರದಲ್ಲಿ ಕಾಡಾನೆ ದಾಳಿಗೆ ಯುವಕನೊಬ್ಬ ಗಂಭೀರ ಗಾಯಗೊಂಡಿದ್ದಾನೆ. ಬೆಳಗ್ಗೆ ಹಾಲು ಸೊಸೈಟಿಗೆ ತೆರಳುವ ವೇಳೆ ಆನೆ ದಾಳಿ ಮಾಡಿದೆ. ಅನೇಕರ ಕೃಷಿಯೂ ಹಾನಿಯಾಗುತ್ತಿದೆ. ಪರಿಹಾರ ಹೇಗೆ ? ಎಂಬುದು ಯಕ್ಷ ಪ್ರಶ್ನೆ. ರೂರಲ್‌ ಮಿರರ್‌ ಈ ಬಗ್ಗೆ ಜಾಗೃತಿ ವರದಿ ಪ್ರಕಟ ಮಾಡುತ್ತದೆ. ಕೃಷಿಕರ ಅಭಿಪ್ರಾಯ ತಿಳಿಸಬಹುದು.

ಸುಳ್ಯ ತಾಲೂಕಿನ ಸಂಪಾಜೆ, ಅರಂತೋಡು, ಮಂಡೆಕೋಲು, ಆಲೆಟ್ಟಿ, ಮಡಪ್ಪಾಡಿ, ಕೊಲ್ಲಮೊಗ್ರ ಸೇರಿದಂತೆ ಅರಣ್ಯ ಭಾಗದ ಅಂಚಿನಲ್ಲಿ ಅನೇಕ ವರ್ಷಗಳಿಂದ ಕಾಡಾನೆ ಹಾವಳಿ ಇದೆ. ಹಿಂದೆ ಕೃಷಿ ಹಾನಿ ಮಾಡುತ್ತಿದ್ದ ಕಾಡಾನೆ ಈಚೆಗೆ ಮನುಷ್ಯರ ಮೇಲೂ ದಾಳಿ ಮಾಡಲು ಆರಂಭಿಸಿದೆ. ಕೊಲ್ಲಮೊಗ್ರ ಪ್ರದೇಶದಲ್ಲಿ ಭಾನುವಾರ ಪ್ರಕರಣ ಸೇರಿದರೆ ಗಂಭೀರ ಗಾಯಗೊಂಡ  3 ನೇ ಪ್ರಕರಣವಾಗಿದೆ. ಈ ಹಿಂದೆ ಇಬ್ಬರು ಮೃತಪಟ್ಟಿದ್ದಾರೆ. ತೋಟಕ್ಕೆ ನೀರುಣಿಸಲು ತೆರಳಿದ ವೇಳೆ ಒಬ್ಬರು ಆನೆ ದಾಳಿ ಮಾಡಿ ಸ್ಥಳದಲ್ಲೇ ಮೃತಪಟ್ಟಿದ್ದರೆ ಇನ್ನೊಬ್ಬರು ನೀರಿನ ಪೈಪ್‌ ದುರಸ್ತಿ ವೇಳೆ ಆನೆ ದಾಳಿ ಮಾಡಿ ಗಾಯಗೊಂಡು ಮೃತಪಟ್ಟಿದ್ದರು. ಹೀಗಾಗಿ ಈಗ ರಾತ್ರಿ ವೇಳೆ ಹಾಗೂ ಮುಂಜಾನೆ ಕೃಷಿಕರು ಓಡಾಟಕ್ಕೆ ಭಯಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಕೃಷಿಗೆ ದಾಳಿ ಮಾಡುವ ಕಾಡಾನೆ ಬಾಳೆ, ತೆಂಗು, ಅಡಿಕೆ ಗಿಡ ಸಹಿತ ಎಲ್ಲವನ್ನೂ ನಾಶ ಮಾಡುತ್ತದೆ. ಫಸಲು ಬರಲು ಸಿದ್ಧವಾದ ಗಿಡಗಳು ನಾಶವಾದರೆ ಅಪಾರ ನಷ್ಟವನ್ನು ಕೃಷಿಕರು ಅನುಭವಿಸಬೇಕಾಗುತ್ತದೆ. ಈ ನಾಶಕ್ಕೆ ಕಿಂಚಿತ್‌ ಪರಿಹಾರ ಮಾತ್ರಾ ಇಲಾಖೆಗಳಿಂದ ದೊರೆಯುತ್ತದೆ. ಸರ್ಕಾರಗಳು ಈ ಬಗ್ಗೆ ಇನ್ನೂ ಗಂಭೀರವಾಗಿ ಯೋಚನೆ ಮಾಡಿಲ್ಲ. ಈಗಾಗಲೇ ಸುಳ್ಯ ತಾಲೂಕಿನಲ್ಲಿ ಅಡಿಕೆ ಹಳದಿ ಎಲೆರೋಗ ಸಹಿತ ವಿವಿಧ ರೋಗಗಳಿಂದ ತುತ್ತಾಗುತ್ತಿರುವ ವೇಳೆ ಆನೆ ದಾಳಿಯೂ ಗಂಭೀರ ಸಮಸ್ಯೆಯಾಗಿದೆ.

ಆನೆ ದಾಳಿ ತಡೆಯಲು ಇಡೀ ರಾತ್ರಿ ಕೃಷಿಕರು ತಮ್ಮ ತೋಟದಲ್ಲಿ ವಿವಿಧ ಪ್ರಯತ್ನ ಮಾಡಿದ್ದೂ ಇದೆ. ತಂಡವಾಗಿ ಇಡೀ ಊರು ಕೆಲಸ ಮಾಡಿದೆ. ವ್ಯಾಟ್ಸಪ್‌ ಗುಂಪು ರಚನೆ ಮಾಡಿ ಈ ಮೂಲಕ ಮಾಹಿತಿ ರವಾನೆ ಮಾಡಿಕೊಂಡಿದೆ, ವಿದ್ಯುತ್‌ ಬೇಲಿ ಅಳವಡಿಕೆ, ಕಂದಕ ಹೀಗೇ ವಿವಿಧ ಪ್ರಯತ್ನ ಮಾಡಿದ್ದಾರೆ. ಇದೆಲ್ಲದರ ಫಾಲೋ ಅಪ್‌ ಜೊತೆಗೆ ಸರ್ಕಾರ ಈ ಸಮಸ್ಯೆಗೆ ಏನು ಮಾಡಬಹುದು ಎಂಬುದರ ಬಗ್ಗೆ ಅಭಿಯಾನ ರೂಪದಲ್ಲಿ ಕೃಷಿಕರ ಅಭಿಪ್ರಾಯ ಬೇಕಾಗಿದೆ. ಈ ಕೆಲಸವನ್ನು ಮಾಧ್ಯಮವಾಗಿ ರೂರಲ್‌ ಮಿರರ್‌ ಮಾಡುತ್ತದೆ. ಹೀಗಾಗಿ ಆನೆ ದಾಳಿಯಿಂದ ಕೃಷಿ ರಕ್ಷಣೆಗೆ , ಮನುಷ್ಯರ ರಕ್ಷಣೆಗೆ ಮಾಡಬೇಕಾದ ಮುಂಜಾಗ್ರತೆ ಬಗ್ಗೆ ನಮಗೆ ತಿಳಿಸಿ, ಸರ್ಕಾರ ಮಾಡಬೇಕಾದ ಕ್ರಮಗಳ ಬಗ್ಗೆಯೂ ತಿಳಿಸಿ. ರೂರಲ್‌ ಮಿರರ್‌ ಈ ಬಗ್ಗೆ ವರದಿ ಮಾಡುತ್ತಾ ಸರ್ಕಾರಕ್ಕೆ ಹಾಗೂ ಜನಪ್ರತಿನಿಧಿಗಳಿಗೆ ವರದಿ ರೂಪದಲ್ಲಿ ದಾಖಲೆ ನೀಡುವ ಪ್ರಯತ್ನ ಮಾಡುತ್ತದೆ.  ನಮ್ಮ ವ್ಯಾಟ್ಸಪ್‌ ಸಂಖ್ಯೆ 9449125447 . ಈ ಸಂಖ್ಯೆಗೆ ವ್ಯಾಟ್ಸಪ್‌ ಮೆಸೇಜ್‌ ಮಾಡಬಹುದು. ಅಥವಾ ಅಭಿಪ್ರಾಯವನ್ನು ವಿಡಿಯೋ ಮಾಡಿ ಕಳುಹಿಸಬಹುದು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

11 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

19 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

3 days ago