ಚಿಕ್ಕಮಗಳೂರಿನಲ್ಲಿ ನಿಲ್ಲದ ಆನೆ ದಾಳಿ | ಮಲಗಿದ್ದ ದಂಪತಿ ಮೇಲೆ ದಾಳಿ ನಡೆಸಿದ ಆನೆ |

December 26, 2022
9:59 PM

ರಸ್ತೆ ಬದಿಯಲ್ಲಿ ಮಲಗಿದ್ದ ದಂಪತಿಯ ಮೇಲೆ ಆನೆ ದಾಳಿ ನಡೆಸಿದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಗ್ರಾಮದಲ್ಲಿ ನಡೆದಿದೆ.ದಂಪತಿಗಳನ್ನು ಸೋಮವಾರ ಬೆಳಿಗ್ಗೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಗಂಡ ಮತ್ತು ಹೆಂಡತಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಗಾಯಗೊಂಡವರನ್ನು ನಾಗವಲ್ಲಿ ಮತ್ತು ಗಂಡುಗುಸೆ ಎಂದು ಗುರುತಿಸಲಾಗಿದೆ. ದಂಪತಿಗಳು ಹಾಸನ ಜಿಲ್ಲೆಯ ಹಗರೆಯಿಂದ ಕೆಲಸ ಹುಡುಕಿಕೊಂಡು ಬಂದಿದ್ದರು.

ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆಗಳಲ್ಲಿ ಆನೆಗಳ ಕಾಟ ವಿಪರೀತವಾಗಿದೆ. ಆನೆಗಳ ಹಾವಳಿಯನ್ನು ನಿಯಂತ್ರಿಸದ  ಅರಣ್ಯ ಇಲಾಖೆ ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಜನವಸತಿ ಪ್ರದೇಶಗಳಲ್ಲಿ ಹಾನಿ ಉಂಟುಮಾಡಿರುವ ಆನೆಗಳನ್ನು ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಈ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಇಬ್ಬರು ಮೃತಪಟ್ಟಿದ್ದರು, ನಂತರ ಸ್ಥಳೀಯರು ಶಾಸಕ ಎಂ.ಪಿ.ಕುಮಾರಸ್ವಾಮಿ ಅವರನ್ನು ಥಳಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror