ಚಿಕ್ಕಮಗಳೂರಿನಲ್ಲಿ ನಿಲ್ಲದ ಆನೆ ದಾಳಿ | ಮಲಗಿದ್ದ ದಂಪತಿ ಮೇಲೆ ದಾಳಿ ನಡೆಸಿದ ಆನೆ |

December 26, 2022
9:59 PM

ರಸ್ತೆ ಬದಿಯಲ್ಲಿ ಮಲಗಿದ್ದ ದಂಪತಿಯ ಮೇಲೆ ಆನೆ ದಾಳಿ ನಡೆಸಿದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಗ್ರಾಮದಲ್ಲಿ ನಡೆದಿದೆ.ದಂಪತಿಗಳನ್ನು ಸೋಮವಾರ ಬೆಳಿಗ್ಗೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಗಂಡ ಮತ್ತು ಹೆಂಡತಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಗಾಯಗೊಂಡವರನ್ನು ನಾಗವಲ್ಲಿ ಮತ್ತು ಗಂಡುಗುಸೆ ಎಂದು ಗುರುತಿಸಲಾಗಿದೆ. ದಂಪತಿಗಳು ಹಾಸನ ಜಿಲ್ಲೆಯ ಹಗರೆಯಿಂದ ಕೆಲಸ ಹುಡುಕಿಕೊಂಡು ಬಂದಿದ್ದರು.

ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆಗಳಲ್ಲಿ ಆನೆಗಳ ಕಾಟ ವಿಪರೀತವಾಗಿದೆ. ಆನೆಗಳ ಹಾವಳಿಯನ್ನು ನಿಯಂತ್ರಿಸದ  ಅರಣ್ಯ ಇಲಾಖೆ ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಜನವಸತಿ ಪ್ರದೇಶಗಳಲ್ಲಿ ಹಾನಿ ಉಂಟುಮಾಡಿರುವ ಆನೆಗಳನ್ನು ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಈ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಇಬ್ಬರು ಮೃತಪಟ್ಟಿದ್ದರು, ನಂತರ ಸ್ಥಳೀಯರು ಶಾಸಕ ಎಂ.ಪಿ.ಕುಮಾರಸ್ವಾಮಿ ಅವರನ್ನು ಥಳಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ
May 21, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”
May 21, 2026
2:06 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-05-2026 | ಮೇ ಅಂತ್ಯದವರೆಗೂ ಜೋರು ಮಳೆಯ ಲಕ್ಷಣವಿಲ್ಲ..! ಕರ್ನಾಟಕದಲ್ಲಿ ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ
May 21, 2026
1:42 PM
by: ಸಾಯಿಶೇಖರ್ ಕರಿಕಳ
“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!
May 20, 2026
9:29 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror