ರಸ್ತೆ ಬದಿಯಲ್ಲಿ ಮಲಗಿದ್ದ ದಂಪತಿಯ ಮೇಲೆ ಆನೆ ದಾಳಿ ನಡೆಸಿದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಗ್ರಾಮದಲ್ಲಿ ನಡೆದಿದೆ.ದಂಪತಿಗಳನ್ನು ಸೋಮವಾರ ಬೆಳಿಗ್ಗೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಗಂಡ ಮತ್ತು ಹೆಂಡತಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಗಾಯಗೊಂಡವರನ್ನು ನಾಗವಲ್ಲಿ ಮತ್ತು ಗಂಡುಗುಸೆ ಎಂದು ಗುರುತಿಸಲಾಗಿದೆ. ದಂಪತಿಗಳು ಹಾಸನ ಜಿಲ್ಲೆಯ ಹಗರೆಯಿಂದ ಕೆಲಸ ಹುಡುಕಿಕೊಂಡು ಬಂದಿದ್ದರು.
ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆಗಳಲ್ಲಿ ಆನೆಗಳ ಕಾಟ ವಿಪರೀತವಾಗಿದೆ. ಆನೆಗಳ ಹಾವಳಿಯನ್ನು ನಿಯಂತ್ರಿಸದ ಅರಣ್ಯ ಇಲಾಖೆ ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಜನವಸತಿ ಪ್ರದೇಶಗಳಲ್ಲಿ ಹಾನಿ ಉಂಟುಮಾಡಿರುವ ಆನೆಗಳನ್ನು ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಈ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಇಬ್ಬರು ಮೃತಪಟ್ಟಿದ್ದರು, ನಂತರ ಸ್ಥಳೀಯರು ಶಾಸಕ ಎಂ.ಪಿ.ಕುಮಾರಸ್ವಾಮಿ ಅವರನ್ನು ಥಳಿಸಿದ್ದರು.
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.