ಕೊಲ್ಲಮೊಗ್ರ ಆನೆ ದಾಳಿ | ಹಾಲು ಕೊಡಲು ತೆರಳುತ್ತಿದ್ದ ಯುವಕನ ಮೇಲೆ ಆನೆ ದಾಳಿ | ಗಂಭೀರ ಗಾಯಗೊಂಡ ಯುವಕ ಆಸ್ಪತ್ರೆಗೆ ದಾಖಲು |

March 13, 2022
9:37 AM

ಹಾಲು ಸೊಸೈಟಿಗೆ ಹಾಲು ನೀಡಲು ಬೈಕ್‌ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆ ದಾಳಿ ನಡೆಸಿ ಯುವಕ ಗಂಭೀರ ಗಾಯಗೊಂಡ ಘಟನೆ ಕೊಲ್ಲಮೊಗ್ರ ಗ್ರಾಮದ ಇಡ್ನೂರು ಎಂಬಲ್ಲಿ ನಡೆದಿದೆ. ಗಾಯಗೊಂಡ ಯುವಕ ಕೋನಡ್ಕ‌ ನಿವಾಸಿ ಗುರುಪ್ರಸಾದ್.

ಭಾನುವಾರ ಮುಂಜಾನೆ ಕೊಲ್ಲಮೊಗ್ರ ಗ್ರಾಮದ ಇಡ್ನೂರು ಹಾಲು ಸೊಸೈಟಿಗೆ ಮನೆಯಿಂದ ಹಾಲು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಗುರುಪ್ರಸಾದ್ ಮೇಲೆ ಕಾಡಾನೆ ದಾಳಿ ನಡೆಸಿದೆ. ಯುವಕನ ಮೇಲೆ ದಾಳಿ ಮಾಡಿದ ಆನೆ  ಆತನನ್ನು ಕೆಲ ದೂರದವರೆಗೆ ಎಳೆದೊಯ್ದಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.  ಗುರುಪ್ರಸಾದ್ ಮೇಲೆ ಆನೆ ದಾಳಿಯ ಘಟನೆ ನೋಡಿದ ಸ್ಥಳೀಯರೊಬ್ಬರು ಊರಿನ ಮಂದಿಗೆ ತಿಳಿಸಿದ್ದು ನಂತರ ಸ್ಥಳೀಯರು ಸೇರಿ ಕಾಡಾನೆಯನ್ನು  ಓಡಿಸಿದ್ದಾರೆ. ಗಾಯಗೊಂಡ ಯುವಕನನ್ನು ಸುಳ್ಯದ ಆಸ್ಪತ್ರೆಗೆ ಸಾಗಿಸಲಾಗಿದೆ.

 

ಕಳೆದ ಕೆಲ ಸಮಯದ ಹಿಂದೆಯೂ ಕೊಲ್ಲಮೊಗ್ರ ಪರಿಸರದಲ್ಲಿ ಆನೆ ದಾಳಿಗೆ ಒಳಗಾಗಿ ಗಂಭೀರ ಗಾಯಗೊಂಡ ಘಟನೆಗಳು ನಡೆದಿದೆ. ಈ ಪರಿಸರದಲ್ಲಿ ತೋಟಗಳ ಮೇಲೆ ಕಾಡಾನೆ ದಾಳಿ ನಡೆಯುತ್ತಲೇ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ
May 21, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”
May 21, 2026
2:06 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-05-2026 | ಮೇ ಅಂತ್ಯದವರೆಗೂ ಜೋರು ಮಳೆಯ ಲಕ್ಷಣವಿಲ್ಲ..! ಕರ್ನಾಟಕದಲ್ಲಿ ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ
May 21, 2026
1:42 PM
by: ಸಾಯಿಶೇಖರ್ ಕರಿಕಳ
“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!
May 20, 2026
9:29 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror