ಹಾಲು ಸೊಸೈಟಿಗೆ ಹಾಲು ನೀಡಲು ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆ ದಾಳಿ ನಡೆಸಿ ಯುವಕ ಗಂಭೀರ ಗಾಯಗೊಂಡ ಘಟನೆ ಕೊಲ್ಲಮೊಗ್ರ ಗ್ರಾಮದ ಇಡ್ನೂರು ಎಂಬಲ್ಲಿ ನಡೆದಿದೆ. ಗಾಯಗೊಂಡ ಯುವಕ ಕೋನಡ್ಕ ನಿವಾಸಿ ಗುರುಪ್ರಸಾದ್.
ಭಾನುವಾರ ಮುಂಜಾನೆ ಕೊಲ್ಲಮೊಗ್ರ ಗ್ರಾಮದ ಇಡ್ನೂರು ಹಾಲು ಸೊಸೈಟಿಗೆ ಮನೆಯಿಂದ ಹಾಲು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಗುರುಪ್ರಸಾದ್ ಮೇಲೆ ಕಾಡಾನೆ ದಾಳಿ ನಡೆಸಿದೆ. ಯುವಕನ ಮೇಲೆ ದಾಳಿ ಮಾಡಿದ ಆನೆ ಆತನನ್ನು ಕೆಲ ದೂರದವರೆಗೆ ಎಳೆದೊಯ್ದಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ. ಗುರುಪ್ರಸಾದ್ ಮೇಲೆ ಆನೆ ದಾಳಿಯ ಘಟನೆ ನೋಡಿದ ಸ್ಥಳೀಯರೊಬ್ಬರು ಊರಿನ ಮಂದಿಗೆ ತಿಳಿಸಿದ್ದು ನಂತರ ಸ್ಥಳೀಯರು ಸೇರಿ ಕಾಡಾನೆಯನ್ನು ಓಡಿಸಿದ್ದಾರೆ. ಗಾಯಗೊಂಡ ಯುವಕನನ್ನು ಸುಳ್ಯದ ಆಸ್ಪತ್ರೆಗೆ ಸಾಗಿಸಲಾಗಿದೆ.
ಕಳೆದ ಕೆಲ ಸಮಯದ ಹಿಂದೆಯೂ ಕೊಲ್ಲಮೊಗ್ರ ಪರಿಸರದಲ್ಲಿ ಆನೆ ದಾಳಿಗೆ ಒಳಗಾಗಿ ಗಂಭೀರ ಗಾಯಗೊಂಡ ಘಟನೆಗಳು ನಡೆದಿದೆ. ಈ ಪರಿಸರದಲ್ಲಿ ತೋಟಗಳ ಮೇಲೆ ಕಾಡಾನೆ ದಾಳಿ ನಡೆಯುತ್ತಲೇ ಇದೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.