ಹಾಲು ಸೊಸೈಟಿಗೆ ಹಾಲು ನೀಡಲು ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆ ದಾಳಿ ನಡೆಸಿ ಯುವಕ ಗಂಭೀರ ಗಾಯಗೊಂಡ ಘಟನೆ ಕೊಲ್ಲಮೊಗ್ರ ಗ್ರಾಮದ ಇಡ್ನೂರು ಎಂಬಲ್ಲಿ ನಡೆದಿದೆ. ಗಾಯಗೊಂಡ ಯುವಕ ಕೋನಡ್ಕ ನಿವಾಸಿ ಗುರುಪ್ರಸಾದ್.
ಭಾನುವಾರ ಮುಂಜಾನೆ ಕೊಲ್ಲಮೊಗ್ರ ಗ್ರಾಮದ ಇಡ್ನೂರು ಹಾಲು ಸೊಸೈಟಿಗೆ ಮನೆಯಿಂದ ಹಾಲು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಗುರುಪ್ರಸಾದ್ ಮೇಲೆ ಕಾಡಾನೆ ದಾಳಿ ನಡೆಸಿದೆ. ಯುವಕನ ಮೇಲೆ ದಾಳಿ ಮಾಡಿದ ಆನೆ ಆತನನ್ನು ಕೆಲ ದೂರದವರೆಗೆ ಎಳೆದೊಯ್ದಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ. ಗುರುಪ್ರಸಾದ್ ಮೇಲೆ ಆನೆ ದಾಳಿಯ ಘಟನೆ ನೋಡಿದ ಸ್ಥಳೀಯರೊಬ್ಬರು ಊರಿನ ಮಂದಿಗೆ ತಿಳಿಸಿದ್ದು ನಂತರ ಸ್ಥಳೀಯರು ಸೇರಿ ಕಾಡಾನೆಯನ್ನು ಓಡಿಸಿದ್ದಾರೆ. ಗಾಯಗೊಂಡ ಯುವಕನನ್ನು ಸುಳ್ಯದ ಆಸ್ಪತ್ರೆಗೆ ಸಾಗಿಸಲಾಗಿದೆ.
ಕಳೆದ ಕೆಲ ಸಮಯದ ಹಿಂದೆಯೂ ಕೊಲ್ಲಮೊಗ್ರ ಪರಿಸರದಲ್ಲಿ ಆನೆ ದಾಳಿಗೆ ಒಳಗಾಗಿ ಗಂಭೀರ ಗಾಯಗೊಂಡ ಘಟನೆಗಳು ನಡೆದಿದೆ. ಈ ಪರಿಸರದಲ್ಲಿ ತೋಟಗಳ ಮೇಲೆ ಕಾಡಾನೆ ದಾಳಿ ನಡೆಯುತ್ತಲೇ ಇದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…