ಹಾಲು ಸೊಸೈಟಿಗೆ ಹಾಲು ನೀಡಲು ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆ ದಾಳಿ ನಡೆಸಿ ಯುವಕ ಗಂಭೀರ ಗಾಯಗೊಂಡ ಘಟನೆ ಕೊಲ್ಲಮೊಗ್ರ ಗ್ರಾಮದ ಇಡ್ನೂರು ಎಂಬಲ್ಲಿ ನಡೆದಿದೆ. ಗಾಯಗೊಂಡ ಯುವಕ ಕೋನಡ್ಕ ನಿವಾಸಿ ಗುರುಪ್ರಸಾದ್.
ಭಾನುವಾರ ಮುಂಜಾನೆ ಕೊಲ್ಲಮೊಗ್ರ ಗ್ರಾಮದ ಇಡ್ನೂರು ಹಾಲು ಸೊಸೈಟಿಗೆ ಮನೆಯಿಂದ ಹಾಲು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಗುರುಪ್ರಸಾದ್ ಮೇಲೆ ಕಾಡಾನೆ ದಾಳಿ ನಡೆಸಿದೆ. ಯುವಕನ ಮೇಲೆ ದಾಳಿ ಮಾಡಿದ ಆನೆ ಆತನನ್ನು ಕೆಲ ದೂರದವರೆಗೆ ಎಳೆದೊಯ್ದಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ. ಗುರುಪ್ರಸಾದ್ ಮೇಲೆ ಆನೆ ದಾಳಿಯ ಘಟನೆ ನೋಡಿದ ಸ್ಥಳೀಯರೊಬ್ಬರು ಊರಿನ ಮಂದಿಗೆ ತಿಳಿಸಿದ್ದು ನಂತರ ಸ್ಥಳೀಯರು ಸೇರಿ ಕಾಡಾನೆಯನ್ನು ಓಡಿಸಿದ್ದಾರೆ. ಗಾಯಗೊಂಡ ಯುವಕನನ್ನು ಸುಳ್ಯದ ಆಸ್ಪತ್ರೆಗೆ ಸಾಗಿಸಲಾಗಿದೆ.
ಕಳೆದ ಕೆಲ ಸಮಯದ ಹಿಂದೆಯೂ ಕೊಲ್ಲಮೊಗ್ರ ಪರಿಸರದಲ್ಲಿ ಆನೆ ದಾಳಿಗೆ ಒಳಗಾಗಿ ಗಂಭೀರ ಗಾಯಗೊಂಡ ಘಟನೆಗಳು ನಡೆದಿದೆ. ಈ ಪರಿಸರದಲ್ಲಿ ತೋಟಗಳ ಮೇಲೆ ಕಾಡಾನೆ ದಾಳಿ ನಡೆಯುತ್ತಲೇ ಇದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…