ಹಾಲು ಸೊಸೈಟಿಗೆ ಹಾಲು ನೀಡಲು ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆ ದಾಳಿ ನಡೆಸಿ ಯುವಕ ಗಂಭೀರ ಗಾಯಗೊಂಡ ಘಟನೆ ಕೊಲ್ಲಮೊಗ್ರ ಗ್ರಾಮದ ಇಡ್ನೂರು ಎಂಬಲ್ಲಿ ನಡೆದಿದೆ. ಗಾಯಗೊಂಡ ಯುವಕ ಕೋನಡ್ಕ ನಿವಾಸಿ ಗುರುಪ್ರಸಾದ್.
ಭಾನುವಾರ ಮುಂಜಾನೆ ಕೊಲ್ಲಮೊಗ್ರ ಗ್ರಾಮದ ಇಡ್ನೂರು ಹಾಲು ಸೊಸೈಟಿಗೆ ಮನೆಯಿಂದ ಹಾಲು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಗುರುಪ್ರಸಾದ್ ಮೇಲೆ ಕಾಡಾನೆ ದಾಳಿ ನಡೆಸಿದೆ. ಯುವಕನ ಮೇಲೆ ದಾಳಿ ಮಾಡಿದ ಆನೆ ಆತನನ್ನು ಕೆಲ ದೂರದವರೆಗೆ ಎಳೆದೊಯ್ದಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ. ಗುರುಪ್ರಸಾದ್ ಮೇಲೆ ಆನೆ ದಾಳಿಯ ಘಟನೆ ನೋಡಿದ ಸ್ಥಳೀಯರೊಬ್ಬರು ಊರಿನ ಮಂದಿಗೆ ತಿಳಿಸಿದ್ದು ನಂತರ ಸ್ಥಳೀಯರು ಸೇರಿ ಕಾಡಾನೆಯನ್ನು ಓಡಿಸಿದ್ದಾರೆ. ಗಾಯಗೊಂಡ ಯುವಕನನ್ನು ಸುಳ್ಯದ ಆಸ್ಪತ್ರೆಗೆ ಸಾಗಿಸಲಾಗಿದೆ.
ಕಳೆದ ಕೆಲ ಸಮಯದ ಹಿಂದೆಯೂ ಕೊಲ್ಲಮೊಗ್ರ ಪರಿಸರದಲ್ಲಿ ಆನೆ ದಾಳಿಗೆ ಒಳಗಾಗಿ ಗಂಭೀರ ಗಾಯಗೊಂಡ ಘಟನೆಗಳು ನಡೆದಿದೆ. ಈ ಪರಿಸರದಲ್ಲಿ ತೋಟಗಳ ಮೇಲೆ ಕಾಡಾನೆ ದಾಳಿ ನಡೆಯುತ್ತಲೇ ಇದೆ.
ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…
ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…
ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…
NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…
ಮೇ ತಿಂಗಳಲ್ಲಿ ಅಡಿಕೆ ಮಾರುಕಟ್ಟೆ ಚೇತರಿಕೆ ಕಂಡುಬಂದಿದ್ದು, ಹಳೆ ಚಾಲಿಗೆ ಭಾರೀ ಬೇಡಿಕೆ…