Advertisement
MIRROR FOCUS

#EmergencyAlertSystem | ಏಕಕಾಲಕ್ಕೆ ಎಲ್ಲರ ಮೊಬೈಲ್​ಗಳಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಮತ್ತು ಬೀಪ್ ಸೌಂಡ್ | ಬಂದ ಅಲರ್ಟ್​ ಮೆಸೇಜ್‌ನ ಹಿಂದಿನ ಗುಟ್ಟೇನು..?

Share

ಅದೊಂದು ಕಾಲವಿತ್ತು. ಒಂದು ಊರಿನ ಇನ್ನೊಂದು ಊರಿಗೆ ವಿಷಯ ತಿಳಿಯಬೇಕಾದ್ರೆ ತಿಂಗಳು ಗಟ್ಟಲೆ ಬೇಕಿತ್ತು. ಆದರೆ ಕಾಲ ಮುಂದೆ ಹೋದಂತೆ ತಂತ್ರಜ್ಞಾನ ಬೆಳೆದಂತೆ ಎಲ್ಲವೂ ಸರಳವಾಗುತ್ತಾ ಬಂತು. ಏನೋ ಒಂದು ಎಮರ್ಜೆನ್ಸಿ ಬಂತಪ್ಪಾ.. ಪ್ರತಿಯೊಬ್ಬರಿಗೂ ಏಕಕಾಲಕ್ಕೆ ಹೇಳಬೇಕು, ಏನು ಮಾಡೋದು..? ಈ ಕಾಲದಲ್ಲಿ ಅದಕ್ಕೆಲ್ಲ ಯೋಚಿಸುವ ಅಗತ್ಯವಿಲ್ಲ. ತಂತ್ರಜ್ಞಾನ ಬಹಳ ಮುಂದುವರೆದಿದೆ. ಅದರ ಭಾಗವಾಗಿಯೇ ಇಂದು ಎಲ್ಲರ ಮೊಬೈಲ್‌ಗಳಿಗೆ ಬಂದ ಅಲರ್ಟ್‌ ಮೆಸೆಜ್ #Alertmessege.‌

ಸೋಶಿಯಲ್ ಮೀಡಿಯಾಗಳಲ್ಲಿ ಕೆಲದಿನಗಳಿಂದ ಸುದ್ದಿಯೊಂದು ವೈರಲ್ ಆಗುತ್ತಿದ್ದು, ಇದರಲ್ಲಿ ಅಕ್ಟೋಬರ್ 12ರಂದು ಪ್ರತಿಯೊಬ್ಬರ ಫೋನ್​ನಲ್ಲೂ ಬೀಪ್​ ಸೌಂಡ್​ ಮತ್ತು ಎಮರ್ಜೆನ್ಸಿ ಮೆಸೇಜ್ ಬರಲಿದೆ ಎಂದು ತಿಳಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆ ವ್ಯಾಪಕವಾಗಿ ಹೆಚ್ಚಾಗಿದೆ. ಇದರ ಬಳಕೆ ಹೆಚ್ಚಾದಂತೆ ಅಗತ್ಯತೆಯೂ ಸಹ ಹೆಚ್ಚಾಗಿದೆ. ಆದ್ರೆ ಈಗ ಬದಲಾಗುತ್ತಿರುವ ವಾತಾರಣದಿಂದ ಕೆಲವು ಪ್ರದೇಶಗಳಲ್ಲಿ ಪ್ರಕೃತಿ ವಿಕೋಪ, ಯುದ್ಧದಂತಹ ಊಹೆಯೂ ಮಾಡಲಾಗದ ಘಟನೆಗಳು ನಡೆಯುತ್ತಿವೆ. ಇದನ್ನೆಲ್ಲಾ ಗಮನದಲ್ಲಿಟ್ಟುಕೊಂಡು ಇದೀಗ ಹೊಸ ಟೆಕ್ನಾಲಜಿಯನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಪರಿಚಯಿಸಲು ಸಿದ್ಧವಾಗಿದೆ. ಎಮರ್ಜೆನ್ಸಿ ಸಂದರ್ಭದಲ್ಲಿ ಜನರ ಮೊಬೈಲ್‌ಗಳಿಗೆ ತುರ್ತು ಸಂದೇಶ ಬರುವಂತೆ ಮಾಡುವ ಹೊಸ ಟೆಕ್ನಾಲಜಿಯ ಪರೀಕ್ಷೆ ನಡೆಯುತ್ತಿದೆ. ಇದರ ಭಾಗವಾಗಿ ಇಂದು ಹಲವರ ಮೊಬೈಲ್‌ಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಮತ್ತು ಬೀಪ್ ಸೌಂಡ್ ಕೇಳಲಿದೆ ಎಂದು ಹೇಳಲಾಗಿದೆ.

ಇತ್ತೀಚೆಗೆ ಹೆಚ್ಚಾಗುತ್ತಿರುವ ಪ್ರಕೃತಿ ವಿಕೋಪಗಳ ಕುರಿತು ಜನರಿಗೆ ತುರ್ತು ಸಂದೇಶ ನೀಡುವ ಉದ್ದೇಶದಿಂದ ಟೆಲಿಕಮ್ಯುನಿಕೇಶನ್ ಇಲಾಖೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೇರಿಕೊಂಡು ಈ ಬಗ್ಗೆ ಮುನ್ನೆಚ್ಚರಿಕೆಯನ್ನು ನೀಡಲು ಮುಂದಾಗಿದೆ. ಇದರಿಂದಾಗಿ ರಾಜ್ಯದಲ್ಲಿಇಂದು ಅಂದರೆ ಅಕ್ಟೋಬರ್ 12ರಂದು ಮೊಬೈಲ್​ಗಳಲ್ಲಿ ಬೀಪ್​ ಸೌಂಡ್​ ಕೇಳಲಿದೆ. ಇನ್ನು ಈ ವ್ಯವಸ್ಥೆ ರಾಜ್ಯದಲ್ಲಿ ದೂರಸಂಪರ್ಕ ಇಲಾಖೆ (ಸಿ-ಡಾಟ್​) ಸೆಲ್ ಬ್ರಾಡ್​ ಕಾಸ್ಟಿಂಗ್ ಕಂಪನಿ ಮೂಲಕ ಈ ಎಚ್ಚರಿಕೆಯ ಸಂದೇಶದ ಪರೀಕ್ಷೆ ನಡೆಯಲಿದೆ. ಕೆಲ ಬಳಕೆದಾರರಿಗೆ ಈಗಾಗಲೇ ಈ ಮೆಸೇಜ್ ರವಾನೆಯಾಗಿದ್ದು, ಇನ್ನೂ ಕೆಲವರಿಗೆ ಇಂದು ಬರಲಿದೆ ಎಂಬ ಸುದ್ದಿಗಳು ವೈರಲ್ ಆಗಿವೆ.

ಇದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯಿಂದ ಸೆಲ್ ಬ್ರಾಡ್‌ಕಾಸ್ಟಿಂಗ್ ಸಿಸ್ಟಮ್ ಮೂಲಕ ಕಳುಹಿಸಲಾದ ಮಾದರಿ ಪರೀಕ್ಷಾ ಸಂದೇಶ. ಈ ಸಂದೇಶವನ್ನು ನಿರ್ಲಕ್ಷಿಸಿ ಏಕೆಂದರೆ ಇದಕ್ಕಾಗಿ ನೀವು ಪ್ರತಿಕ್ರಿಯೆ ನೀಡುವ ಅವಶ್ಯಕತೆ ಇರುವುದಿಲ್ಲ. ಈ ಸಂದೇಶವನ್ನು ಟೆಸ್ಟ್ ಪ್ಯಾನ್-ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಗೆ ಕಳುಹಿಸಲಾಗಿದೆ. ಇದು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ತುರ್ತು ಸಂದರ್ಭಗಳಲ್ಲಿ ಎಚ್ಚರಿಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಇದನ್ನು ರವಾನಿಸಿದೆ. ಇನ್ನು ಈ ಮೆಸೇಜ್​​ ಭೂಕಂಪ, ಸುನಾಮಿ, ಪ್ರವಾಹ, ಯುದ್ಧಗಳ ಸಂದರ್ಭದಲ್ಲಿ ತಕ್ಷಣ ಕ್ರಮ ಕೈಗೊಳ್ಳಲು ಮತ್ತು ಜನರಿಗೆ ಎಚ್ಚರಿಕೆ ನೀಡಲು ಸಹಕಾರಿಯಾಗಲಿದೆ. ಅದೇ ರೀತಿ ಮುನ್ನೆಚ್ಚರಿಕೆ ಕ್ರಮಗಳನ್ನು ಸಹ ತೆಗೆದುಕೊಳ್ಳಲು ಇದು ತಿಳಿಸುತ್ತದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

4 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

11 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

12 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

12 hours ago