2025-26ರ ಹಿಂಗಾರು ಋತುವಿನಲ್ಲಿ ಆಹಾರ ಧಾನ್ಯ ಉತ್ಪಾದನೆಗೆ ರಾಷ್ಟ್ರೀಯ ಗುರಿಯನ್ನು 362.50 ಮಿಲಿಯನ್ ಟನ್ಗಳಿಗೆ ನಿಗದಿಪಡಿಸಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ದೆಹಲಿಯಲ್ಲಿ ಹೇಳಿದ್ದಾರೆ. ಕಳೆದ ವರ್ಷದ ಆಹಾರ ಧಾನ್ಯ ಉತ್ಪಾದನೆಗಿಂತ ಈ ಬಾರಿಯ ಉತ್ಪಾದನೆ ಶೇಕಡಾ 2.4 ರಷ್ಟು ಹೆಚ್ಚಾಗಿದೆ. 2025-26ರ ಮೊದಲ ತ್ರೈಮಾಸಿಕದಲ್ಲಿ ಭಾರತದ ಕೃಷಿ ವಲಯವು ಶೇಕಡಾ 3.7 ರಷ್ಟು ಬೆಳವಣಿಗೆ ದರವನ್ನು ದಾಖಲಿಸಿದ್ದು, ಇದು ಜಾಗತಿಕವಾಗಿ ಅಧಿಕವಾಗಿದೆ. ದೇಶದ ಅವಶ್ಯಕತೆಗಳನ್ನು ಪೂರೈಸಲು ಸಾಕಷ್ಟು ಬೀಜ ದಾಸ್ತಾನು ಲಭ್ಯವಿದೆ ಎಂದು ತಿಳಿಸಿದರು. ನಕಲಿ ರಸಗೊಬ್ಬರಗಳು, ಬೀಜಗಳು ಮತ್ತು ಕೀಟನಾಶಕಗಳ ಹಾವಳಿ ಹೆಚ್ಚಾಗಿದ್ದು, ಇಂತಹ ತಯಾರಕರು ಮತ್ತು ಮಾರಾಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು . ಹೆಚ್ಚುತ್ತಿರುವ ಅನಿರೀಕ್ಷಿತ ಹವಾಮಾನ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು ರೈತರು ಬೆಳೆ ವಿಮೆಯನ್ನು ಆರಿಸಿಕೊಳ್ಳುವಂತೆ ಇದಾಗಲೇ ರೈತರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…