Advertisement
MIRROR FOCUS

ಸೌರ ಶಕ್ತಿ ಆಧಾರಿತವಾಗಿ ಮಹಿಳೆಯರಿಗಾಗಿ ಸ್ವಉದ್ಯೋಗ | ಏನೇನು ಮಾಡಬಹುದು..?

Share

ಸೌರ ಶಕ್ತಿ ಆಧಾರಿತವಾಗಿ ಮಹಿಳೆಯರಿಗಾಗಿ ಸ್ವಉದ್ಯೋಗ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮ ಸೆಲ್ಕೋ ಫೌಂಡೇಶನ್ ವತಿಯಿಂದ ನಡೆಯುತ್ತಿದೆ. ಬೆಳಗಾವಿಯಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ, ಸ್ವ ಸಹಾಯ ಗುಂಪಿನ ಮಹಿಳೆಯರಿಗೆ  ಸೌರ ಶಕ್ತಿ ಆಧಾರಿತ ಉದ್ಯೋಗ ಮೇಳ ನಡೆಯಿತು. …..ಮುಂದೆ ಓದಿ….

ಗ್ರಾಮೀಣ ಭಾಗದ ಮಹಿಳೆಯರು ಸ್ವಾವಲಂಬಿಯಾಗಬೇಕು. ಆರ್ಥಿಕವಾಗಿ ಅಭಿವೃದ್ಧಿ ಹೊಂದವುದರ ಜೊತಗೆ ಹೆಚ್ಚಿನ ಮಹಿಳೆಯರು ಸೌರ ವಿದ್ಯುತ್ ಆಧಾರಿತ ಸ್ವ-ಉದ್ಯೋಗ ಕಡೆ ಬರಬೇಕೆಂಬ ಉದ್ದೇಶದಿಂದ ಈ ಸೌರ ಸ್ವ-ಉದ್ಯೋಗ ಮೇಳ ವನ್ನು ಆಯೋಜಿಸಲಾಗಿತ್ತು.

ಕಳೆದ 14 ವರ್ಷಗಳಿಂದ ದೇಶ್ಯಾದ್ಯಂತ ಸುಸ್ಥಿರ ಅಭಿವೃದ್ಧಿ ಹಾಗೂ ಸೌರ ವಿದ್ಯುತ್ ವಿಭಾಗದಲ್ಲಿ ಸೆಲ್ಕೋ ಫೌಂಡೇಶನ್ ಹೊಸ ಆವಿಷ್ಕಾರಗಳನ್ನು ತರುವುದರ ಜೊತೆಗೆ ನಿರುದ್ಯೋಗ ಮಹಿಳೆಯರು ಜೀವನ ರೂಪಿಸಿಕೊಳ್ಳಲು ಸೆಲ್ಕೋ ಫೌಂಡೇಶನ್ ಸಹಕಾರಿಯಾಗಿದೆ. ಈಗಾಗಲೇ ಬೆಳಗಾವಿ ಜಿಲ್ಲೆಯಲ್ಲಿ 50 ಕ್ಕೂ ಹೆಚ್ಚು ಮಹಿಳೆಯರಿಗೆ ಸ್ವ ಉದ್ಯೋಗವನ್ನು ಹಾಗೂ ಸೌರ ವಿದ್ಯುತ್ ಆಧಾರಿತ ಸ್ವ-ಉದ್ಯೋಗದ ಮೂಲಕ ಜೀವನೋಪಾಯ ವ್ಯವಸ್ಥೆಗಳನ್ನು ಕಲ್ಪಿಸುವಲ್ಲಿ ಗಮನಾರ್ಹ ಕೆಲಸಗಳನ್ನು ಮಾಡುತ್ತಿದೆ. ಕಳೆದ ವರ್ಷ ವಿಶೇಷ ಚೇತನರಿಗಾಗಿ  ಬೆಳಗಾವಿಯಲ್ಲಿ ಉದ್ಯೋಗ ಮೇಳ ಆಯೋಜಿಸಿ, ಈಗ ಜಿಲ್ಲೆಯಾದ್ಯಂತ 130ಕ್ಕೂ ಅಧಿಕ ವಿಶೇಷಚೇತನರು ಸೌರ ಉದ್ಯಮಿಗಳಾಗಿ ಹೊರಹೊಮ್ಮಿದ್ದಾರೆ.

ಸೌರ ಸ್ವ-ಉದ್ಯೋಗ ಮಹಿಳೆಯರಿಗೆ ಬದುಕಿಗೆ ಆಸರೆಯಾಗಲಿದೆ.ಆರೋಗ್ಯ, ಜೀವನೋಪಾಯ ಮತ್ತು ಮಕ್ಕಳಿಗೆ ಶಿಕ್ಷಣ ಒದಗಿಸಲು ಬಹಳಷ್ಟು ಸಹಕಾರಿಯಾಗಲಿದೆ. ಗ್ರಾಮೀಣ ಭಾಗದಲ್ಲಿ ಮಹಿಳೆಯರಿಗೆ ಸ್ವ ಉದ್ಯೋಗಕ್ಕೆ ಅನುಕೂಲವಾಗುವಂತೆ ಹೈನುಗಾರಿಕೆಯಲ್ಲಿ ಸೌರಚಾಲಿತ ಹಾಲುಕರೆಯುವ ಯಂತ್ರ ಆವಿಷ್ಕರಿಸಲಾಗಿದೆ. ಅಲ್ಲದೆ, ಸ್ವಂತ ದುಡಿಮೆಯಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರಿಗೆ ಸೋಲಾರ್‌ ಆಶಾಕಿರಣಗಳಾಗಿವೆ. ಸಣ್ಣ ಸಣ್ಣ ಗೂಡಂಗಂಡಿ ವ್ಯಾಪಾರಿಗಳು, ಹೂವಿನ ವ್ಯಾಪಾರಿಗಳ ತಾತ್ಕಾಲಿಕ ಅಂಗಡಿಗಳಿಗೆ ವಿದ್ಯುತ್‌ ಸಂಪರ್ಕ ನೀಡುವುದಿಲ್ಲ. ಅಂತಹ ಚಿಕ್ಕ ಘಟಕಗಳಿಗೆ ಸೋಲಾರ್‌ ಘಟಕಗಳನ್ನು ಅಳವಡಿಸಿ ವ್ಯಾಪಾರ ವ್ಯವಹಾರವನ್ನು ದ್ವಿಗುಣ ಮಾಡಿಕೊಂಡ ಉದಾಹರಣೆಗಳಿವೆ. ಸೌರ ಚಾಲಿತ ಹೊಲಿಗೆ ಯಂತ್ರ  ಅಳವಡಿಸಿಕೊಂಡು ಮಹಿಳೆಯರು ಸ್ವಾವಲಂಬನೆಯ ಹಾದಿ ತುಳಿದಿದ್ದಾರೆ.

ಸೆಲ್ಕೋ ತಂತ್ರಜ್ಞಾನದಿಂದಾಗಿ ಸುಲಭದಲ್ಲಿ ಕಮ್ಮಾರಿಕೆ ಮಾಡಲು ಸೌರ ಚಾಲಿತ ಉಲುಮೆ ಯಂತ್ರ, ಕುಂಬಾರಿಕೆ ಮಾಡಲು ತಿಗರಿಗಳನ್ನು ಅಳವಡಿಸಲಾಗುತ್ತದೆ, ಹೀಗೇ ಹಲವು ಉಪಕರಣಗಳು ಸೋಲಾರ್‌ ನಿಂದ ಚಾಲೂ ಮಾಡಬಹುದಾಗಿದೆ.

ಬೆಳಗಾವಿಯಲ್ಲಿ  ನಡೆದ ಈ ಕಾರ್ಯಾಗಾರವನ್ನು ಬೆಳಗಾವಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ್ ಚಾಲನೆ ನೀಡಿದರು. ಸೆಲ್ಕೋ ಫೌಂಡೇಶನ್ ವ್ಯವಸ್ಥಾಪಕ ನಿದೇರ್ಶಕ ವಿನಾಯಕ ಹೆಗಡೆ ಸೇರಿದಂತೆ ಫೌಂಡೇಶನ್ ಪದಾಧಿಕಾರಿಗಳು, ಜಿಲ್ಲಾ ಪಂಚಾಯತ್ ಅಧಿಕಾರಿಗಳು ಮೇಳದಲ್ಲಿ ಪಾಲ್ಗೊಂಡಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

6 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

7 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

16 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

16 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

16 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

21 hours ago