Advertisement
MIRROR FOCUS

ಸೌರ ಶಕ್ತಿ ಆಧಾರಿತವಾಗಿ ಮಹಿಳೆಯರಿಗಾಗಿ ಸ್ವಉದ್ಯೋಗ | ಏನೇನು ಮಾಡಬಹುದು..?

Share

ಸೌರ ಶಕ್ತಿ ಆಧಾರಿತವಾಗಿ ಮಹಿಳೆಯರಿಗಾಗಿ ಸ್ವಉದ್ಯೋಗ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮ ಸೆಲ್ಕೋ ಫೌಂಡೇಶನ್ ವತಿಯಿಂದ ನಡೆಯುತ್ತಿದೆ. ಬೆಳಗಾವಿಯಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ, ಸ್ವ ಸಹಾಯ ಗುಂಪಿನ ಮಹಿಳೆಯರಿಗೆ  ಸೌರ ಶಕ್ತಿ ಆಧಾರಿತ ಉದ್ಯೋಗ ಮೇಳ ನಡೆಯಿತು. …..ಮುಂದೆ ಓದಿ….

ಗ್ರಾಮೀಣ ಭಾಗದ ಮಹಿಳೆಯರು ಸ್ವಾವಲಂಬಿಯಾಗಬೇಕು. ಆರ್ಥಿಕವಾಗಿ ಅಭಿವೃದ್ಧಿ ಹೊಂದವುದರ ಜೊತಗೆ ಹೆಚ್ಚಿನ ಮಹಿಳೆಯರು ಸೌರ ವಿದ್ಯುತ್ ಆಧಾರಿತ ಸ್ವ-ಉದ್ಯೋಗ ಕಡೆ ಬರಬೇಕೆಂಬ ಉದ್ದೇಶದಿಂದ ಈ ಸೌರ ಸ್ವ-ಉದ್ಯೋಗ ಮೇಳ ವನ್ನು ಆಯೋಜಿಸಲಾಗಿತ್ತು.

ಕಳೆದ 14 ವರ್ಷಗಳಿಂದ ದೇಶ್ಯಾದ್ಯಂತ ಸುಸ್ಥಿರ ಅಭಿವೃದ್ಧಿ ಹಾಗೂ ಸೌರ ವಿದ್ಯುತ್ ವಿಭಾಗದಲ್ಲಿ ಸೆಲ್ಕೋ ಫೌಂಡೇಶನ್ ಹೊಸ ಆವಿಷ್ಕಾರಗಳನ್ನು ತರುವುದರ ಜೊತೆಗೆ ನಿರುದ್ಯೋಗ ಮಹಿಳೆಯರು ಜೀವನ ರೂಪಿಸಿಕೊಳ್ಳಲು ಸೆಲ್ಕೋ ಫೌಂಡೇಶನ್ ಸಹಕಾರಿಯಾಗಿದೆ. ಈಗಾಗಲೇ ಬೆಳಗಾವಿ ಜಿಲ್ಲೆಯಲ್ಲಿ 50 ಕ್ಕೂ ಹೆಚ್ಚು ಮಹಿಳೆಯರಿಗೆ ಸ್ವ ಉದ್ಯೋಗವನ್ನು ಹಾಗೂ ಸೌರ ವಿದ್ಯುತ್ ಆಧಾರಿತ ಸ್ವ-ಉದ್ಯೋಗದ ಮೂಲಕ ಜೀವನೋಪಾಯ ವ್ಯವಸ್ಥೆಗಳನ್ನು ಕಲ್ಪಿಸುವಲ್ಲಿ ಗಮನಾರ್ಹ ಕೆಲಸಗಳನ್ನು ಮಾಡುತ್ತಿದೆ. ಕಳೆದ ವರ್ಷ ವಿಶೇಷ ಚೇತನರಿಗಾಗಿ  ಬೆಳಗಾವಿಯಲ್ಲಿ ಉದ್ಯೋಗ ಮೇಳ ಆಯೋಜಿಸಿ, ಈಗ ಜಿಲ್ಲೆಯಾದ್ಯಂತ 130ಕ್ಕೂ ಅಧಿಕ ವಿಶೇಷಚೇತನರು ಸೌರ ಉದ್ಯಮಿಗಳಾಗಿ ಹೊರಹೊಮ್ಮಿದ್ದಾರೆ.

ಸೌರ ಸ್ವ-ಉದ್ಯೋಗ ಮಹಿಳೆಯರಿಗೆ ಬದುಕಿಗೆ ಆಸರೆಯಾಗಲಿದೆ.ಆರೋಗ್ಯ, ಜೀವನೋಪಾಯ ಮತ್ತು ಮಕ್ಕಳಿಗೆ ಶಿಕ್ಷಣ ಒದಗಿಸಲು ಬಹಳಷ್ಟು ಸಹಕಾರಿಯಾಗಲಿದೆ. ಗ್ರಾಮೀಣ ಭಾಗದಲ್ಲಿ ಮಹಿಳೆಯರಿಗೆ ಸ್ವ ಉದ್ಯೋಗಕ್ಕೆ ಅನುಕೂಲವಾಗುವಂತೆ ಹೈನುಗಾರಿಕೆಯಲ್ಲಿ ಸೌರಚಾಲಿತ ಹಾಲುಕರೆಯುವ ಯಂತ್ರ ಆವಿಷ್ಕರಿಸಲಾಗಿದೆ. ಅಲ್ಲದೆ, ಸ್ವಂತ ದುಡಿಮೆಯಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರಿಗೆ ಸೋಲಾರ್‌ ಆಶಾಕಿರಣಗಳಾಗಿವೆ. ಸಣ್ಣ ಸಣ್ಣ ಗೂಡಂಗಂಡಿ ವ್ಯಾಪಾರಿಗಳು, ಹೂವಿನ ವ್ಯಾಪಾರಿಗಳ ತಾತ್ಕಾಲಿಕ ಅಂಗಡಿಗಳಿಗೆ ವಿದ್ಯುತ್‌ ಸಂಪರ್ಕ ನೀಡುವುದಿಲ್ಲ. ಅಂತಹ ಚಿಕ್ಕ ಘಟಕಗಳಿಗೆ ಸೋಲಾರ್‌ ಘಟಕಗಳನ್ನು ಅಳವಡಿಸಿ ವ್ಯಾಪಾರ ವ್ಯವಹಾರವನ್ನು ದ್ವಿಗುಣ ಮಾಡಿಕೊಂಡ ಉದಾಹರಣೆಗಳಿವೆ. ಸೌರ ಚಾಲಿತ ಹೊಲಿಗೆ ಯಂತ್ರ  ಅಳವಡಿಸಿಕೊಂಡು ಮಹಿಳೆಯರು ಸ್ವಾವಲಂಬನೆಯ ಹಾದಿ ತುಳಿದಿದ್ದಾರೆ.

ಸೆಲ್ಕೋ ತಂತ್ರಜ್ಞಾನದಿಂದಾಗಿ ಸುಲಭದಲ್ಲಿ ಕಮ್ಮಾರಿಕೆ ಮಾಡಲು ಸೌರ ಚಾಲಿತ ಉಲುಮೆ ಯಂತ್ರ, ಕುಂಬಾರಿಕೆ ಮಾಡಲು ತಿಗರಿಗಳನ್ನು ಅಳವಡಿಸಲಾಗುತ್ತದೆ, ಹೀಗೇ ಹಲವು ಉಪಕರಣಗಳು ಸೋಲಾರ್‌ ನಿಂದ ಚಾಲೂ ಮಾಡಬಹುದಾಗಿದೆ.

ಬೆಳಗಾವಿಯಲ್ಲಿ  ನಡೆದ ಈ ಕಾರ್ಯಾಗಾರವನ್ನು ಬೆಳಗಾವಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ್ ಚಾಲನೆ ನೀಡಿದರು. ಸೆಲ್ಕೋ ಫೌಂಡೇಶನ್ ವ್ಯವಸ್ಥಾಪಕ ನಿದೇರ್ಶಕ ವಿನಾಯಕ ಹೆಗಡೆ ಸೇರಿದಂತೆ ಫೌಂಡೇಶನ್ ಪದಾಧಿಕಾರಿಗಳು, ಜಿಲ್ಲಾ ಪಂಚಾಯತ್ ಅಧಿಕಾರಿಗಳು ಮೇಳದಲ್ಲಿ ಪಾಲ್ಗೊಂಡಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

14 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

15 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

15 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

16 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

16 hours ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

16 hours ago