ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

July 26, 2025
10:25 PM

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಪ್ತು ನಿಗಮದ ವತಿಯಿಂದ ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ  ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ರೈತರನ್ನು ಉದ್ಯಮಿಗಳಾಗಿ ಸ್ವಾವಲಂಬಿಗೊಳಿಸಲು, ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ಮಾರುಕಟ್ಟೆ ವಿಸ್ತರಣೆಗೆ ಅನುಕೂಲವಾಗಲು ಯೋಜನೆ ಸಹಕಾರಿಯಾಗಿದೆ.

ಕೃಷಿ ಸಮಾಜದ ಜಿಲ್ಲಾಧ್ಯಕ್ಷ ವೀರ ಗೋಪಾಲ್, ಕಾರ್ಯಾಗಾರದ ಮೂಲಕ ರೈತರಿಗೆ  ಕೃಷಿ ಉತ್ಪನ್ನಗಳ ಸಂಸ್ಕರಣೆ  ಹಾಗೂ ಕೃಷಿ ಸೌಲಭ್ಯಗಳ ಕುರಿತು ಉಪಯುಕ್ತ ಮಾಹಿತಿ  ನೀಡಲಾಯಿತು  ಎಂದರು. ಕಾರ್ಯಾಗಾರದ ಮೂಲಕ 500 ಜನ ರೈತರಿಗೆ ಯೋಜನೆಯ ಕುರಿತು ಅರಿವು ಮೂಡಿಸಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ  ಕೆ.ರಾಜು, ಜಂಟಿ ಕೃಷಿ ನಿರ್ದೇಶಕರಾದ ಅಂಬಿಕಾ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷ ನಟರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ರೈತರು ಕೃಷಿ ಉತ್ಪನ್ನಗಳನ್ನು ವಿನೂತನವಾಗಿ ಬಳಕೆ ಮಾಡಿಕೊಂಡು  ರೈತ ಉದ್ಯಮಿಗಳಾಗಿ ಹೊರಹೊಮ್ಮಲು  ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ  ಯೋಜನೆ ಸಹಕಾರಿಯಾಗಲಿದೆ ಎಂದು ರೈತ ಮುಖಂಡ ಸಿ. ಪುಟ್ಟಸ್ವಾಮಿ ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ
March 11, 2026
7:19 AM
by: ದ ರೂರಲ್ ಮಿರರ್.ಕಾಂ
ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್
March 11, 2026
7:08 AM
by: ದ ರೂರಲ್ ಮಿರರ್.ಕಾಂ
ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ
March 10, 2026
11:25 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ
March 10, 2026
10:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror